AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಹಿಂದಿ ಚಿತ್ರಗಳ ಸೋಲಿನ ಎಫೆಕ್ಟ್​: ಅಕ್ಷಯ್​ ಕುಮಾರ್​ ಸಂಬಳಕ್ಕೆ ಬೀಳಲಿದೆ ಕತ್ತರಿ

Akshay Kumar Remuneration: ಅಕ್ಷಯ್ ಕುಮಾರ್​ ನಟನೆಯ ಸಿನಿಮಾಗಳಿಗೆ ಹಣ ಹೂಡಿದರೆ ಮಿನಿಮಮ್​ ಲಾಭ ಗ್ಯಾರಂಟಿ ಎಂಬ ಮಾತು ಒಂದು ಕಾಲದಲ್ಲಿ ಚಾಲ್ತಿಯಲ್ಲಿ ಇತ್ತು. ಆದರೆ ಈಗ ಕಾಲ ಬದಲಾಗಿದೆ.

Akshay Kumar: ಹಿಂದಿ ಚಿತ್ರಗಳ ಸೋಲಿನ ಎಫೆಕ್ಟ್​: ಅಕ್ಷಯ್​ ಕುಮಾರ್​ ಸಂಬಳಕ್ಕೆ ಬೀಳಲಿದೆ ಕತ್ತರಿ
ಅಕ್ಷಯ್ ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 13, 2022 | 6:34 PM

ಈಗಂತೂ ಹಿಂದಿ ಚಿತ್ರರಂಗಕ್ಕೆ ಶುಭಕಾಲ ಅಲ್ಲ. ಬಾಲಿವುಡ್​ ಸಿನಿಮಾಗಳು ಸತತವಾಗಿ ಸೋಲುತ್ತಿವೆ. ಅದರಲ್ಲೂ ನಟ ಅಕ್ಷಯ್​ ಕುಮಾರ್​ (Akshay Kumar) ಅವರು 2022ರಲ್ಲಿ ಬ್ಯಾಕ್​ ಟು ಬ್ಯಾಕ್​ ಸೋಲು ಅನುಭವಿಸಿದ್ದಾರೆ. ಈ ವರ್ಷ ಗೆದ್ದಿರುವ ಬಾಲಿವುಡ್ (Bollywood)​ ಸಿನಿಮಾಗಳ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ. ಇದರಿಂದಾಗಿ ಎಲ್ಲ ಸ್ಟಾರ್​ ನಟರು ತಮ್ಮ ಭವಿಷ್ಯದ ಬಗ್ಗೆ ಆಲೋಚನೆ ಮಾಡಬೇಕಾದ ಪರಿಸ್ಥಿತಿ ಇದೆ. ಈ ಬಗ್ಗೆ ಅಕ್ಷಯ್​ ಕುಮಾರ್​ ಮಾತನಾಡಿದ್ದಾರೆ. ತಮ್ಮ ಸಂಬಳದಲ್ಲಿ ಶೇಕಡ 30ರಿಂದ ಶೇಕಡ 40ರವರೆಗೆ ಕಡಿಮೆ ಮಾಡಿಕೊಳ್ಳುವ ಬಗ್ಗೆ ಅವರು ಆಲೋಚಿಸಿದ್ದಾರೆ. ಈ ಕುರಿತು ‘ಹಿಂದುಸ್ತಾನ್​ ಟೈಮ್ಸ್​’ ವರದಿ ಮಾಡಿದೆ. ಸಂಭಾವನೆ (Akshay Kumar Remuneration) ಕಡಿತ ಮಾತ್ರವಲ್ಲದೇ ಅನೇಕ ವಿಚಾರಗಳ ಕುರಿತು ಅಕ್ಷಯ್​ ಕುಮಾರ್​ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಬಾಲಿವುಡ್​ ಸಿನಿಮಾಗಳು ನಷ್ಟ ಅನುಭವಿಸುತ್ತಿರುವುದಕ್ಕೆ ಹಲವು ಕಾರಣಗಳು ಇವೆ. ಸಿನಿಮಾ ನಿರ್ಮಾಣದ ವೆಚ್ಚ ಮಿತಿ ಮೀರಿರುವುದು ಕೂಡ ನಷ್ಟ ಹೆಚ್ಚಲು ಕಾರಣ ಆಗಿದೆ. ಈ ಬಗ್ಗೆ ಅಕ್ಷಯ್​ ಕುಮಾರ್​ ಮಾತನಾಡಿದ್ದಾರೆ. ಬಜೆಟ್​ ಕಡಿಮೆ ಮಾಡಬೇಕು ಎಂದರೆ ಸ್ಟಾರ್​ ಕಲಾವಿದರ ಸಂಭಾವನೆ ಕೂಡ ತಗ್ಗಬೇಕು ಎಂದು ಅವರು ಹೇಳಿದ್ದಾರೆ.

‘ನನ್ನ ಸಂಭಾವನೆಯಲ್ಲಿ ಶೇಕಡ 30ರಿಂದ ಶೇಕಡ 40ರಷ್ಟು ಕಡಿಮೆ ಮಾಡಲು ಬಯಸಿದ್ದೇನೆ. ಕಲಾವಿದರು ಮಾತ್ರವಲ್ಲದೇ ನಿರ್ಮಾಪಕರು ಮತ್ತು ಚಿತ್ರಮಂದಿರದವರು ಕೂಡ ಈ ಬಗ್ಗೆ ಆಲೋಚನೆ ಮಾಡಬೇಕಿದೆ. ಇದು ಆರ್ಥಿಕ ಹಿಂಜರಿತದ ಸಮಯ. ಮನರಂಜನೆಗಾಗಿ ಖರ್ಚು ಮಾಡಲು ಜನರ ಬಳಿ ಇರುವುದು ಕಡಿಮೆ ಹಣ. ಹೆಚ್ಚು ಕರ್ಚು ಮಾಡಲು ಸಾಧ್ಯವಿಲ್ಲ. ಎಲ್ಲದೂ ಬದಲಾಗಬೇಕಿದೆ’ ಎಂದು ಅಕ್ಷಯ್​ ಕುಮಾರ್​ ಹೇಳಿರುವುದು ವರದಿ ಆಗಿದೆ.

ಇದನ್ನೂ ಓದಿ
Image
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Image
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

ಅಕ್ಷಯ್ ಕುಮಾರ್​ ಸಿನಿಮಾಗಳಿಗೆ ಹಣ ಹೂಡಿದರೆ ಮಿನಿಮಮ್​ ಲಾಭ ಗ್ಯಾರಂಟಿ ಎಂಬ ಮಾತು ಒಂದು ಕಾಲದಲ್ಲಿ ಚಾಲ್ತಿಯಲ್ಲಿ ಇತ್ತು. ಆದರೆ ಈಗ ಕಾಲ ಬದಲಾಗಿದೆ. 2023ರಲ್ಲಿ ಅಕ್ಷಯ್​ ಕುಮಾರ್​ ಅವರು ಪದೇಪದೇ ಮುಗ್ಗರಿಸಿದ್ದಾರೆ. ‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’, ‘ರಕ್ಷಾ ಬಂಧನ್​’, ‘ರಾಮ್​ ಸೇತು’ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲು ವಿಫಲವಾಗಿದೆ. ಬಾಲಿವುಡ್​ನಲ್ಲಿ ಸ್ಟಾರ್​ ನಟರ ಸಿನಿಮಾ ಎಂದರೆ 100ರಿಂದ 150 ಕೋಟಿ ರೂಪಾಯಿ ಗಳಿಕೆ ಮಾಡಲೇಬೇಕು. ಈ ವಿಚಾರದಲ್ಲಿ ಅಕ್ಷಯ್​ ಕುಮಾರ್​ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಸೋಲುತ್ತಿವೆ.

‘ಡಿಫರೆಂಟ್​ ಆಗಿರುವುದನ್ನು ಪ್ರೇಕ್ಷಕರು ಬಯಸುತ್ತಿದ್ದಾರೆ. ಇದರ ಬಗ್ಗೆ ನಾವು ಆಲೋಚಿಸಬೇಕು. ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂದರೆ ಅದು ನಮ್ಮ ತಪ್ಪು ಹೊರತು ಪ್ರೇಕ್ಷಕರ ತಪ್ಪಲ್ಲ. ಜನರು ಬಯಸಿದ್ದನ್ನು ನಾವು ನೀಡಬೇಕು’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:00 pm, Sun, 13 November 22

ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ