AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?

Akshay Kumar | Ram Setu: ಬೆಳಕಿನ ಹಬ್ಬದ ಮೆರುಗು ಹೆಚ್ಚಿಸಲು ‘ರಾಮ್​ ಸೇತು’ ಚಿತ್ರ ಬಿಡುಗಡೆ ಆಗಿದೆ. ಅಕ್ಷಯ್​ ಕುಮಾರ್ ಅಭಿಮಾನಿಗಳು ಸಿನಿಮಾ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
‘ರಾಮ್ ಸೇತು’ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Oct 25, 2022 | 12:10 PM

Share

ದೀಪಾವಳಿ ಹಬ್ಬದ ಪ್ರಯುಕ್ತ ಇಂದು (ಅಕ್ಟೋಬರ್​ 25) ‘ರಾಮ್​ ಸೇತು’ (Ram Setu) ಸಿನಿಮಾ ರಿಲೀಸ್​ ಆಗಿದೆ. ರಾಮಾಯಣದ ಕಥೆಯಲ್ಲಿ ಬರುವ ರಾಮ ಸೇತು ವಿಚಾರವನ್ನೇ ಇಟ್ಟುಕೊಂಡು  ಈ ಸಿನಿಮಾ ಮಾಡಲಾಗಿದೆ. ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಅವರಿಗೆ ಈ ಸಿನಿಮಾದಿಂದ ತುರ್ತಾಗಿ ಗೆಲ್ಲುವ ಅನಿವಾರ್ಯತೆ ಇದೆ. ‘ರಾಮ್​ ಸೇತು’ ಚಿತ್ರಕ್ಕೆ ಹೇಳಿಕೊಳ್ಳುವಷ್ಟು ಒಳ್ಳೆಯ ಮಟ್ಟದಲ್ಲಿ ಅಡ್ವಾನ್ಸ್​ ಬುಕಿಂಗ್​ ಆಗಿರಲಿಲ್ಲ. ಮೊದಲ ದಿನ ಮೊದಲ ಶೋ ನೋಡಿ ಬಂದಿರುವ ಪ್ರೇಕ್ಷಕರು ಟ್ವಿಟರ್​ (Ram Setu Twitter Review) ಮೂಲಕ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ದೀಪಾವಳಿ ಹಬ್ಬಕ್ಕೆ ಇದು ಬೆಸ್ಟ್​ ಉಡುಗೊರೆ ಎಂದು ಕೆಲವರು ಹೊಗಳುತ್ತಿದ್ದಾರೆ.

ಯಾವುದೇ ಸಿನಿಮಾಗೆ ಬಾಯಿ ಮಾತಿನ ಪ್ರಚಾರ ತುಂಬ ಮುಖ್ಯವಾಗುತ್ತದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿ ಅಭಿಮಾನಿಗಳು ‘ಸಿನಿಮಾ ಚೆನ್ನಾಗಿದೆ’ ಎಂದು ಹೇಳಿದರೆ ವಾರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೆ. ‘ರಾಮ್​ ಸೇತು’ ಚಿತ್ರಕ್ಕೆ ಮೊದಲ ದಿನವೇ ಉತ್ತಮ ರೆಸ್ಪಾನ್ಸ್​ ಸಿಕ್ಕಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ
Image
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Image
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

ಅಭಿಷೇಕ್​ ಶರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಕ್ಷಯ್​ ಕುಮಾರ್​ ಜೊತೆಗೆ ಜಾಕ್ವೆಲಿನ್​ ಫರ್ನಾಂಡಿಸ್​, ನುಸ್ರತ್​ ಬರುಚಾ ಮುಂತಾದವರು ನಟಿಸಿದ್ದಾರೆ. ‘ಈ ಕಥೆ ಅಡ್ವೆಂಚರಸ್​ ಆಗಿದೆ. ಅಕ್ಷಯ್​ ಕುಮಾರ್​ ಅವರ ಎನರ್ಜಿ ಸೂಪರ್​’ ಎಂದು ಅಭಿಮಾನಿಯೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ.

‘ಅಕ್ಷಯ್​ ಕುಮಾರ್​ ಅವರ ಎಂಟ್ರಿ ಸೂಪರ್​ ಆಗಿದೆ. ಅವರು ಮತ್ತೆ ಮೊದಲಿನ ಟ್ರ್ಯಾಕ್​ಗೆ ಮರಳಿದ್ದಾರೆ. ಈ ಸಿನಿಮಾದಲ್ಲಿ ಗ್ರಾಫಿಕ್ಸ್​ ಗುಣಮಟ್ಟ ಕೂಡ ಚೆನ್ನಾಗಿದೆ’ ಎಂದು ಪ್ರೇಕ್ಷಕರೊಬ್ಬರು ಹೊಗಳಿದ್ದಾರೆ. ಅನೇಕರು ಈ ಚಿತ್ರಕ್ಕೆ 4 ಸ್ಟಾರ್​ ನೀಡಿದ್ದಾರೆ.

ಈವರೆಗೂ ಹಲವು ಬಗೆಯ ಪಾತ್ರಗಳನ್ನು ಮಾಡಿ ಅಕ್ಷಯ್​ ಕುಮಾರ್​ ಸೈ ಎನಿಸಿಕೊಂಡಿದ್ದಾರೆ. ಹಾಗಿದ್ದರೂ ಕೂಡ ಇತ್ತೀಚೆಗೆ ಅವರ ಸಿನಿಮಾಗಳು ಸತತವಾಗಿ ಸೋತಿದ್ದು ಬೇಸರದ ಸಂಗತಿ. ‘ಬಚ್ಚನ್ ಪಾಂಡೆ’, ‘ರಕ್ಷಾ ಬಂಧನ್​’ ಹಾಗೂ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಗಳು ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಿರಲಿಲ್ಲ. ಈಗ ಆ ಬೇಸರವನ್ನು ಮರೆಸುವ ರೀತಿಯಲ್ಲಿ ‘ರಾಮ್​ ಸೇತು’ ಸಿನಿಮಾ ಎಂಟ್ರಿ ನೀಡಿದೆ. ಅಂತಿಮವಾಗಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕು.

‘ರಾಮ್​ ಸೇತು’ ಚಿತ್ರಕ್ಕೆ ಪೈಪೋಟಿ ನೀಡಲು ಅಜಯ್​ ದೇವಗನ್​ ಹಾಗೂ ಸಿದ್ದಾರ್ಥ್​ ಮಲ್ಹೋತ್ರಾ ನಟನೆಯ ‘ಥ್ಯಾಂಕ್​ ಗಾಡ್​’ ಸಿನಿಮಾ ರಿಲೀಸ್​ ಆಗಿದೆ. ಇದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್ ಆಗಿದೆ. ದೀಪಾವಳಿ ಹಬ್ಬದ ರಜಾ ದಿನಗಳನ್ನು ಎನ್​ಕ್ಯಾಶ್​ ಮಾಡಿಕೊಳ್ಳಲು ಈ ಸಿನಿಮಾಗಳು ಹಣಾಹಣಿ ನಡೆಸುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:10 pm, Tue, 25 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ