ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?

|

Updated on: Apr 01, 2024 | 10:42 PM

ವರದಿಗಳ ಪ್ರಕಾರ, ಮುಂಬೈನ ಫಿಲ್ಮ್​ ಸಿಟಿಯಲ್ಲಿ ಸೆಟ್​ ನಿರ್ಮಾಣ ಮಾಡಲಾಗಿದೆ. ಗುರುಕುಲದ ಸೆಟ್​ ಹಾಕಲಾಗಿದ್ದು, ಗ್ರೀನ್​ ಸ್ಕ್ರೀನ್ ಸಹ ಬಳಸಿಕೊಳ್ಳಲಾಗುತ್ತಿದೆ. ಗುರುಕುಲದ ದೃಶ್ಯಗಳಿಂದಲೇ ‘ರಾಮಾಯಣ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮುಖ್ಯ ಭೂಮಿಕೆ ನಿಭಾಯಿಸಲಿದ್ದು, ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ.

ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?
ರಣಬೀರ್​ ಕಪೂರ್​, ಸಾಯಿ ಪಲ್ಲವಿ, ಯಶ್​, ನಿತೇಶ್​ ತಿವಾರಿ, ಸನ್ನಿ ಡಿಯೋಲ್​
Follow us on

‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ (Nitesh Tiwari) ಅವರು ರಾಮಾಯಣ ಕಥೆಯಾಧಾರಿತ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲು ಸಿದ್ಧರಾಗಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ರಾಮಾಯಣ ಸಿನಿಮಾ (Ramayana Movie) ಬಗ್ಗೆ ಸಿಕ್ಕಾಪಟ್ಟೆ ಗಾಳಿಸುದ್ದಿ ಹರಿದಾಡಿವೆ. ಅವುಗಳ ನಡುವೆಯೇ ಸದ್ದಿಲ್ಲದೇ ಶೂಟಿಂಗ್​ ಆರಂಭ ಆಗುತ್ತಿದೆ ಎಂದು ವರದಿ ಆಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸಲಿದ್ದಾರೆ. ಹಾಗಂತ ಅವರು ಮೊದಲು ಶೂಟಿಂಗ್​ನಲ್ಲಿ ಭಾಗಿ ಆಗುವುದಿಲ್ಲ!

ನಿರ್ದೇಶಕ ನಿತೇಶ್​ ತಿವಾರಿ ಅವರು ಗುರುಕುಲದ ದೃಶ್ಯದ ಮೂಲಕ ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಆರಂಭಿಸಬೇಕು ಎಂದು ತೀರ್ಮಾನಿಸಿದ್ದಾರೆ. ಹಾಗಾಗಿ ಬಾಲ ನಟರು ಮೊದಲು ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ರಾಮ, ಲಕ್ಷ್ಮಣ ಹಾಗೂ ಭರತನ ಪಾತ್ರ ಮಾಡಲಿರುವ ಬಾಲ ಕಲಾವಿದರು ಶೂಟಿಂಗ್​ಗೆ ಹಾಜರಿ ಹಾಕಲಿದ್ದಾರೆ. ಏಪ್ರಿಲ್​ 2ರಿಂದಲೇ ಚಿತ್ರೀಕರಣ ಆರಂಭ ಆಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಮುಂಬೈನ ಫಿಲ್ಮ್​ ಸಿಟಿಯಲ್ಲಿ ಸೆಟ್​ ನಿರ್ಮಾಣ ಆಗಿದೆ. ಗುರುಕುಲದ ಸೆಟ್​ ಹಾಕಲಾಗಿದೆ. ಜೊತೆಗೆ ಗ್ರೀನ್​ ಸ್ಕ್ರೀನ್ ಕೂಡ ಬಳಸಿಕೊಳ್ಳಲಾಗುತ್ತಿದೆ. ಗುರುಕುಲದ ದೃಶ್ಯಗಳಿಂದಲೇ ಮೊದಲ ಹಂತದ ಶೂಟಿಂಗ್​ ನಡೆಯಲಿದೆ. ಗುರು ವಸಿಷ್ಠರ ಪಾತ್ರವನ್ನು ಶಿಶಿರ್​ ಶರ್ಮಾ ನಿಭಾಯಿಸಲಿದ್ದಾರೆ. ಆದರೆ ಬಾಲ ಕಲಾವಿದರ ಹೆಸರನ್ನು ಸದ್ಯಕ್ಕೆ ಗೌಪ್ಯವಾಗಿ ಇಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಪಿಂಕ್​ವಿಲ್ಲಾ’ ಸುದ್ದಿ ಪ್ರಕಟಿಸಿದೆ.

ಇದನ್ನೂ ಓದಿ: ಜನರು ‘ಸಿಂಗಂ’ ಅಂದುಕೊಂಡಿದ್ರು; ಆದ್ರೆ ರಣಬೀರ್​ ಕಪೂರ್​ ಆಗಿದ್ದು ಕೇವಲ ‘ಚಿಂಗಂ’

ರಾಮನ ಪಾತ್ರ ಮಾಡಲಿರುವ ರಣಬೀರ್​ ಕಪೂರ್​ ಅವರು ಈಗಾಗಲೇ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಈಗ ಅವರು ಲಾಸ್​ ಏಂಜಲಿಸ್​ಗೆ ತೆರಳಲಿದ್ದಾರೆ. ಅಲ್ಲಿ ಅವರ 3ಡಿ ಸ್ಕ್ಯಾನ್​ ಮಾಡಲಾಗುತ್ತಿದೆ. ಈ ಮೊದಲು ಕೂಡ ಅವರು ಒಂದೆರಡು ಬಾರಿ ಅಲ್ಲಿಗೆ ತೆರಳಿ 3ಡಿ ಸ್ಕ್ಯಾನ್​ಗೆ ಒಳಗಾಗಿದ್ದರು. ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಸಮಯದಲ್ಲಿ ಈ ಸ್ಕ್ಯಾನ್​ ಉಪಯೋಗಕ್ಕೆ ಬರಲಿದೆ. ದೊಡ್ಡ ಬಜೆಟ್​ನಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗಲಿದೆ.

ಇದನ್ನೂ ಓದಿ: ಮದುವೆ ದಿನವೇ ರಣಬೀರ್​ ಬಳಿ ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಹೆಣ್ಣಿನ ಕಡೆಯವರು?

ಪಾತ್ರವರ್ಗದ ಬಗ್ಗೆ ಅನೇಕ ಗಾಸಿಪ್​ ಹಬ್ಬಿದೆ. ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಯಶ್​ ಅವರು ರಾವಣನಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಆಂಜನೇಯನಾಗಿ ಸನ್ನಿ ಡಿಯೋಲ್​ ಕಾಣಿಸಿಕೊಳ್ಳಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಅಧಿಕೃತ ಘೋಷಣೆ ಆಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.