AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?

ವರದಿಗಳ ಪ್ರಕಾರ, ಮುಂಬೈನ ಫಿಲ್ಮ್​ ಸಿಟಿಯಲ್ಲಿ ಸೆಟ್​ ನಿರ್ಮಾಣ ಮಾಡಲಾಗಿದೆ. ಗುರುಕುಲದ ಸೆಟ್​ ಹಾಕಲಾಗಿದ್ದು, ಗ್ರೀನ್​ ಸ್ಕ್ರೀನ್ ಸಹ ಬಳಸಿಕೊಳ್ಳಲಾಗುತ್ತಿದೆ. ಗುರುಕುಲದ ದೃಶ್ಯಗಳಿಂದಲೇ ‘ರಾಮಾಯಣ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮುಖ್ಯ ಭೂಮಿಕೆ ನಿಭಾಯಿಸಲಿದ್ದು, ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ.

ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?
ರಣಬೀರ್​ ಕಪೂರ್​, ಸಾಯಿ ಪಲ್ಲವಿ, ಯಶ್​, ನಿತೇಶ್​ ತಿವಾರಿ, ಸನ್ನಿ ಡಿಯೋಲ್​
ಮದನ್​ ಕುಮಾರ್​
|

Updated on: Apr 01, 2024 | 10:42 PM

Share

‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ (Nitesh Tiwari) ಅವರು ರಾಮಾಯಣ ಕಥೆಯಾಧಾರಿತ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲು ಸಿದ್ಧರಾಗಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ರಾಮಾಯಣ ಸಿನಿಮಾ (Ramayana Movie) ಬಗ್ಗೆ ಸಿಕ್ಕಾಪಟ್ಟೆ ಗಾಳಿಸುದ್ದಿ ಹರಿದಾಡಿವೆ. ಅವುಗಳ ನಡುವೆಯೇ ಸದ್ದಿಲ್ಲದೇ ಶೂಟಿಂಗ್​ ಆರಂಭ ಆಗುತ್ತಿದೆ ಎಂದು ವರದಿ ಆಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸಲಿದ್ದಾರೆ. ಹಾಗಂತ ಅವರು ಮೊದಲು ಶೂಟಿಂಗ್​ನಲ್ಲಿ ಭಾಗಿ ಆಗುವುದಿಲ್ಲ!

ನಿರ್ದೇಶಕ ನಿತೇಶ್​ ತಿವಾರಿ ಅವರು ಗುರುಕುಲದ ದೃಶ್ಯದ ಮೂಲಕ ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಆರಂಭಿಸಬೇಕು ಎಂದು ತೀರ್ಮಾನಿಸಿದ್ದಾರೆ. ಹಾಗಾಗಿ ಬಾಲ ನಟರು ಮೊದಲು ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ರಾಮ, ಲಕ್ಷ್ಮಣ ಹಾಗೂ ಭರತನ ಪಾತ್ರ ಮಾಡಲಿರುವ ಬಾಲ ಕಲಾವಿದರು ಶೂಟಿಂಗ್​ಗೆ ಹಾಜರಿ ಹಾಕಲಿದ್ದಾರೆ. ಏಪ್ರಿಲ್​ 2ರಿಂದಲೇ ಚಿತ್ರೀಕರಣ ಆರಂಭ ಆಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಮುಂಬೈನ ಫಿಲ್ಮ್​ ಸಿಟಿಯಲ್ಲಿ ಸೆಟ್​ ನಿರ್ಮಾಣ ಆಗಿದೆ. ಗುರುಕುಲದ ಸೆಟ್​ ಹಾಕಲಾಗಿದೆ. ಜೊತೆಗೆ ಗ್ರೀನ್​ ಸ್ಕ್ರೀನ್ ಕೂಡ ಬಳಸಿಕೊಳ್ಳಲಾಗುತ್ತಿದೆ. ಗುರುಕುಲದ ದೃಶ್ಯಗಳಿಂದಲೇ ಮೊದಲ ಹಂತದ ಶೂಟಿಂಗ್​ ನಡೆಯಲಿದೆ. ಗುರು ವಸಿಷ್ಠರ ಪಾತ್ರವನ್ನು ಶಿಶಿರ್​ ಶರ್ಮಾ ನಿಭಾಯಿಸಲಿದ್ದಾರೆ. ಆದರೆ ಬಾಲ ಕಲಾವಿದರ ಹೆಸರನ್ನು ಸದ್ಯಕ್ಕೆ ಗೌಪ್ಯವಾಗಿ ಇಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಪಿಂಕ್​ವಿಲ್ಲಾ’ ಸುದ್ದಿ ಪ್ರಕಟಿಸಿದೆ.

ಇದನ್ನೂ ಓದಿ: ಜನರು ‘ಸಿಂಗಂ’ ಅಂದುಕೊಂಡಿದ್ರು; ಆದ್ರೆ ರಣಬೀರ್​ ಕಪೂರ್​ ಆಗಿದ್ದು ಕೇವಲ ‘ಚಿಂಗಂ’

ರಾಮನ ಪಾತ್ರ ಮಾಡಲಿರುವ ರಣಬೀರ್​ ಕಪೂರ್​ ಅವರು ಈಗಾಗಲೇ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಈಗ ಅವರು ಲಾಸ್​ ಏಂಜಲಿಸ್​ಗೆ ತೆರಳಲಿದ್ದಾರೆ. ಅಲ್ಲಿ ಅವರ 3ಡಿ ಸ್ಕ್ಯಾನ್​ ಮಾಡಲಾಗುತ್ತಿದೆ. ಈ ಮೊದಲು ಕೂಡ ಅವರು ಒಂದೆರಡು ಬಾರಿ ಅಲ್ಲಿಗೆ ತೆರಳಿ 3ಡಿ ಸ್ಕ್ಯಾನ್​ಗೆ ಒಳಗಾಗಿದ್ದರು. ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಸಮಯದಲ್ಲಿ ಈ ಸ್ಕ್ಯಾನ್​ ಉಪಯೋಗಕ್ಕೆ ಬರಲಿದೆ. ದೊಡ್ಡ ಬಜೆಟ್​ನಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗಲಿದೆ.

ಇದನ್ನೂ ಓದಿ: ಮದುವೆ ದಿನವೇ ರಣಬೀರ್​ ಬಳಿ ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಹೆಣ್ಣಿನ ಕಡೆಯವರು?

ಪಾತ್ರವರ್ಗದ ಬಗ್ಗೆ ಅನೇಕ ಗಾಸಿಪ್​ ಹಬ್ಬಿದೆ. ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಯಶ್​ ಅವರು ರಾವಣನಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಆಂಜನೇಯನಾಗಿ ಸನ್ನಿ ಡಿಯೋಲ್​ ಕಾಣಿಸಿಕೊಳ್ಳಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಅಧಿಕೃತ ಘೋಷಣೆ ಆಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ