Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Chikhalia: ‘ಆದಿಪುರುಷ್​’ ನೋಡದೇ ಕಾಂಟ್ರವರ್ಸಿ ಬಗ್ಗೆ ಅಭಿಪ್ರಾಯ ತಿಳಿಸಿದ ರಾಮಾಯಣ ಧಾರಾವಾಹಿಯ ಸೀತೆ ದೀಪಿಕಾ ಚಿಖ್ಲಿಯಾ

Adipurush Controversy: ದಶಕಗಳ ಹಿಂದೆ ಪ್ರಸಾರವಾದ ‘ರಾಮಾಯಣ’ ಸೀರಿಯಲ್​ನಲ್ಲಿ ದೀಪಿಕಾ ಚಿಖ್ಲಿಯಾ ಅವರು ಸೀತೆಯ ಪಾತ್ರ ಮಾಡಿದ್ದರು. ಆ ಧಾರಾವಾಹಿಯನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಾರೆ.

Deepika Chikhalia: ‘ಆದಿಪುರುಷ್​’ ನೋಡದೇ ಕಾಂಟ್ರವರ್ಸಿ ಬಗ್ಗೆ ಅಭಿಪ್ರಾಯ ತಿಳಿಸಿದ ರಾಮಾಯಣ ಧಾರಾವಾಹಿಯ ಸೀತೆ ದೀಪಿಕಾ ಚಿಖ್ಲಿಯಾ
ದೀಪಿಕಾ ಚಿಖ್ಲಿಯಾ, ದೇವದತ್ತ ನಾಗೆ
Follow us
ಮದನ್​ ಕುಮಾರ್​
|

Updated on: Jun 21, 2023 | 12:25 PM

ಮಹಾಕಾವ್ಯ ರಾಮಾಯಣದ ಕಥೆ ಆಧರಿಸಿ ತಯಾರಾದ ‘ಆದಿಪುರುಷ್​’ (Adipurush) ಚಿತ್ರದಿಂದ ತುಂಬ ವಿವಾದಗಳು ಆಗುತ್ತಿವೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನಾಗಿ ಕಾಣಿಸಿದ್ದಾರೆ. ಸೈಫ್​ ಅಲಿ ಖಾನ್​ ಅವರು ರಾವಣನ ಪಾತ್ರ ಮಾಡಿದ್ದಾರೆ. ಆಂಜನೇಯನ ಪಾತ್ರಕ್ಕೆ ದೇವದತ್ತ ನಾಗೆ ಅವರು ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದಲ್ಲಿ ಬಳಕೆ ಆಗಿರುವ ಭಾಷೆಯ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ. ಕೆಲವು ಪಾತ್ರಗಳ ಬಗ್ಗೆಯೂ ಟೀಕೆ ವ್ಯಕ್ತವಾಗಿದೆ. ಒಟ್ಟಾರೆಯಾಗಿ ಈ ಚಿತ್ರದಲ್ಲಿ ರಾಮಾಯಣದ (Ramayan) ಕಥೆಯನ್ನು ಹಾಗೂ ಅದರ ಪಾತ್ರಗಳನ್ನು ಅಸಂಬದ್ಧವಾಗಿ ತೋರಿಸಲಾಗಿದೆ ಎಂಬ ಕಾರಣಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ‘ಆದಿಪುರುಷ್​’ ಸಿನಿಮಾದ ಬಗ್ಗೆ ‘ರಾಮಾಯಣ’ ಧಾರಾವಾಹಿಯ ಸೀತೆ ಪಾತ್ರಧಾರಿ ದೀಪಿಕಾ ಚಿಖ್ಲಿಯಾ (Deepika Chikhalia) ಅವರು ಕೂಡ ಈಗ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅಂದಹಾಗೆ, ಅವರಿನ್ನೂ ‘ಆದಿಪುರುಷ್​’ ಸಿನಿಮಾವನ್ನು ನೋಡಿಲ್ಲ.

ದಶಕಗಳ ಹಿಂದೆ ಪ್ರಸಾರವಾದ ‘ರಾಮಾಯಣ’ ಸೀರಿಯಲ್​ನಲ್ಲಿ ದೀಪಿಕಾ ಚಿಖ್ಲಿಯಾ ಅವರು ಸೀತೆಯ ಪಾತ್ರ ಮಾಡಿದ್ದರು. ಆ ಸೀರಿಯಲ್​ಗೆ ರಮಾನಂದ್​ ಸಾಗರ್​ ಅವರು ನಿರ್ದೇಶನ ಮಾಡಿದ್ದರು. ಆ ಧಾರಾವಾಹಿಯನ್ನು ಮತ್ತು ಅದರ ಪಾತ್ರಗಳನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಾರೆ. ‘ಆದಿಪುರುಷ್​’ ಸಿನಿಮಾ ಟೀಕೆಗೆ ಒಳಗಾಗುತ್ತಿರುವ ಈ ಸಂದರ್ಭದಲ್ಲಿ ದೀಪಿಕಾ ಚಿಖ್ಲಿಯಾ ಅವರ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ಪ್ರತಿ ಬಾರಿ ರಾಮಾಯಣದ ಕಥೆಯನ್ನು ಇಟ್ಟುಕೊಂಡು ಸಿನಿಮಾ ಅಥವಾ ಸೀರಿಯಲ್​ ಮಾಡಿದಾಗ ಟೀಕೆ ಎದುರಾಗುತ್ತದೆ. ಪ್ರತಿ ಎರಡು-ಮೂರು ವರ್ಷಕ್ಕೊಮ್ಮೆ ನಾವು ರಾಮಾಯಣವನ್ನು ಯಾಕೆ ಸಿನಿಮಾ ಮಾಡುತ್ತೇವೆ ಎಂಬುದು ತಿಳಿದಿಲ್ಲ. ರಾಮಾಯಣ ಇರುವುದು ಮನರಂಜನೆಗೆ ಅಲ್ಲ. ಅದು ಇರುವುದು ಕಲಿಕೆಗಾಗಿ. ತಲೆಮಾರುಗಳಿಂದ ನಮಗೆ ಬಂದ ಕೃತಿ ಅದು. ಅದು ಸಂಸ್ಕಾರಕ್ಕೆ ಸಂಬಂಧಿಸಿದ್ದು’ ಎಂದು ದೀಪಿಕಾ ಚಿಖ್ಲಿಯಾ ಅವರು ಹೇಳಿದ್ದಾರೆ.

ದೀಪಿಕಾ ಚಿಖ್ಲಿಯಾ ಅವರು ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಅವರಿಗೆ ಇನ್ನೂ ‘ಆದಿಪುರುಷ್​’ ಸಿನಿಮಾ ನೋಡಲು ಸಾಧ್ಯವಾಗಿಲ್ಲ. ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಇನ್ನೂ ಸ್ಪಷ್ಟವಾಗಿ ತಾವು ಮಾತನಾಡಲಿರುವುದಾಗಿ ಅವರು ಹೇಳಿದ್ದಾರೆ. ‘ನನ್ನ ಅಭಿಪ್ರಾಯ ಕೇಳಲು ಅನೇಕರು ಬರುತ್ತಿದ್ದಾರೆ. ಆದರೆ ಚಿತ್ರ ಹೇಗೆ ಮೂಡಿಬಂದಿದೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು ಅವರು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್