Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Setu Teaser: ರಾಮ ಸೇತುವೆ ಉಳಿಸಲು ಮುಂದಾದ ಅಕ್ಷಯ್ ಕುಮಾರ್; ನಿರೀಕ್ಷೆ ಹುಟ್ಟಿಸಿತು ಟೀಸರ್

Akshay Kumar: ‘ರಾಮ್​ ಸೇತು’ ಚಿತ್ರದಲ್ಲಿ ಆರ್ಯನ್ ಕುಲಶ್ರೇಷ್ಠ ಹೆಸರಿನ ಪಾತ್ರವನ್ನು ಅಕ್ಷಯ್ ಮಾಡಿದ್ದಾರೆ. ಆರ್ಯನ್ ರಾಮ ಸೇತುವೆ ವಿಚಾರದಲ್ಲಿ ನಾಸ್ತಿಕನಾಗಿರುತ್ತಾನೆ. ಆ ಬಗ್ಗೆ ಅಧ್ಯಯನ ಮಾಡುತ್ತಾ ಆಸ್ತಿಕನಾಗಿ ಬದಲಾಗುತ್ತಾನೆ.

Ram Setu Teaser: ರಾಮ ಸೇತುವೆ ಉಳಿಸಲು ಮುಂದಾದ ಅಕ್ಷಯ್ ಕುಮಾರ್; ನಿರೀಕ್ಷೆ ಹುಟ್ಟಿಸಿತು ಟೀಸರ್
ಅಕ್ಷಯ್ ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 26, 2022 | 7:08 PM

ನಟ ಅಕ್ಷಯ್ ಕುಮಾರ್ (Akshay Kumar) ಅವರ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುತ್ತಿದ್ದವು. ಏಕ ಕಾಲಕ್ಕೆ ಹಲವು ಚಿತ್ರಗಳನ್ನು ಒಪ್ಪಿಕೊಂಡು ನಟಿಸುವ ಅವರು ಇತ್ತೀಚೆಗೆ ಸತತ ಸೋಲು ಕಾಣುತ್ತಿದ್ದಾರೆ. ಅವರ ನಟನೆಯ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಮಕಾಡೆ ಮಲಗುತ್ತಿವೆ. ಇದಕ್ಕೆ ಕಾರಣ ಹಲವು. ನಷ್ಟಕ್ಕೆ ಹೆದರಿರುವ ನಿರ್ಮಾಪಕರು ಅವರ ಚಿತ್ರಗಳನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಈಗ ಹೊಸ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರಲು ಅಕ್ಷಯ್ ಕುಮಾರ್ ರೆಡಿ ಆಗಿದ್ದಾರೆ. ಅವರ ನಟನೆಯ ‘ರಾಮ್ ಸೇತು’ (Ram Setu) ಚಿತ್ರ ಅಕ್ಟೋಬರ್ 25ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಮಾಡಲಾಗಿದೆ.

ರಾಮ ಸೇತುವೆ ಬಗ್ಗೆ ರಾಮಾಯಣದಲ್ಲಿ ಉಲ್ಲೇಖವಾಗಿದೆ. ರಾಮಾಯಣದ ಪ್ರಕಾರ ಸೀತೆಯನ್ನು ರಾವಣ ಅಪಹರಣ ಮಾಡಿ ಲಂಕೆಯಲ್ಲಿ (ಶ್ರೀಲಂಕಾ) ಇರಿಸಿದ್ದ. ರಾಮನಿಗೆ ಸಮುದ್ರ ದಾಟಿ ಶ್ರೀಲಂಕಾ ಹೋಗಬೇಕಿತ್ತು. ಲಂಕೆಗೆ ಹೋಗುವುದಕ್ಕೆ ಸೇತುವೆ ನಿರ್ಮಿಸಲು ವಾನರ ಸೈನ್ಯ ಸಹಾಯ ಮಾಡಿತ್ತು. ಅಲ್ಲಿ ಸೇತುವೆ ಇತ್ತು ಎಂಬುದನ್ನು ಕೆಲವರು ಒಪ್ಪಿದರೆ ಇನ್ನೂ ಕೆಲವರು ಸೇತುವೆ ಇಲ್ಲ ಎಂಬ ಮಾತನ್ನು ಹೇಳುತ್ತಾರೆ. ಈಗ ರಾಮ ಸೇತುವೆ ವಿಚಾರ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

‘ರಾಮ್​ ಸೇತು’ ಚಿತ್ರದಲ್ಲಿ ಆರ್ಯನ್ ಕುಲಶ್ರೇಷ್ಠ ಹೆಸರಿನ ಪಾತ್ರವನ್ನು ಅಕ್ಷಯ್ ಮಾಡಿದ್ದಾರೆ. ಆರ್ಯನ್ ರಾಮ ಸೇತುವೆ ವಿಚಾರದಲ್ಲಿ ನಾಸ್ತಿಕನಾಗಿರುತ್ತಾನೆ. ಆ ಬಗ್ಗೆ ಅಧ್ಯಯನ ಮಾಡುತ್ತಾ ಆಸ್ತಿಕನಾಗಿ ಬದಲಾಗುತ್ತಾನೆ. ರಾಮ ಸೇತುವೆ ಇತ್ತು ಎಂಬುದನ್ನು ಸಾಬೀತು ಮಾಡಲು ಮುಂದಾಗುತ್ತಾನೆ ಆರ್ಯನ್​. ಈ ರೇಸ್​ನಲ್ಲಿ ಅವನು ಗೆಲ್ಲುತ್ತಾನೋ ಅಥವಾ ಇಲ್ಲವೋ ಎಂಬುದು ಸಿನಿಮಾದ ಕಥೆ. ಇದಿಷ್ಟು ವಿಚಾರವನ್ನು ಟೀಸರ್​ನಲ್ಲಿ ತೋರಿಸಲಾಗಿದೆ. ‘ರಾಮ ಸೇತುವೆ ಉಳಿಸಲು ನಮ್ಮ ಬಳಿ ಕೇವಲ ಮೂರು ದಿನ ಇದೆ’ ಎಂದು ಅಕ್ಷಯ್ ಕುಮಾರ್ ಹೇಳುವ ಮಾತು ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ

ಅಕ್ಷಯ್​ ಕುಮಾರ್​ಗೆ ಒಂದು ಗೆಲುವು ಬೇಕಾಗಿದೆ. ಈ ಕಾರಣಕ್ಕೆ ಅವರು ‘ರಾಮ್​ ಸೇತು’ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ಮುಂದಾಗಿದ್ದಾರೆ. ಅಜಯ್ ದೇವಗನ್ ಹಾಗೂ ಸಿದ್ದಾರ್ಥ್ ಮಲ್ಹೋತ್ರ ನಟನೆಯ ‘ಥ್ಯಾಂಕ್ ಗಾಡ್​’ ಚಿತ್ರದ ಜತೆ ಈ ಚಿತ್ರ ಸೆಣೆಸಲಿದೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಚಿತ್ರದ ಒಟಿಟಿ ರಿಲೀಸ್​ ಬಗ್ಗೆ ಹಬ್ಬಿದೆ ಗಾಸಿಪ್​; ನಿರ್ಮಾಪಕರೇ ನೀಡಿದ್ರು ಸ್ಪಷ್ಟನೆ

ಬಾಲಿವುಡ್​ ಚಿತ್ರಗಳು ಸೊರಗುತ್ತಿವೆ ಎಂಬ ಚರ್ಚೆಯ ಮಧ್ಯೆ ‘ಬ್ರಹ್ಮಾಸ್ತ್ರ’ ಸಿನಿಮಾ ಗೆದ್ದು ಬೀಗಿದೆ. ಇದರಿಂದ ಬಾಲಿವುಡ್​ಗೆ ಹೊಸ ಬೂಸ್ಟ್ ಸಿಕ್ಕಿದೆ. ಇದು ‘ರಾಮ್​ ಸೇತು’ಗೆ ಸಹಕಾರಿ ಆಗುವ ನಿರೀಕ್ಷೆ ಇದೆ. ಅಭಿಷೇಕ್​ ಶರ್ಮಾ ನಿರ್ದೇಶನದ ಈ ಸಿನಿಮಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಮೊದಲಾದವರು ನಟಿಸಿದ್ದಾರೆ. ಅಕ್ಟೋಬರ್ 25ಕ್ಕೆ ವಿಶ್ವಾದ್ಯಂತ ಚಿತ್ರ ಬಿಡುಗಡೆ ಆಗಲಿದೆ.

ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ