ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಸೆಟ್ ಫೋಟೋ ಲೀಕ್; ಸಖತ್ ಅದ್ದೂರಿ

‘ರಾಮಾಯಣ’ ಸೀರಿಸ್ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿದರೆ, ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ಬಣ್ಣ ಹಚ್ಚಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ.

ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಸೆಟ್ ಫೋಟೋ ಲೀಕ್; ಸಖತ್ ಅದ್ದೂರಿ
ರಾಮಾಯಣ ಸೆಟ್​ ಫೋಟೋ
Follow us
|

Updated on: Apr 04, 2024 | 10:29 AM

‘ರಾಮಾಯಣ’ (Ramayana Movie) ಹಾಗೂ ‘ಮಹಾ ಭಾರತ’ ಮಹಾಕಾವ್ಯ ಆಧರಿಸಿ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಹಲವು ಧಾರಾವಾಹಿಗಳು ಬಂದಿವೆ. ಹೀಗಿದ್ದರೂ ಇವುಗಳನ್ನು ಆಧರಿಸಿ ಸಿನಿಮಾ, ಸೀರಿಸ್ ಮಾಡೋದು ನಿಂತಿಲ್ಲ. ಹೊಸ ಹೊಸ ತಂತ್ರಜ್ಞಾನಗಳ ಬಳಕೆಯೊಂದಿಗೆ ‘ರಾಮಾಯಣ’ ಮಾಡಲಾಗುತ್ತಿದೆ. ಈಗ ಬಾಲಿವುಡ್​ನಲ್ಲಿ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ಶೂಟಿಂಗ್ ಕೂಡ ಆರಂಭ ಆಗಿದೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ. ಈ ಫೋಟೋ ಲೀಕ್ ಆಗಿದೆ.

‘ರಾಮಾಯಣ’ ಸೀರಿಸ್ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿದರೆ, ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ಬಣ್ಣ ಹಚ್ಚಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ಸಿನಿಮಾ ಮೂರು ಭಾಗಗಳಲ್ಲಿ ಬರಲಿದ್ದು, ರಾವಣನ ಎಂಟ್ರಿ ಎರಡನೇ ಪಾರ್ಟ್​​ನಲ್ಲಿ ಆಗಲಿದೆಯಂತೆ. ಈಗ ಸೆಟ್​ನ ಫೋಟೋಗಳು ವೈರಲ್ ಆಗಿವೆ.

Ramayana part 1- started the shoot yesterday byu/Glad-Ad5911 inBollyBlindsNGossip

ಮಂಗಳವಾರ (ಏಪ್ರಿಲ್ 3) ‘ರಾಮಾಯಣ’ ಸಿನಿಮಾದ ಶೂಟಿಂಗ್ ಆರಂಭ ಆಗಿದೆ. ಈ ಚಿತ್ರಕ್ಕೆ ಮುಂಬೈನಲ್ಲಿ ಬೃಹತ್ ಸೆಟ್​ಗಳನ್ನು ಹಾಕಲಾಗಿದೆ. ಪೂಜೆ ನಡೆಸಿ ನಂತರ ಶೂಟ್ ಆರಂಭಿಸಲಾಗಿದೆ. ಸದ್ಯ ಸಣ್ಣ ಪುಟ್ಟ ಪಾತ್ರಗಳ ಶೂಟಿಂಗ್ ನಡೆಯುತ್ತಿದೆ. ಶೀಘ್ರವೇ ರಣಬೀರ್ ಕಪೂರ್ ಅವರು ಸೆಟ್​ನ ಸೇರಿಕೊಳ್ಳಲಿದ್ದಾರೆ. ಈಗ ವೈರಲ್ ಆಗಿರೋ ಸೆಟ್​​ನ ಫೋಟೋ ಹೊರಗಿನಿಂದ ತೆಗೆದ ಫೋಟೋ ಆಗಿದೆ. ಒಳ ಭಾಗದಲ್ಲಿ ಯಾವ ರೀತಿಯಲ್ಲಿ ಇದೆ ಎಂಬ ವಿಚಾರ ರಿವೀಲ್ ಮಾಡಲಾಗಿಲ್ಲ.

ಇದನ್ನೂ ಓದಿ: ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?

‘ರಾಮಾಯಣ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ‘ಆದಿಪುರುಷ್’ ಸಿನಿಮಾ ರಿಲೀಸ್ ಮಾಡಿ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಹೀಗಾಗಿ ನಿತೇಶ್ ತಿವಾರಿ ಅವರು ಸಾಕಷ್ಟು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ