AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?
ರಿಷಬ್​-ಅಕ್ಷಯ್
TV9 Web
| Edited By: |

Updated on: Oct 25, 2022 | 7:49 PM

Share

ಇತ್ತೀಚೆಗೆ ಬಾಲಿವುಡ್​ನವರು ಹಾಕುತ್ತಿರುವ ಶ್ರಮವೆಲ್ಲವೂ ವ್ಯರ್ಥವಾಗುತ್ತಿದೆ. ಈ ವರ್ಷ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಚಿತ್ರಗಳ ಲೆಕ್ಕ ಹಾಕಲು ಹೋದರೆ ಒಂದು ಕೈನ ಬೆರಳುಗಳು ಮಾತ್ರ ಸಾಕು. ಈ ಮಧ್ಯೆ ಹಿಂದಿಗೆ ಡಬ್ ಆಗಿ ತೆರೆ ಕಾಣುತ್ತಿರುವ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿವೆ. ಇಂದು (ಅಕ್ಟೋಬರ್ 25) ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ (Ram Setu) ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾಗಳು ರಿಲೀಸ್ ಆಗಿವೆ. ಈ ಚಿತ್ರಗಳಿಗೆ ಒಳ್ಳೆಯ ವಿಮರ್ಶೆ ಸಿಗುತ್ತಿಲ್ಲ. ಹೀಗಾಗಿ, ‘ಕಾಂತಾರ’ (Kantara Movie) ಸಿನಿಮಾಗೆ ಇದು ಪ್ಲಸ್ ಆಗಲಿದೆ.

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ. ಈ ವಾರ ದೀಪಾವಳಿ ಇದೆ. ಹೀಗಾಗಿ ಸಾಲು ಸಾಲು ರಜೆಗಳಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ.

‘ರಾಮ್ ಸೇತು’ ಹಾಗೂ ‘ಥ್ಯಾಂಕ್ ಗಾಡ್’ ಚಿತ್ರದಿಂದ ‘ಕಾಂತಾರ’ ಕಲೆಕ್ಷನ್​ಗೆ ಹೊಡೆತ ಉಂಟಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈ ಎರಡೂ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ. ‘ರಾಮ್ ಸೇತು’ ಚಿತ್ರದಲ್ಲಿ ಕಥೆಯ ನರೇಷನ್ ಉತ್ತಮವಾಗಿಲ್ಲ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ‘ಥ್ಯಾಂಕ್ ಗಾಡ್’ ಚಿತ್ರ ಕೂಡ ಸಪ್ಪೆಯಾಗಿದೆ ಎಂಬುದು ವಿಮರ್ಶಕರ ಅಭಿಪ್ರಾಯ. ಈ ಎಲ್ಲಾ ಕಾರಣದಿಂದ ‘ಕಾಂತಾರ’ ಈ ವಾರವೂ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ

ಇದನ್ನೂ ಓದಿ: 3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

‘ಕಾಂತಾರ’ ಚಿತ್ರಕ್ಕೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ಇದರಿಂದ ಚಿತ್ರಕ್ಕೆ ಹೊಸ ಬಲ ಸಿಕ್ಕಿದೆ. ಸ್ಟಾರ್ ನಟರ ಎರಡು ಚಿತ್ರಗಳು ರಿಲೀಸ್ ಆಗಿರುವುದರಿಂದ ‘ಕಾಂತಾರ’ ಚಿತ್ರಕ್ಕೆ ಸಿಕ್ಕ ಥಿಯೇಟರ್​ಗಳ ಸಂಖ್ಯೆ ಕಡಿಮೆ ಆಗಿತ್ತು. ಎರಡೂ ಚಿತ್ರಕ್ಕೆ ಸಾಧಾರಣ ವಿಮರ್ಶೆ ಸಿಕ್ಕಿರುವುದರಿಂದ ‘ಕಾಂತಾರ’ ಶೋಗಳ ಸಂಖ್ಯೆ ಮತ್ತೆ ಹೆಚ್ಚುವ ನಿರೀಕ್ಷೆ ಇದೆ.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ