AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರಕ್ಕಾಗಿ ದಕ್ಷಿಣ ಭಾರತ ನಿರ್ದೇಶಕರ ಮೊರೆ ಹೋದ ತಂಡ

‘ರಾಮಾಯಣ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಶೀಘ್ರವೇ ಶೂಟಿಂಗ್ ಆರಂಭ ಆಗಲಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ.

‘ರಾಮಾಯಣ’ ಚಿತ್ರಕ್ಕಾಗಿ ದಕ್ಷಿಣ ಭಾರತ ನಿರ್ದೇಶಕರ ಮೊರೆ ಹೋದ ತಂಡ
ರಣಬೀರ್
Follow us
ರಾಜೇಶ್ ದುಗ್ಗುಮನೆ
|

Updated on: Apr 04, 2024 | 7:35 AM

ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ಹಲವು ಸಿನಿಮಾಗಳು ಹಿಂದಿಗೆ ರಿಲೀಸ್ ಆಗಿ ಗೆಲುವು ಕಂಡಿವೆ. ಈ ಸಾಲಿನಲ್ಲಿ ‘ಬಾಹುಬಲಿ’, ‘ಕೆಜಿಎಫ್’ (KGF Movie),  ‘ಪುಷ್ಪ’ ಮೊದಲಾದ ಸಿನಿಮಾಗಳು ಇವೆ. ಇಲ್ಲಿನ ಕಥೆಗಳನ್ನು ಅವರು ಇಷ್ಟಪಡುತ್ತಿದ್ದಾರೆ. ಆದರೆ, ಹಿಂದಿ ಸಿನಿಮಾಗಳು ಡಬ್ ಆಗಿ ರಿಲೀಸ್ ಆದರೂ ಅನೇಕರಿಂದ ಮೆಚ್ಚುಗೆ ಪಡೆದಿಲ್ಲ. ಇಲ್ಲಿನ ಸೊಗಡಿಗೆ ತಕ್ಕಂತೆ ಸಿನಿಮಾ ಡಬ್ ಆಗುವುದಿಲ್ಲ ಅನ್ನೋದು ಅನೇಕರ ಆರೋಪ. ಹೀಗಾಗಿ ‘ರಾಮಾಯಣ’ ನಿರ್ದೇಶಕ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾನ ಡಬ್ ಮಾಡುವಾಗ ಎಚ್ಚರಿಕೆ ವಹಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಅವರು ದಕ್ಷಿಣ ಭಾರತದ ನಿರ್ದೇಶಕರ ಸಹಾಯ ಪಡೆಯುತ್ತಿದ್ದಾರೆ.

‘ರಾಮಾಯಣ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಶೀಘ್ರವೇ ಶೂಟಿಂಗ್ ಆರಂಭ ಆಗಲಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ.

‘ರಾಮಾಯಣ’ ಸಿನಿಮಾ ಸಿದ್ಧವಾಗುತ್ತಿರುವುದು ಹಿಂದಿಯಲ್ಲಿ. ಬೇರೆ ಭಾಷೆಯಲ್ಲೂ ಸಿನಿಮಾ ರಿಲೀಸ್ ಆಗಲಿದೆ. ನಿರ್ದೇಶಕರು ಹಿಂದಿ ಭಾಷೆಗೆ ಕೊಟ್ಟಷ್ಟೇ ಕಾಳಜಿಯನ್ನು ಇತರ ಭಾಷೆಗಳಿಗೂ ಕೊಡಲು ನಿರ್ಧರಿಸಿದ್ದಾರೆ. ತೆಲುಗು ಡೈಲಾಗ್ ವಿಚಾರದಲ್ಲಿ ಅವರು ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಕನ್ನಡದಲ್ಲಿ ಯಾವ ನಿರ್ದೇಶಕರ ಜೊತೆ ಚರ್ಚೆ ನಡೆಸುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?

‘ರಾಮಾಯಣ’ ಸಿನಿಮಾದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ. ಯಶ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಒಳ್ಳೆಯ ಬಾಂಧವ್ಯ ಇದೆ. ಹೀಗಾಗಿ, ನಿತೇಶ್ ತಿವಾರಿ ಅವರು ಕನ್ನಡದ ಡೈಲಾಗ್ ವಿಚಾರಕ್ಕೆ ಪ್ರಶಾಂತ್ ನೀಲ್ ಅವರನ್ನು ಸಂಪರ್ಕಿಸಿದರೂ ಅಚ್ಚರಿ ಏನಿಲ್ಲ ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್