AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ… ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?

ನಟ ರಣಬೀರ್​ ಕಪೂರ್​ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಆರಂಭ ಆಗಿದೆ. ಈ ಸಿನಿಮಾದ ಬಜೆಟ್​ ಬಗ್ಗೆ ಒಂದು ಅಚ್ಚರಿಯ ಮಾಹಿತಿ ಕೇಳಿಬಂದಿದೆ. 835 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಅಬ್ಬಬ್ಬಾ... ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?
ರಣಬೀರ್​ ಕಪೂರ್​, ಯಶ್​
ಮದನ್​ ಕುಮಾರ್​
|

Updated on: May 13, 2024 | 10:43 PM

Share

ಕೆಲವು ನಿರ್ಮಾಪಕರು, ನಟರು ಮತ್ತು ನಿರ್ದೇಶಕರು ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಭಾರತೀಯ ಚಿತ್ರರಂಗದ ವ್ಯಾಪ್ತಿ ಹೆಚ್ಚುತ್ತಿದೆ. ಬಜೆಟ್​ ಕೂಡ ಹಿರಿದಾಗುತ್ತಿದೆ. ಕಳೆದ ಕೆಲವು ತಿಂಗಳಿಂದ ‘ರಾಮಾಯಣ’ ಸಿನಿಮಾ (Ramayana Movie) ಬಗ್ಗೆ ಹಲವಾರು ಬಗೆಯ ಸುದ್ದಿ ಕೇಳಿಬಂದಿವೆ. ಈಗ ಈ ಚಿತ್ರದ ಬಜೆಟ್​ ಬಗ್ಗೆ ಒಂದು ಅಚ್ಚರಿಯ ಮಾಹಿತಿ ಹರಿದಾಡಿದೆ. ರಾಮಾಯಣ ಕಥೆಯಾಧಾರಿತ ಈ ಸಿನಿಮಾಗೆ ನಿತೇಶ್​ ತಿವಾರಿ ನಿರ್ದೇಶನ ಮಾಡುತ್ತಿದ್ದು, ನಮಿತ್​ ಮಲ್ಹೋತ್ರಾ ನಿರ್ಮಾಣ ಮಾಡುತ್ತಿದ್ದಾರೆ. ಯಶ್​ (Yash) ಅವರು ಸಹ-ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಜೆಟ್​ (Ramayana Movie Budget) ಬರೋಬ್ಬರಿ 835 ಕೋಟಿ ರೂಪಾಯಿ ಎಂದು ವರದಿ ಆಗಿದೆ!

ಬೃಹತ್​ ಬಜೆಟ್​ನಲ್ಲಿ ‘ರಾಮಾಯಣ’ ಸಿನಿಮಾ ಸಿದ್ಧವಾಗುತ್ತಿದೆ. ಈಗಾಗಲೇ ಈ ಸಿನಿಮಾಗೆ ಶೂಟಿಂಗ್​ ಆರಂಭ ಆಗಿದೆ. ರಾಮನಾಗಿ ರಣಬೀರ್​ ಕಪೂರ್​ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಅನೇಕ ಘಟಾನುಘಟಿ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಕಲಾವಿದರ ಸಂಭಾವನೆ, ಸೆಟ್​ ನಿರ್ಮಾಣ, ಗ್ರಾಫಿಕ್ಸ್​ ಕೆಲಸ ಎಲ್ಲವೂ ಸೇರಿ ಈ ಸಿನಿಮಾದ ಬಜೆಟ್​ 100 ಮಿಲಿಯನ್​ ಅಮೆರಿಕನ್​ ಡಾಲರ್​ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

2022ರಲ್ಲಿ ಬಿಡುಗಡೆ ಆದ ‘ಬ್ರಹ್ಮಾಸ್ತ್ರ’ ಸಿನಿಮಾಗೆ 450 ಕೋಟಿ ರೂಪಾಯಿ ಬಜೆಟ್​ ಸುರಿಯಲಾಗಿತ್ತು. ಅದು ಬಾಲಿವುಡ್​ನಲ್ಲಿ ಈವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿತ್ತು. ಆ ಸಿನಿಮಾದಲ್ಲೂ ರಣಬೀರ್ ಕಪೂರ್​ ಹೀರೋ ಆಗಿದ್ದರು. ಈಗ ಅವರೇ ಆ ದಾಖಲೆಯನ್ನು ಮುರಿಯಲಿದ್ದಾರೆ. ರಣಬೀರ್​ ಕಪೂರ್​ ನಟನೆಯ ‘ರಾಮಾಯಣ: ಪಾರ್ಟ್​ 1’ ಸಿನಿಮಾದ ಬಜೆಟ್​ 835 ಕೋಟಿ ರೂ. ಎಂಬ ಸುದ್ದಿ ಹರಿದಾಡಿದೆ. ನಿರ್ಮಾಣ ಸಂಸ್ಥೆ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬರುವುದು ಬಾಕಿ ಇದೆ.

ಇದನ್ನೂ ಓದಿ: ‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​

ಯಶ್​ ಅವರು ‘ರಾಮಾಯಣ’ ಸಿನಿಮಾದ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಅವರ ಆಗಮನದ ಬಳಿಕ ಸಿನಿಮಾದ ಗಾತ್ರ ಹಿರಿದಾಗಿದೆ. 835 ಕೋಟಿ ರೂಪಾಯಿ ಬಜೆಟ್​ ಸುರಿಯುತ್ತಿರುವುದು ಕೇವಲ ‘ರಾಮಾಯಣ’ ಸಿನಿಮಾದ ಮೊದಲ ಪಾರ್ಟ್​ಗೆ ಮಾತ್ರ. ಈ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಕ್ಕೆ ಬರೋಬ್ಬರಿ 600 ದಿನಗಳನ್ನು ಮೀಸಲಿಡಲಾಗುತ್ತಿದೆ. ರಾಮಾಯಣದ ಕಥೆಯನ್ನು ಅದ್ಭುತ ದೃಶ್ಯ ವೈಭವದೊಂದಿಗೆ ಪ್ರೇಕ್ಷಕರಿಗೆ ತೋರಿಸಲು ಚಿತ್ರತಂಡ ನಿರ್ಧರಿಸಿದೆ. ಆ ಕಾರಣಕ್ಕಾಗಿ ಇಷ್ಟು ದೊಡ್ಡ ಬಜೆಟ್​ನಲ್ಲಿ ಸಿನಿಮಾ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!