AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ.

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ಚಿತ್ರವನ್ನೂ ಮಣಿಸಲಿದೆ ‘ಕಾಂತಾರ’; ಏನಿದು ಲೆಕ್ಕಾಚಾರ?
ರಿಷಬ್​-ಅಕ್ಷಯ್
TV9 Web
| Edited By: |

Updated on: Oct 25, 2022 | 7:49 PM

Share

ಇತ್ತೀಚೆಗೆ ಬಾಲಿವುಡ್​ನವರು ಹಾಕುತ್ತಿರುವ ಶ್ರಮವೆಲ್ಲವೂ ವ್ಯರ್ಥವಾಗುತ್ತಿದೆ. ಈ ವರ್ಷ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಚಿತ್ರಗಳ ಲೆಕ್ಕ ಹಾಕಲು ಹೋದರೆ ಒಂದು ಕೈನ ಬೆರಳುಗಳು ಮಾತ್ರ ಸಾಕು. ಈ ಮಧ್ಯೆ ಹಿಂದಿಗೆ ಡಬ್ ಆಗಿ ತೆರೆ ಕಾಣುತ್ತಿರುವ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿವೆ. ಇಂದು (ಅಕ್ಟೋಬರ್ 25) ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ (Ram Setu) ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾಗಳು ರಿಲೀಸ್ ಆಗಿವೆ. ಈ ಚಿತ್ರಗಳಿಗೆ ಒಳ್ಳೆಯ ವಿಮರ್ಶೆ ಸಿಗುತ್ತಿಲ್ಲ. ಹೀಗಾಗಿ, ‘ಕಾಂತಾರ’ (Kantara Movie) ಸಿನಿಮಾಗೆ ಇದು ಪ್ಲಸ್ ಆಗಲಿದೆ.

ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಸೋಮವಾರ (ಅಕ್ಟೋಬರ್ 24) ಈ ಚಿತ್ರ 1.90 ಕೋಟಿ ರೂ. ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 24.15 ಕೋಟಿ ರೂಪಾಯಿ ಆಗಿದೆ. ಈ ವಾರ ದೀಪಾವಳಿ ಇದೆ. ಹೀಗಾಗಿ ಸಾಲು ಸಾಲು ರಜೆಗಳಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗುವ ನಿರೀಕ್ಷೆ ಇದೆ.

‘ರಾಮ್ ಸೇತು’ ಹಾಗೂ ‘ಥ್ಯಾಂಕ್ ಗಾಡ್’ ಚಿತ್ರದಿಂದ ‘ಕಾಂತಾರ’ ಕಲೆಕ್ಷನ್​ಗೆ ಹೊಡೆತ ಉಂಟಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಈ ಎರಡೂ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ. ‘ರಾಮ್ ಸೇತು’ ಚಿತ್ರದಲ್ಲಿ ಕಥೆಯ ನರೇಷನ್ ಉತ್ತಮವಾಗಿಲ್ಲ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ‘ಥ್ಯಾಂಕ್ ಗಾಡ್’ ಚಿತ್ರ ಕೂಡ ಸಪ್ಪೆಯಾಗಿದೆ ಎಂಬುದು ವಿಮರ್ಶಕರ ಅಭಿಪ್ರಾಯ. ಈ ಎಲ್ಲಾ ಕಾರಣದಿಂದ ‘ಕಾಂತಾರ’ ಈ ವಾರವೂ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ

ಇದನ್ನೂ ಓದಿ: 3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

‘ಕಾಂತಾರ’ ಚಿತ್ರಕ್ಕೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಅನೇಕರು ಈ ಚಿತ್ರವನ್ನು ಹೊಗಳಿದ್ದಾರೆ. ಇದರಿಂದ ಚಿತ್ರಕ್ಕೆ ಹೊಸ ಬಲ ಸಿಕ್ಕಿದೆ. ಸ್ಟಾರ್ ನಟರ ಎರಡು ಚಿತ್ರಗಳು ರಿಲೀಸ್ ಆಗಿರುವುದರಿಂದ ‘ಕಾಂತಾರ’ ಚಿತ್ರಕ್ಕೆ ಸಿಕ್ಕ ಥಿಯೇಟರ್​ಗಳ ಸಂಖ್ಯೆ ಕಡಿಮೆ ಆಗಿತ್ತು. ಎರಡೂ ಚಿತ್ರಕ್ಕೆ ಸಾಧಾರಣ ವಿಮರ್ಶೆ ಸಿಕ್ಕಿರುವುದರಿಂದ ‘ಕಾಂತಾರ’ ಶೋಗಳ ಸಂಖ್ಯೆ ಮತ್ತೆ ಹೆಚ್ಚುವ ನಿರೀಕ್ಷೆ ಇದೆ.

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!