AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಸೆಟ್ ಫೋಟೋ ಲೀಕ್; ಸಖತ್ ಅದ್ದೂರಿ

‘ರಾಮಾಯಣ’ ಸೀರಿಸ್ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿದರೆ, ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ಬಣ್ಣ ಹಚ್ಚಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ.

ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಸೆಟ್ ಫೋಟೋ ಲೀಕ್; ಸಖತ್ ಅದ್ದೂರಿ
ರಾಮಾಯಣ ಸೆಟ್​ ಫೋಟೋ
ರಾಜೇಶ್ ದುಗ್ಗುಮನೆ
|

Updated on: Apr 04, 2024 | 10:29 AM

Share

‘ರಾಮಾಯಣ’ (Ramayana Movie) ಹಾಗೂ ‘ಮಹಾ ಭಾರತ’ ಮಹಾಕಾವ್ಯ ಆಧರಿಸಿ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಹಲವು ಧಾರಾವಾಹಿಗಳು ಬಂದಿವೆ. ಹೀಗಿದ್ದರೂ ಇವುಗಳನ್ನು ಆಧರಿಸಿ ಸಿನಿಮಾ, ಸೀರಿಸ್ ಮಾಡೋದು ನಿಂತಿಲ್ಲ. ಹೊಸ ಹೊಸ ತಂತ್ರಜ್ಞಾನಗಳ ಬಳಕೆಯೊಂದಿಗೆ ‘ರಾಮಾಯಣ’ ಮಾಡಲಾಗುತ್ತಿದೆ. ಈಗ ಬಾಲಿವುಡ್​ನಲ್ಲಿ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ಶೂಟಿಂಗ್ ಕೂಡ ಆರಂಭ ಆಗಿದೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ. ಈ ಫೋಟೋ ಲೀಕ್ ಆಗಿದೆ.

‘ರಾಮಾಯಣ’ ಸೀರಿಸ್ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿದರೆ, ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ಬಣ್ಣ ಹಚ್ಚಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ಸಿನಿಮಾ ಮೂರು ಭಾಗಗಳಲ್ಲಿ ಬರಲಿದ್ದು, ರಾವಣನ ಎಂಟ್ರಿ ಎರಡನೇ ಪಾರ್ಟ್​​ನಲ್ಲಿ ಆಗಲಿದೆಯಂತೆ. ಈಗ ಸೆಟ್​ನ ಫೋಟೋಗಳು ವೈರಲ್ ಆಗಿವೆ.

Ramayana part 1- started the shoot yesterday byu/Glad-Ad5911 inBollyBlindsNGossip

ಮಂಗಳವಾರ (ಏಪ್ರಿಲ್ 3) ‘ರಾಮಾಯಣ’ ಸಿನಿಮಾದ ಶೂಟಿಂಗ್ ಆರಂಭ ಆಗಿದೆ. ಈ ಚಿತ್ರಕ್ಕೆ ಮುಂಬೈನಲ್ಲಿ ಬೃಹತ್ ಸೆಟ್​ಗಳನ್ನು ಹಾಕಲಾಗಿದೆ. ಪೂಜೆ ನಡೆಸಿ ನಂತರ ಶೂಟ್ ಆರಂಭಿಸಲಾಗಿದೆ. ಸದ್ಯ ಸಣ್ಣ ಪುಟ್ಟ ಪಾತ್ರಗಳ ಶೂಟಿಂಗ್ ನಡೆಯುತ್ತಿದೆ. ಶೀಘ್ರವೇ ರಣಬೀರ್ ಕಪೂರ್ ಅವರು ಸೆಟ್​ನ ಸೇರಿಕೊಳ್ಳಲಿದ್ದಾರೆ. ಈಗ ವೈರಲ್ ಆಗಿರೋ ಸೆಟ್​​ನ ಫೋಟೋ ಹೊರಗಿನಿಂದ ತೆಗೆದ ಫೋಟೋ ಆಗಿದೆ. ಒಳ ಭಾಗದಲ್ಲಿ ಯಾವ ರೀತಿಯಲ್ಲಿ ಇದೆ ಎಂಬ ವಿಚಾರ ರಿವೀಲ್ ಮಾಡಲಾಗಿಲ್ಲ.

ಇದನ್ನೂ ಓದಿ: ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?

‘ರಾಮಾಯಣ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ‘ಆದಿಪುರುಷ್’ ಸಿನಿಮಾ ರಿಲೀಸ್ ಮಾಡಿ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಹೀಗಾಗಿ ನಿತೇಶ್ ತಿವಾರಿ ಅವರು ಸಾಕಷ್ಟು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?