AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?
ರಿಷಬ್​-ಅಕ್ಷಯ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 25, 2022 | 7:49 PM

Share

ಇತ್ತೀಚೆಗೆ ಬಾಲಿವುಡ್​ನವರು ಹಾಕುತ್ತಿರುವ ಶ್ರಮವೆಲ್ಲವೂ ವ್ಯರ್ಥವಾಗುತ್ತಿದೆ. ಈ ವರ್ಷ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಚಿತ್ರಗಳ ಲೆಕ್ಕ ಹಾಕಲು ಹೋದರೆ ಒಂದು ಕೈನ ಬೆರಳುಗಳು ಮಾತ್ರ ಸಾಕು. ಈ ಮಧ್ಯೆ ಹಿಂದಿಗೆ ಡಬ್ ಆಗಿ ತೆರೆ ಕಾಣುತ್ತಿರುವ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿವೆ. ಇಂದು (ಅಕ್ಟೋಬರ್ 25) ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ (Ram Setu) ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾಗಳು ರಿಲೀಸ್ ಆಗಿವೆ. ಈ ಚಿತ್ರಗಳಿಗೆ ಒಳ್ಳೆಯ ವಿಮರ್ಶೆ ಸಿಗುತ್ತಿಲ್ಲ. ಹೀಗಾಗಿ, ‘ಕಾಂತಾರ’ (Kantara Movie) ಸಿನಿಮಾಗೆ ಇದು ಪ್ಲಸ್ ಆಗಲಿದೆ.

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ. ಈ ವಾರ ದೀಪಾವಳಿ ಇದೆ. ಹೀಗಾಗಿ ಸಾಲು ಸಾಲು ರಜೆಗಳಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ.

‘ರಾಮ್ ಸೇತು’ ಹಾಗೂ ‘ಥ್ಯಾಂಕ್ ಗಾಡ್’ ಚಿತ್ರದಿಂದ ‘ಕಾಂತಾರ’ ಕಲೆಕ್ಷನ್​ಗೆ ಹೊಡೆತ ಉಂಟಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈ ಎರಡೂ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ. ‘ರಾಮ್ ಸೇತು’ ಚಿತ್ರದಲ್ಲಿ ಕಥೆಯ ನರೇಷನ್ ಉತ್ತಮವಾಗಿಲ್ಲ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ‘ಥ್ಯಾಂಕ್ ಗಾಡ್’ ಚಿತ್ರ ಕೂಡ ಸಪ್ಪೆಯಾಗಿದೆ ಎಂಬುದು ವಿಮರ್ಶಕರ ಅಭಿಪ್ರಾಯ. ಈ ಎಲ್ಲಾ ಕಾರಣದಿಂದ ‘ಕಾಂತಾರ’ ಈ ವಾರವೂ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ

ಇದನ್ನೂ ಓದಿ: 3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

‘ಕಾಂತಾರ’ ಚಿತ್ರಕ್ಕೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ಇದರಿಂದ ಚಿತ್ರಕ್ಕೆ ಹೊಸ ಬಲ ಸಿಕ್ಕಿದೆ. ಸ್ಟಾರ್ ನಟರ ಎರಡು ಚಿತ್ರಗಳು ರಿಲೀಸ್ ಆಗಿರುವುದರಿಂದ ‘ಕಾಂತಾರ’ ಚಿತ್ರಕ್ಕೆ ಸಿಕ್ಕ ಥಿಯೇಟರ್​ಗಳ ಸಂಖ್ಯೆ ಕಡಿಮೆ ಆಗಿತ್ತು. ಎರಡೂ ಚಿತ್ರಕ್ಕೆ ಸಾಧಾರಣ ವಿಮರ್ಶೆ ಸಿಕ್ಕಿರುವುದರಿಂದ ‘ಕಾಂತಾರ’ ಶೋಗಳ ಸಂಖ್ಯೆ ಮತ್ತೆ ಹೆಚ್ಚುವ ನಿರೀಕ್ಷೆ ಇದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ