AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?
ರಿಷಬ್​-ಅಕ್ಷಯ್
TV9 Web
| Edited By: |

Updated on: Oct 25, 2022 | 7:49 PM

Share

ಇತ್ತೀಚೆಗೆ ಬಾಲಿವುಡ್​ನವರು ಹಾಕುತ್ತಿರುವ ಶ್ರಮವೆಲ್ಲವೂ ವ್ಯರ್ಥವಾಗುತ್ತಿದೆ. ಈ ವರ್ಷ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಚಿತ್ರಗಳ ಲೆಕ್ಕ ಹಾಕಲು ಹೋದರೆ ಒಂದು ಕೈನ ಬೆರಳುಗಳು ಮಾತ್ರ ಸಾಕು. ಈ ಮಧ್ಯೆ ಹಿಂದಿಗೆ ಡಬ್ ಆಗಿ ತೆರೆ ಕಾಣುತ್ತಿರುವ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿವೆ. ಇಂದು (ಅಕ್ಟೋಬರ್ 25) ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ (Ram Setu) ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾಗಳು ರಿಲೀಸ್ ಆಗಿವೆ. ಈ ಚಿತ್ರಗಳಿಗೆ ಒಳ್ಳೆಯ ವಿಮರ್ಶೆ ಸಿಗುತ್ತಿಲ್ಲ. ಹೀಗಾಗಿ, ‘ಕಾಂತಾರ’ (Kantara Movie) ಸಿನಿಮಾಗೆ ಇದು ಪ್ಲಸ್ ಆಗಲಿದೆ.

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ. ಈ ವಾರ ದೀಪಾವಳಿ ಇದೆ. ಹೀಗಾಗಿ ಸಾಲು ಸಾಲು ರಜೆಗಳಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ.

‘ರಾಮ್ ಸೇತು’ ಹಾಗೂ ‘ಥ್ಯಾಂಕ್ ಗಾಡ್’ ಚಿತ್ರದಿಂದ ‘ಕಾಂತಾರ’ ಕಲೆಕ್ಷನ್​ಗೆ ಹೊಡೆತ ಉಂಟಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈ ಎರಡೂ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ. ‘ರಾಮ್ ಸೇತು’ ಚಿತ್ರದಲ್ಲಿ ಕಥೆಯ ನರೇಷನ್ ಉತ್ತಮವಾಗಿಲ್ಲ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ‘ಥ್ಯಾಂಕ್ ಗಾಡ್’ ಚಿತ್ರ ಕೂಡ ಸಪ್ಪೆಯಾಗಿದೆ ಎಂಬುದು ವಿಮರ್ಶಕರ ಅಭಿಪ್ರಾಯ. ಈ ಎಲ್ಲಾ ಕಾರಣದಿಂದ ‘ಕಾಂತಾರ’ ಈ ವಾರವೂ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ

ಇದನ್ನೂ ಓದಿ: 3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

‘ಕಾಂತಾರ’ ಚಿತ್ರಕ್ಕೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ಇದರಿಂದ ಚಿತ್ರಕ್ಕೆ ಹೊಸ ಬಲ ಸಿಕ್ಕಿದೆ. ಸ್ಟಾರ್ ನಟರ ಎರಡು ಚಿತ್ರಗಳು ರಿಲೀಸ್ ಆಗಿರುವುದರಿಂದ ‘ಕಾಂತಾರ’ ಚಿತ್ರಕ್ಕೆ ಸಿಕ್ಕ ಥಿಯೇಟರ್​ಗಳ ಸಂಖ್ಯೆ ಕಡಿಮೆ ಆಗಿತ್ತು. ಎರಡೂ ಚಿತ್ರಕ್ಕೆ ಸಾಧಾರಣ ವಿಮರ್ಶೆ ಸಿಕ್ಕಿರುವುದರಿಂದ ‘ಕಾಂತಾರ’ ಶೋಗಳ ಸಂಖ್ಯೆ ಮತ್ತೆ ಹೆಚ್ಚುವ ನಿರೀಕ್ಷೆ ಇದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ