AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ನಾನು ನೋಡಿದ ಬೆಸ್ಟ್​ ಸಿನಿಮಾ: ಕಾರಣ ನೀಡಿದ ರಾಮ್​ ಗೋಪಾಲ್​ ವರ್ಮಾ

ಬಾಲಿವುಡ್​ ನಟಿ ಅದಾ ಶರ್ಮಾ ಅಭಿನಯದ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಸಿಕ್ಕಾಪಟ್ಟೆ ಟೀಕೆ ವ್ಯಕ್ತವಾಗಿತ್ತು. ವಿವಾದಾತ್ಮಕ ಕಥಾಹಂದರ ಹೊಂದಿದ್ದ ಆ ಚಿತ್ರಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಸಖತ್​ ಕಲೆಕ್ಷನ್​ ಆಗಿತ್ತು. ಕೆಲವು ನಟರು ವಿರೋಧಿಸಿದ್ದ ಸಿನಿಮಾವನ್ನು ಈಗ ರಾಮ್​ ಗೋಪಾಲ್​ ವರ್ಮಾ ಅವರು ಹೊಗಳಿದ್ದಾರೆ. ಆ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.

‘ದಿ ಕೇರಳ ಸ್ಟೋರಿ’ ನಾನು ನೋಡಿದ ಬೆಸ್ಟ್​ ಸಿನಿಮಾ: ಕಾರಣ ನೀಡಿದ ರಾಮ್​ ಗೋಪಾಲ್​ ವರ್ಮಾ
ಆರ್​ಜಿವಿ, ಅದಾ ಶರ್ಮಾ
ಮದನ್​ ಕುಮಾರ್​
|

Updated on: Aug 04, 2024 | 4:01 PM

Share

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ಯಾವಾಗಲೂ ಡಿಫರೆಂಟ್​ ಆಗಿಯೂ ಆಲೋಚಿಸುತ್ತಾರೆ. ಅವರ ಹೇಳಿಕೆಗಳು ಕೂಡ ಬೇರೆಯವರಿಗಿಂತ ಭಿನ್ನವಾಗಿ ಇರುತ್ತವೆ. ಈಗ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. 2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಬಗ್ಗೆ ಅನೇಕ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸಿದ್ದರು. ನಸೀರುದ್ದೀನ್​ ಶಾ, ಕಮಲ್​ ಹಾಸನ್​ ಮುಂತಾದವರು ಈ ಚಿತ್ರವನ್ನು ಟೀಕಿಸಿದ್ದರು. ಆದರೆ ಈಗ ರಾಮ್​ ಗೋಪಾಲ್​ ವರ್ಮಾ ಅವರು ಈ ಸಿನಿಮಾಗೆ ಮೆಚ್ಚಿಗೆ ಸೂಚಿಸಿದ್ದಾರೆ.

‘ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ನನಗೆ ಬಹಳ ಖುಷಿ ಇದೆ. ಸಾಕಷ್ಟು ವರ್ಷಗಳಿಂದ ಈಚೆಗೆ ನಾನು ನೋಡಿ ಅತ್ಯುತ್ತಮ ಸಿನಿಮಾಗಳಲ್ಲಿ ಇದು ಕೂಡ ಒಂದು. ಸಿನಿಮಾ ವೀಕ್ಷಿಸಿದ ಬಳಿಕ ನಾನು ನಿರ್ದೇಶಕರು, ನಿರ್ಮಾಪಕರು ಹಾಗೂ ನಟಿ ಅದಾ ಶರ್ಮಾ ಜೊತೆ ಮಾತನಾಡಿದೆ. ಆದರೆ ಅದೇ ತಂಡದವರು ಮಾಡಿದ ಇನ್ನೊಂದು ಸಿನಿಮಾ ಬಿಡುಗಡೆ ಆಗಿ ಹೋಯಿತು. ನನಗೆ ಅದರ ಬಗ್ಗೆ ಗೊತ್ತೇ ಆಗಲಿಲ್ಲ. ಎಲ್ಲರೂ ಆ ಸಿನಿಮಾವನ್ನು ನಿರ್ಲಕ್ಷಿಸಿದರು. ಇದನ್ನು ನಾವು ವಿವರಿಸುವುದು ಹೇಗೆ’ ಎಂದಿದ್ದಾರೆ ರಾಮ್​ ಗೋಪಾಲ್​ ವರ್ಮಾ.

ಹಲವು ದಿನಗಳ ಕಾಲ ಪ್ರದರ್ಶನಗೊಂಡ ‘ದಿ ಕೇರಳ ಸ್ಟೋರಿ’ ಸಿನಿಮಾ ಅಂದಾಜು 300 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಇಂಥ ಸಿನಿಮಾಗಳು ಗೆಲ್ಲುವುದು ಅಪಾಯಕಾರಿ ಟ್ರೆಂಡ್​ ಎಂದು ಬಾಲಿವುಡ್​ನ ಹಿರಿಯ ನಟ ನಸೀರುದ್ದೀನ್ ಶಾ ಹೇಳಿದ್ದರು. ಅಂಥ ಸಿನಿಮಾ ರಾಮ್ ಗೋಪಾಲ್​ ವರ್ಮಾ ಅವರಿಗೆ ತುಂಬ ಇಷ್ಟ ಆಗಿದೆ. ಜನರು ಸಿನಿಮಾಗಳನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದರ ಬಗ್ಗೆ ಆರ್​ಜಿವಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಪ್ರಕರಣ ಉಲ್ಲೇಖಿಸಿ ಸ್ಟಾರ್ಸ್​ ಆರಾಧನ ಸಂಸ್ಕೃತಿಯನ್ನು ಟೀಕಿಸಿದ ರಾಮ್​ ಗೋಪಾಲ್ ವರ್ಮಾ

ಈ ಬಗ್ಗೆ ಎ.ಆರ್​. ರೆಹಮಾನ್​ ಅವರು ಹೇಳಿದ್ದ ವಿಷಯವನ್ನು ರಾಮ್​ ಗೋಪಾಲ್​ ವರ್ಮಾ ನೆನಪು ಮಾಡಿಕೊಂಡಿದ್ದಾರೆ. ‘ತುಂಬ ದಿನಗಳ ಹಿಂದೆ ಎ.ಆರ್​. ರೆಹಮಾನ್​ ನನಗೆ ಈ ಮಾತನ್ನು ಹೇಳಿದ್ದರು. ವರ್ಷದ ಅತಿ ದೊಡ್ಡ ಹಿಟ್​ ಆಗಲಿದೆ ಎಂದುಕೊಂಡು ಮಾಡಿದ ಟ್ಯೂನ್​ ಅನ್ನು ಜನರು ಕಡೆಗಣಿಸುತ್ತಾರೆ. ಅದನ್ನು ಜನರು ಕೆಟ್ಟದ್ದು ಎಂದು ಕೂಡ ಹೇಳಲ್ಲ. ಅಂಥದ್ದೊಂದು ಹಾಡು ಇಲ್ಲವೇ ಇಲ್ಲ ಎಂಬಂತೆ ವರ್ತಿಸುತ್ತಾರೆ. ಇದಕ್ಕೆಲ್ಲ ಹಲವು ಉದಾಹರಣೆ ಇದೆ. ನನ್ನದೇ ತೆಗೆದುಕೊಳ್ಳಿ. ನನ್ನ ಎಲ್ಲ ಹಿಟ್​ ಸಿನಿಮಾಗಳು ಆಕಸ್ಮಿಕವಾಗಿ ಆಗಿದ್ದು. ಫ್ಲಾಪ್​ಗಳೆಲ್ಲ ಉದ್ದೇಶಪೂರಕ’ ಎಂದಿದ್ದಾರೆ ರಾಮ್​ ಗೋಪಾಲ್​ ವರ್ಮಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ