AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಟಾಯು ಪಾತ್ರಕ್ಕೆ ಅನುಪಮ್ ಖೇರ್ ಎಂಟ್ರಿ; ಇಲ್ಲಿದೆ ‘ರಾಮಾಯಣ’ ಕಲಾವಿದರ ಫುಲ್ ಲಿಸ್ಟ್

2026ರ ಬಹುನಿರೀಕ್ಷಿತ 'ರಾಮಾಯಣ' ಚಿತ್ರತಂಡದಿಂದ ಬೃಹತ್ ಅಪ್‌ಡೇಟ್ ಹೊರಬಿದ್ದಿದೆ. 'ಪ್ರಥಮ ಸಂಕಲ್ಪ' ಕಾರ್ಯಕ್ರಮದಲ್ಲಿ ಟ್ರೈಲರ್ ಮತ್ತು ಕಾಮಿಕ್ ಬುಕ್ ಬಿಡುಗಡೆ ಮಾಡಲಾಯಿತು. ಈ ಕಾಮಿಕ್ ಬುಕ್ ಮೂಲಕ ಅನುಪಮ್ ಖೇರ್ ಜಟಾಯು ಪಾತ್ರಕ್ಕೆ ಧ್ವನಿ ನೀಡುತ್ತಿರುವುದು ಅಧಿಕೃತವಾಗಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಒಳಗೊಂಡ ಬೃಹತ್ ತಾರಾಗಣ ಚಿತ್ರದಲ್ಲಿದ್ದು, ಇದು ಭಾರತೀಯ ಚಿತ್ರರಂಗದ ಹೆಮ್ಮೆಯ ಯೋಜನೆಯಾಗಿದೆ.

ಜಟಾಯು ಪಾತ್ರಕ್ಕೆ ಅನುಪಮ್ ಖೇರ್ ಎಂಟ್ರಿ; ಇಲ್ಲಿದೆ ‘ರಾಮಾಯಣ’ ಕಲಾವಿದರ ಫುಲ್ ಲಿಸ್ಟ್
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on:Jul 30, 2026 | 10:06 AM

Share

ಮುಖ್ಯಾಂಶಗಳು

  • 'ಪ್ರಥಮ ಸಂಕಲ್ಪ' ಈವೆಂಟ್ ಧಮಾಕ
  • 4 ನಿಮಿಷದ ಟ್ರೈಲರ್ ಜೊತೆ ರಿವೀಲ್ ಆಯ್ತು ಕಾಮಿಕ್ ಬುಕ್
  • ಜಟಾಯು ಪಾತ್ರದ ರಹಸ್ಯ ಬಯಲು

2026ರ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’ ಕುರಿತು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಚಿತ್ರತಂಡ ಇತ್ತೀಚೆಗೆ ‘ಪ್ರಥಮ ಸಂಕಲ್ಪ’ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಈವೆಂಟ್‌ನಲ್ಲಿ ಸಿನಿಮಾದ 4 ನಿಮಿಷಗಳ ಟ್ರೇಲರ್ ಪ್ರದರ್ಶಿಸಲಾಗಿದೆ. ಇದರ ಜೊತೆಗೆ ಚಿತ್ರದ ಪಾತ್ರಗಳನ್ನು ಪರಿಚಯಿಸುವ ವಿಶೇಷ ಕಾಮಿಕ್ ಬುಕ್ ಕೂಡ ಬಿಡುಗಡೆ ಮಾಡಲಾಗಿದೆ.

ಈ ಕಾಮಿಕ್ ಬುಕ್ ಮೂಲಕ ಸಿನಿಮಾದ ದೊಡ್ಡ ರಹಸ್ಯವೊಂದು ಹೊರಬಿದ್ದಿದೆ. ಈ ಹಿಂದೆ ಜಟಾಯು ಪಾತ್ರಕ್ಕೆ ಅಮಿತಾಭ್ ಬಚ್ಚನ್ ಧ್ವನಿ ನೀಡಲಿದ್ದಾರೆ ಎಂಬ ವದಂತಿ ಇತ್ತು. ಆದರೆ ಈ ಸುದ್ದಿ ಸುಳ್ಳಾಗಿದೆ. ಹಿರಿಯ ನಟ ಅನುಪಮ್ ಖೇರ್ ಜಟಾಯು ಪಾತ್ರಕ್ಕೆ ಧ್ವನಿ ನೀಡುತ್ತಿದ್ದಾರೆ. ಕಾಮಿಕ್ ಬುಕ್‌ನಲ್ಲಿ ಈ ವಿಷಯ ಅಧಿಕೃತವಾಗಿದೆ. ಜಟಾಯು ಮತ್ತು ರಾವಣನ ನಡುವಿನ ಯುದ್ಧ ಸಿನಿಮಾದಲ್ಲಿ ಅತ್ಯಂತ ರೋಮಾಂಚನಕಾರಿಯಾಗಿ ಮೂಡಿಬಂದಿದೆ ಎಂದು ನಿರ್ದೇಶಕ ನಿತೇಶ್ ತಿವಾರಿ ಹೇಳಿದ್ದಾರೆ.

‘ರಾಮಾಯಣ’ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ದಂಡೇ ಜಮಾಯಿಸಿದೆ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾ ಮಾತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ಕಾಣಿಸಿಕೊಂಡಿದ್ದಾರೆ. ಇನ್ನು ಲಂಕಾಧಿಪತಿ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅಬ್ಬರಿಸಲಿದ್ದಾರೆ. ರಾವಣನ ಪತ್ನಿ ಮಂಡೋದರಿ ಪಾತ್ರದಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ:  ‘ರಾಮಾಯಣ’ ವೇದಿಕೆಯಲ್ಲಿ ಯಶ್ ಹವಾ ಕಂಡು ದಂಗಾದ ಬಾಲಿವುಡ್ ಮಂದಿ

ಉಳಿದಂತೆ ದಶರಥ ಮಹಾರಾಜನಾಗಿ ಅರುಣ್ ಗೋವಿಲ್ ನಟಿಸುತ್ತಿದ್ದಾರೆ. ಕೌಸಲ್ಯೆಯಾಗಿ ಇಂದಿರಾ ಕೃಷ್ಣನ್ ಮತ್ತು ಕೈಕೇಯಿಯಾಗಿ ಲಾರಾ ದತ್ತಾ ಕಾಣಿಸಿಕೊಂಡಿದ್ದಾರೆ. ಲಕ್ಷ್ಮಣನ ಪಾತ್ರದಲ್ಲಿ ರವಿ ದುಬೆ ನಟಿಸುತ್ತಿದ್ದಾರೆ. ಭರತನಾಗಿ ಆದಿನಾಥ್ ಕೊಠಾರೆ ಮತ್ತು ಶತ್ರುಘ್ನನಾಗಿ ನಿತೀಶ್ ಶರ್ಮಾ ಬಣ್ಣ ಹಚ್ಚಿದ್ದಾರೆ. ವಿಭೀಷಣನ ಪಾತ್ರದಲ್ಲಿ ಹರೀಶ್ ಉತ್ತಮನ ಹಾಗೂ ಕುಂಭಕರ್ಣನಾಗಿ ಫೈಸಲ್ ಮಲಿಕ್ ನಟಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಅತಿ ದೊಡ್ಡ ತಾರಾಗಣ ಹೊಂದಿದ ಹೆಮ್ಮೆಯ ಚಿತ್ರವಾಗಲಿದೆ.

Published On - 7:28 am, Tue, 21 July 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ