ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?

ವರದಿಗಳ ಪ್ರಕಾರ, ಮುಂಬೈನ ಫಿಲ್ಮ್​ ಸಿಟಿಯಲ್ಲಿ ಸೆಟ್​ ನಿರ್ಮಾಣ ಮಾಡಲಾಗಿದೆ. ಗುರುಕುಲದ ಸೆಟ್​ ಹಾಕಲಾಗಿದ್ದು, ಗ್ರೀನ್​ ಸ್ಕ್ರೀನ್ ಸಹ ಬಳಸಿಕೊಳ್ಳಲಾಗುತ್ತಿದೆ. ಗುರುಕುಲದ ದೃಶ್ಯಗಳಿಂದಲೇ ‘ರಾಮಾಯಣ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮುಖ್ಯ ಭೂಮಿಕೆ ನಿಭಾಯಿಸಲಿದ್ದು, ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ.

ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?
ರಣಬೀರ್​ ಕಪೂರ್​, ಸಾಯಿ ಪಲ್ಲವಿ, ಯಶ್​, ನಿತೇಶ್​ ತಿವಾರಿ, ಸನ್ನಿ ಡಿಯೋಲ್​
Follow us
|

Updated on: Apr 01, 2024 | 10:42 PM

‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ (Nitesh Tiwari) ಅವರು ರಾಮಾಯಣ ಕಥೆಯಾಧಾರಿತ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲು ಸಿದ್ಧರಾಗಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ರಾಮಾಯಣ ಸಿನಿಮಾ (Ramayana Movie) ಬಗ್ಗೆ ಸಿಕ್ಕಾಪಟ್ಟೆ ಗಾಳಿಸುದ್ದಿ ಹರಿದಾಡಿವೆ. ಅವುಗಳ ನಡುವೆಯೇ ಸದ್ದಿಲ್ಲದೇ ಶೂಟಿಂಗ್​ ಆರಂಭ ಆಗುತ್ತಿದೆ ಎಂದು ವರದಿ ಆಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸಲಿದ್ದಾರೆ. ಹಾಗಂತ ಅವರು ಮೊದಲು ಶೂಟಿಂಗ್​ನಲ್ಲಿ ಭಾಗಿ ಆಗುವುದಿಲ್ಲ!

ನಿರ್ದೇಶಕ ನಿತೇಶ್​ ತಿವಾರಿ ಅವರು ಗುರುಕುಲದ ದೃಶ್ಯದ ಮೂಲಕ ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಆರಂಭಿಸಬೇಕು ಎಂದು ತೀರ್ಮಾನಿಸಿದ್ದಾರೆ. ಹಾಗಾಗಿ ಬಾಲ ನಟರು ಮೊದಲು ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ರಾಮ, ಲಕ್ಷ್ಮಣ ಹಾಗೂ ಭರತನ ಪಾತ್ರ ಮಾಡಲಿರುವ ಬಾಲ ಕಲಾವಿದರು ಶೂಟಿಂಗ್​ಗೆ ಹಾಜರಿ ಹಾಕಲಿದ್ದಾರೆ. ಏಪ್ರಿಲ್​ 2ರಿಂದಲೇ ಚಿತ್ರೀಕರಣ ಆರಂಭ ಆಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಮುಂಬೈನ ಫಿಲ್ಮ್​ ಸಿಟಿಯಲ್ಲಿ ಸೆಟ್​ ನಿರ್ಮಾಣ ಆಗಿದೆ. ಗುರುಕುಲದ ಸೆಟ್​ ಹಾಕಲಾಗಿದೆ. ಜೊತೆಗೆ ಗ್ರೀನ್​ ಸ್ಕ್ರೀನ್ ಕೂಡ ಬಳಸಿಕೊಳ್ಳಲಾಗುತ್ತಿದೆ. ಗುರುಕುಲದ ದೃಶ್ಯಗಳಿಂದಲೇ ಮೊದಲ ಹಂತದ ಶೂಟಿಂಗ್​ ನಡೆಯಲಿದೆ. ಗುರು ವಸಿಷ್ಠರ ಪಾತ್ರವನ್ನು ಶಿಶಿರ್​ ಶರ್ಮಾ ನಿಭಾಯಿಸಲಿದ್ದಾರೆ. ಆದರೆ ಬಾಲ ಕಲಾವಿದರ ಹೆಸರನ್ನು ಸದ್ಯಕ್ಕೆ ಗೌಪ್ಯವಾಗಿ ಇಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಪಿಂಕ್​ವಿಲ್ಲಾ’ ಸುದ್ದಿ ಪ್ರಕಟಿಸಿದೆ.

ಇದನ್ನೂ ಓದಿ: ಜನರು ‘ಸಿಂಗಂ’ ಅಂದುಕೊಂಡಿದ್ರು; ಆದ್ರೆ ರಣಬೀರ್​ ಕಪೂರ್​ ಆಗಿದ್ದು ಕೇವಲ ‘ಚಿಂಗಂ’

ರಾಮನ ಪಾತ್ರ ಮಾಡಲಿರುವ ರಣಬೀರ್​ ಕಪೂರ್​ ಅವರು ಈಗಾಗಲೇ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಈಗ ಅವರು ಲಾಸ್​ ಏಂಜಲಿಸ್​ಗೆ ತೆರಳಲಿದ್ದಾರೆ. ಅಲ್ಲಿ ಅವರ 3ಡಿ ಸ್ಕ್ಯಾನ್​ ಮಾಡಲಾಗುತ್ತಿದೆ. ಈ ಮೊದಲು ಕೂಡ ಅವರು ಒಂದೆರಡು ಬಾರಿ ಅಲ್ಲಿಗೆ ತೆರಳಿ 3ಡಿ ಸ್ಕ್ಯಾನ್​ಗೆ ಒಳಗಾಗಿದ್ದರು. ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಸಮಯದಲ್ಲಿ ಈ ಸ್ಕ್ಯಾನ್​ ಉಪಯೋಗಕ್ಕೆ ಬರಲಿದೆ. ದೊಡ್ಡ ಬಜೆಟ್​ನಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗಲಿದೆ.

ಇದನ್ನೂ ಓದಿ: ಮದುವೆ ದಿನವೇ ರಣಬೀರ್​ ಬಳಿ ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಹೆಣ್ಣಿನ ಕಡೆಯವರು?

ಪಾತ್ರವರ್ಗದ ಬಗ್ಗೆ ಅನೇಕ ಗಾಸಿಪ್​ ಹಬ್ಬಿದೆ. ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಯಶ್​ ಅವರು ರಾವಣನಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಆಂಜನೇಯನಾಗಿ ಸನ್ನಿ ಡಿಯೋಲ್​ ಕಾಣಿಸಿಕೊಳ್ಳಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಅಧಿಕೃತ ಘೋಷಣೆ ಆಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ