‘ದಿ ಕೇರಳ ಸ್ಟೋರಿ’ ನಾನು ನೋಡಿದ ಬೆಸ್ಟ್​ ಸಿನಿಮಾ: ಕಾರಣ ನೀಡಿದ ರಾಮ್​ ಗೋಪಾಲ್​ ವರ್ಮಾ

ಬಾಲಿವುಡ್​ ನಟಿ ಅದಾ ಶರ್ಮಾ ಅಭಿನಯದ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಸಿಕ್ಕಾಪಟ್ಟೆ ಟೀಕೆ ವ್ಯಕ್ತವಾಗಿತ್ತು. ವಿವಾದಾತ್ಮಕ ಕಥಾಹಂದರ ಹೊಂದಿದ್ದ ಆ ಚಿತ್ರಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಸಖತ್​ ಕಲೆಕ್ಷನ್​ ಆಗಿತ್ತು. ಕೆಲವು ನಟರು ವಿರೋಧಿಸಿದ್ದ ಸಿನಿಮಾವನ್ನು ಈಗ ರಾಮ್​ ಗೋಪಾಲ್​ ವರ್ಮಾ ಅವರು ಹೊಗಳಿದ್ದಾರೆ. ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.

‘ದಿ ಕೇರಳ ಸ್ಟೋರಿ’ ನಾನು ನೋಡಿದ ಬೆಸ್ಟ್​ ಸಿನಿಮಾ: ಕಾರಣ ನೀಡಿದ ರಾಮ್​ ಗೋಪಾಲ್​ ವರ್ಮಾ
ಆರ್​ಜಿವಿ, ಅದಾ ಶರ್ಮಾ
Follow us
|

Updated on: Aug 04, 2024 | 4:01 PM

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ಯಾವಾಗಲೂ ಡಿಫರೆಂಟ್​ ಆಗಿಯೂ ಆಲೋಚಿಸುತ್ತಾರೆ. ಅವರ ಹೇಳಿಕೆಗಳು ಕೂಡ ಬೇರೆಯವರಿಗಿಂತ ಭಿನ್ನವಾಗಿ ಇರುತ್ತವೆ. ಈಗ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. 2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಬಗ್ಗೆ ಅನೇಕ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸಿದ್ದರು. ನಸೀರುದ್ದೀನ್​ ಶಾ, ಕಮಲ್​ ಹಾಸನ್​ ಮುಂತಾದವರು ಈ ಚಿತ್ರವನ್ನು ಟೀಕಿಸಿದ್ದರು. ಆದರೆ ಈಗ ರಾಮ್​ ಗೋಪಾಲ್​ ವರ್ಮಾ ಅವರು ಈ ಸಿನಿಮಾಗೆ ಮೆಚ್ಚಿಗೆ ಸೂಚಿಸಿದ್ದಾರೆ.

‘ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ನನಗೆ ಬಹಳ ಖುಷಿ ಇದೆ. ಸಾಕಷ್ಟು ವರ್ಷಗಳಿಂದ ಈಚೆಗೆ ನಾನು ನೋಡಿ ಅತ್ಯುತ್ತಮ ಸಿನಿಮಾಗಳಲ್ಲಿ ಇದು ಕೂಡ ಒಂದು. ಸಿನಿಮಾ ವೀಕ್ಷಿಸಿದ ಬಳಿಕ ನಾನು ನಿರ್ದೇಶಕರು, ನಿರ್ಮಾಪಕರು ಹಾಗೂ ನಟಿ ಅದಾ ಶರ್ಮಾ ಜೊತೆ ಮಾತನಾಡಿದೆ. ಆದರೆ ಅದೇ ತಂಡದವರು ಮಾಡಿದ ಇನ್ನೊಂದು ಸಿನಿಮಾ ಬಿಡುಗಡೆ ಆಗಿ ಹೋಯಿತು. ನನಗೆ ಅದರ ಬಗ್ಗೆ ಗೊತ್ತೇ ಆಗಲಿಲ್ಲ. ಎಲ್ಲರೂ ಆ ಸಿನಿಮಾವನ್ನು ನಿರ್ಲಕ್ಷಿಸಿದರು. ಇದನ್ನು ನಾವು ವಿವರಿಸುವುದು ಹೇಗೆ’ ಎಂದಿದ್ದಾರೆ ರಾಮ್​ ಗೋಪಾಲ್​ ವರ್ಮಾ.

ಹಲವು ದಿನಗಳ ಕಾಲ ಪ್ರದರ್ಶನಗೊಂಡ ‘ದಿ ಕೇರಳ ಸ್ಟೋರಿ’ ಸಿನಿಮಾ ಅಂದಾಜು 300 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಇಂಥ ಸಿನಿಮಾಗಳು ಗೆಲ್ಲುವುದು ಅಪಾಯಕಾರಿ ಟ್ರೆಂಡ್​ ಎಂದು ಬಾಲಿವುಡ್​ನ ಹಿರಿಯ ನಟ ನಸೀರುದ್ದೀನ್ ಶಾ ಹೇಳಿದ್ದರು. ಅಂಥ ಸಿನಿಮಾ ರಾಮ್ ಗೋಪಾಲ್​ ವರ್ಮಾ ಅವರಿಗೆ ತುಂಬ ಇಷ್ಟ ಆಗಿದೆ. ಜನರು ಸಿನಿಮಾಗಳನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದರ ಬಗ್ಗೆ ಆರ್​ಜಿವಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಪ್ರಕರಣ ಉಲ್ಲೇಖಿಸಿ ಸ್ಟಾರ್ಸ್​ ಆರಾಧನ ಸಂಸ್ಕೃತಿಯನ್ನು ಟೀಕಿಸಿದ ರಾಮ್​ ಗೋಪಾಲ್ ವರ್ಮಾ

ಈ ಬಗ್ಗೆ ಎ.ಆರ್​. ರೆಹಮಾನ್​ ಅವರು ಹೇಳಿದ್ದ ವಿಷಯವನ್ನು ರಾಮ್​ ಗೋಪಾಲ್​ ವರ್ಮಾ ನೆನಪು ಮಾಡಿಕೊಂಡಿದ್ದಾರೆ. ‘ತುಂಬ ದಿನಗಳ ಹಿಂದೆ ಎ.ಆರ್​. ರೆಹಮಾನ್​ ನನಗೆ ಈ ಮಾತನ್ನು ಹೇಳಿದ್ದರು. ವರ್ಷದ ಅತಿ ದೊಡ್ಡ ಹಿಟ್​ ಆಗಲಿದೆ ಎಂದುಕೊಂಡು ಮಾಡಿದ ಟ್ಯೂನ್​ ಅನ್ನು ಜನರು ಕಡೆಗಣಿಸುತ್ತಾರೆ. ಅದನ್ನು ಜನರು ಕೆಟ್ಟದ್ದು ಎಂದು ಕೂಡ ಹೇಳಲ್ಲ. ಅಂಥದ್ದೊಂದು ಹಾಡು ಇಲ್ಲವೇ ಇಲ್ಲ ಎಂಬಂತೆ ವರ್ತಿಸುತ್ತಾರೆ. ಇದಕ್ಕೆಲ್ಲ ಹಲವು ಉದಾಹರಣೆ ಇದೆ. ನನ್ನದೇ ತೆಗೆದುಕೊಳ್ಳಿ. ನನ್ನ ಎಲ್ಲ ಹಿಟ್​ ಸಿನಿಮಾಗಳು ಆಕಸ್ಮಿಕವಾಗಿ ಆಗಿದ್ದು. ಫ್ಲಾಪ್​ಗಳೆಲ್ಲ ಉದ್ದೇಶಪೂರಕ’ ಎಂದಿದ್ದಾರೆ ರಾಮ್​ ಗೋಪಾಲ್​ ವರ್ಮಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್