AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಗ್ಲಿಂಪ್ಸ್, ಯಶ್​ಗೆ ಭೇಷ್​​ ಎಂದ ನಟ್ಟಿಗರು, ರಣ್​ಬೀರ್ ಬಗ್ಗೆ ಟೀಕೆ ಏಕೆ?

Ramayana movie: ರಣ್​ಬೀರ್ ಕಪೂರ್ ಹಾಗೂ ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಗ್ಲಿಂಪ್ಸ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ರಾಮಾಯಣ ಗ್ಲಿಂಪ್ಸ್ ನೋಡಿದ ನೆಟ್ಟಿಗರು ರಣ್​ಬೀರ್ ಕಪೂರ್ ಅವರ ಪಾತ್ರವನ್ನು ಟೀಕೆ ಮಾಡಿದ್ದು, ಯಶ್ ಪಾತ್ರವನ್ನು ಬಹುವಾಗಿ ಕೊಂಡಾಡಿದ್ದಾರೆ. ಅಷ್ಟಕ್ಕೂ ರಣ್​ಬೀರ್ ಕಪೂರ್​​ ಅವರನ್ನು ಟೀಕೆ ಮಾಡುತ್ತಿರುವುದಕ್ಕೆ ಕಾರಣ ಏನು?

‘ರಾಮಾಯಣ’ ಗ್ಲಿಂಪ್ಸ್, ಯಶ್​ಗೆ ಭೇಷ್​​ ಎಂದ ನಟ್ಟಿಗರು, ರಣ್​ಬೀರ್ ಬಗ್ಗೆ ಟೀಕೆ ಏಕೆ?
Ranbir Kapoor Yash
ಮಂಜುನಾಥ ಸಿ.
|

Updated on: Jul 05, 2025 | 3:17 PM

Share

ರಣ್​​ಬೀರ್ ಕಪೂರ್ (Ranbir Kapoor), ಯಶ್ ಹಾಗೂ ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾದ ಗ್ಲಿಂಪ್ಸ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಲಾಗಿದ್ದು, ಸಿನಿಮಾದ ಅದ್ಧೂರಿತನ ನಿನ್ನೆ ಬಿಡುಗಡೆ ಆದ ಮೂರು ನಿಮಿಷದ ಗ್ಲಿಂಪ್ಸ್​​ನಲ್ಲಿ ಧಾರಾಳವಾಗಿ ಕಂಡಿ ಬಂದಿದೆ. ಮೂರು ನಿಮಿಷದ ಗ್ಲಿಂಪ್ಸ್​​ನ ಕೊನೆಯ ಕೆಲ ಸೆಕೆಂಡುಗಳಲ್ಲಿ ರಣ್​ಬೀರ್ ಕಪೂರ್ ರಾಮನಾಗಿ ಕಾಣಿಸಿಕೊಂಡರೆ, ಯಶ್, ರಾವಣನ ವೇಷದಲ್ಲಿ ಕಾಣಿಸಿಕೊಳ್ಳುತ್ತಾರೆ. ಇಬ್ಬರ ದೃಶ್ಯಗಳು ಕೆಲವು ಸೆಕೆಂಡುಗಳು ಮಾತ್ರವೇ ಟೀಸರ್​​ನಲ್ಲಿ ಕಾಣುತ್ತವೆ. ಗ್ಲಿಂಪ್ಸ್ ನೋಡಿದ ನೆಟ್ಟಿಗರು ರಣ್​ಬೀರ್ ಕಪೂರ್ ಅವರನ್ನು ಟೀಕೆ ಮಾಡಿದ್ದು, ಯಶ್ ಅವರನ್ನು ಕೊಂಡಾಡಿದ್ದಾರೆ.

ರಣ್​ಬೀರ್ ಕಪೂರ್ ಅವರ ಬಗೆಗಿನ ಬಹುತೇಕ ಟೀಕೆಗಳು ಪೂರ್ವಾಗ್ರಹ ಪೀಡಿತ ಎನ್ನಬಹುದಾದ ಟೀಕೆಗಳೇ ಆಗಿವೆ. ದನದ ಮಾಂಸ ತಿನ್ನುವವ ರಾಮನ ಪಾತ್ರ ಮಾಡಿದ್ದಾನೆ, ಧರ್ಮದ ಬಗ್ಗೆ ಗೌರವ ಇಲ್ಲದವ ರಾಮನ ಪಾತ್ರ ಮಾಡಿದ್ದಾನೆ ಎಂಬಿತ್ಯಾದಿ ಟೀಕೆಗಳನ್ನು ಮಾಡಲಾಗಿದೆ. ಕೆಲವರು ಮಾತ್ರ, ರಣ್​ಬೀರ್ ಕಪೂರ್ ಅವರಿಗಿಂತಲೂ ರಾಮ್ ಚರಣ್, ರಾಮನ ಪಾತ್ರಕ್ಕೆ ಹೆಚ್ಚು ಸೂಕ್ತವಾಗಿರುತ್ತಿದ್ದರು. ರಣ್​ಬೀರ್ ಕಪೂರ್​ಗೆ ಮುಖದಲ್ಲಿ ಶ್ರೀರಾಮನ ಘನತೆ ಕಾಣುವುದಿಲ್ಲ. ಆತನ ದೇಹ ಭಾಷೆ ಪೌರಾಣಿಕ ಪಾತ್ರಕ್ಕೆ ಒಪ್ಪುವುದಿಲ್ಲ ಎಂದಿದ್ದಾರೆ.

ನಿನ್ನೆ ಬಿಡುಗಡೆ ಆದ ಟೀಸರ್​ನಲ್ಲಿ ರಣ್​ಬೀರ್ ಕಪೂರ್ ಅವರ ದೃಶ್ಯದ ಸ್ಕ್ರೀನ್ ಶಾಟ್​ ಅನ್ನು ‘ಆರ್​​ಆರ್​​ಆರ್’ ಸಿನಿಮಾದಲ್ಲಿ ರಾಮ್ ಚರಣ್ ಪಾತ್ರ ಶ್ರೀರಾಮನ ವೇಷ ಧರಿಸಿದಾಗಿನ ಚಿತ್ರಕ್ಕೆ ಹೋಲಿಸಿ ನೋಡಲಾಗುತ್ತಿದೆ. ರಾಮನ ಪಾತ್ರಕ್ಕೆ ರಣ್​ಬೀರ್ ಕಪೂರ್ ಅವರಿಗಿಂತಲೂ ರಾಮ್ ಚರಣ್ ನಟಿಸಿದ್ದರೆ ಚೆನ್ನಾಗಿರುತ್ತಿತ್ತು ಎಂಬ ಅಭಿಪ್ರಾಯವೇ ಹೆಚ್ಚಾಗಿ ವ್ಯಕ್ತವಾಗಿದೆ.

ಇದನ್ನೂ ಓದಿ:ಯಶ್ ಕಾರಣಕ್ಕೆ ‘ರಾಮಾಯಣ’ದಲ್ಲಿ ಅವಕಾಶ ಕಳೆದುಕೊಂಡ ಹಿಂದಿ ನಟ

ಇನ್ನು ಯಶ್ ಬಗ್ಗೆ ಹಲವರು ಕೊಂಡಾಡಿದ್ದು, ಯಶ್, ‘ರಾಮಾಯಣ’ ಸಿನಿಮಾಕ್ಕೆ ಜೋಶ್ ತುಂಬಿದ್ದಾರೆ. ಇದೇ ಮೊದಲ ಬಾರಿಗೆ ಸ್ಟಾರ್ ನಾಯಕ ನಟಿಸಿರುವ ಒಂದು ಸಿನಿಮಾ ಆ ಸಿನಿಮಾದ ನಾಯಕನ ಕಾರಣಕ್ಕೆ ಅಲ್ಲದೆ ವಿಲನ್ ಕಾರಣಕ್ಕೆ ಹೆಚ್ಚು ಸುದ್ದಿಯಾಗುತ್ತಿದೆ ಎಂದು ಯಶ್ ಅವರ ಕ್ರೇಜ್ ಅನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಯಶ್ ಅವರ ಒಂದು ಕಣ್ಣನ್ನು ಮಾತ್ರ ನಿನ್ನೆಯ ಟೀಸರ್​​ನಲ್ಲಿ ತೋರಿಸಲಾಗಿದೆ. ಅದಕ್ಕೂ ಕೆಲವರು ಕಮೆಂಟ್ ಮಾಡಿದ್ದು, ಕೇವಲ ಒಂದು ಕಣ್ಣು ತೋರಿಸಿದ್ದಕ್ಕೆ ಈ ಕ್ರೇಜ್ ಇನ್ನೇನಾದರೂ ಮುಖ ತೋರಿಸಿದ್ದಿದ್ದರೆ ಕ್ರೇಜ್ ಮೂರು ಪಟ್ಟಾಗಿರುತ್ತಿತ್ತು ಎಂದಿದ್ದಾರೆ.

‘ರಾಮಾಯಣ’ ಸಿನಿಮಾವನ್ನು ನಿತೀಶ್ ತಿವಾರಿ ನಿರ್ದೇಶನ ಮಾಡಿದ್ದು, ನಮಿತ್ ಮಲ್ಹೋತ್ರಾ ಮತ್ತು ನಟ ಯಶ್ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆಸ್ಕರ್ ವಿಜೇತ ಡಿಇಎನ್​ಜಿ ಸ್ಟುಡಿಯೋ, ಸಿನಿಮಾದ ವಿಎಫ್​ಎಕ್ಸ್ ಕಾರ್ಯ ಮಾಡಿದೆ. ಆಸ್ಕರ್ ವಿಜೇತ ಸಂಗೀತ ನಿರ್ದೇಶಕರಾದ ಹನ್ಜ್ ಜೈಮರ್ ಮತ್ತು ಎಆರ್ ರೆಹಮಾನ್ ಅವರುಗಳು ಜಂಟಿಯಾಗಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದು 2026ರ ದೀಪಾವಳಿಗೆ ಸಿನಿಮಾದ ಮೊದಲ ಭಾಗ ಹಾಗೂ 2027ರ ದೀಪಾವಳಿಗೆ ಸಿನಿಮಾದ ಎರಡನೇ ಭಾಗ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ