AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

750 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ ಸಿನಿಮಾ; ಈ ಸ್ಟಾರ್​ ನಟರ ಸಂಭಾವನೆ 75 ಕೋಟಿ

ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಜೆಟ್​ 750 ಕೋಟಿ ಮೀರಲಿದೆ ಎನ್ನಲಾಗಿದೆ. ರಾಮಾಯಣ ಸಿನಿಮಾ ಹಿಂದಿ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಿಗೂ ಡಬ್​ ಆಗಿ ತೆರೆಕಾಣಲಿದೆ.

750 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ ಸಿನಿಮಾ; ಈ ಸ್ಟಾರ್​ ನಟರ ಸಂಭಾವನೆ 75 ಕೋಟಿ
ನಿತೇಶ್​ ತಿವಾರಿ
TV9 Web
| Edited By: |

Updated on: Oct 09, 2021 | 2:28 PM

Share

ರಾಮಾಯಣ ಹಾಗೂ ಮಹಾಭಾರತವನ್ನು ಆಧರಿಸಿ ಈಗಾಗಲೇ ಸಾಕಷ್ಟು ಧಾರಾವಾಹಿಗಳು ಹಾಗೂ ಸಿನಿಮಾಗಳು ಸಿದ್ಧವಾಗಿವೆ. ಈ ಮಹಾಕಾವ್ಯಗಳ ಕಥೆಯ ಒಂದೆಳೆ ಇಟ್ಟುಕೊಂಡು ಸಿನಿಮಾ ಸಿದ್ಧಪಡಿಸಿದ ಉದಾಹರಣೆಯೂ ಇದೆ. ಇತ್ತೀಚಿನ ವರ್ಷಗಳಲ್ಲಿ ಸ್ಟಾರ್​ ನಟರನ್ನು ಇಟ್ಟುಕೊಂಡು ಈ ರೀತಿಯ ಸಿನಿಮಾಗಳನ್ನು ಮಾಡಲಾಗುತ್ತಿದೆ. ಈಗ ಬಾಲಿವುಡ್​ ಅಂಗಳದಲ್ಲಿ ಅಂಥದ್ದೇ ಸಿನಿಮಾ ರೆಡಿ ಆಗುತ್ತಿದೆ. ಇದರ ಬಜೆಟ್​ ಬರೋಬ್ಬರಿ 750 ಕೋಟಿ ರೂಪಾಯಿ ಅನ್ನೋದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ನಿತೇಶ್​ ತಿವಾರಿ ಅವರು ರಾಮಾಯಣ ಕಥೆ ಆಧರಿಸಿ ಸಿನಿಮಾ ನಿರ್ದೇಶನ ಮಾಡೋಕೆ ರೆಡಿ ಆಗಿದ್ದಾರೆ. ಮಧು ಮಂತೆನಾ ಅವರು ಇದನ್ನು ನಿರ್ಮಾಣ ಮಾಡುತ್ತಿದ್ದಾರೆ. ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಜೆಟ್​ 750 ಕೋಟಿ ಮೀರಲಿದೆ ಎನ್ನಲಾಗಿದೆ.

ಹೃತಿಕ್​ ರೋಷನ್​ ಹಾಗೂ ರಣಬೀರ್​ ಕಪೂರ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಇವರು ದಕ್ಷಿಣ ಭಾರತದ ಸಿನಿಪ್ರಿಯರಿಗೂ ಪರಿಚಯ. ರಾಮಾಯಣ ಸಿನಿಮಾ ಹಿಂದಿ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಿಗೂ ಡಬ್​ ಆಗಿ ತೆರೆಕಾಣಲಿದೆ. ಹೀಗಾಗಿ, ಹೃತಿಕ್​ ಹಾಗೂ ರಣಬೀರ್​ ಅವರನ್ನು ಅನುಕ್ರಮವಾಗಿ ರಾವಣ ಮತ್ತು ರಾಮನ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಇದರ ಜತೆಗೆ ಕೆಲ ದಕ್ಷಿಣ ಭಾರತದ ಕಲಾವಿದರೂ ಈ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ.

ಹಾಗಾದರೆ ಈ ಸಿನಿಮಾದ ಬಜೆಟ್​ ಇಷ್ಟೊಂದು ಹೆಚ್ಚಾಗಲು ಕಾರಣವೇನು? ಆ ಪ್ರಶ್ನೆಗೂ ಉತ್ತರವಿದೆ. ಈ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿರುವ ರಣಬೀರ್​ಗೆ ಹಾಗೂ ರಾವಣನ ಪಾತ್ರ ಮಾಡುತ್ತಿರುವ ಹೃತಿಕ್​ಗೆ ಚಿತ್ರತಂಡ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಆಫರ್​ ಮಾಡಿದೆ. ಇನ್ನು, ಅದ್ದೂರಿ ಸೆಟ್​ ಹಾಗೂ ಗ್ರಾಫಿಕ್​ ಕೆಲಸಗಳಿಗೆ ಹೆಚ್ಚಿನ ಹಣ ಹಿಡಿಯಲಿದೆ. ಈ ಕಾರಣಕ್ಕೆ ಸಿನಿಮಾ ಬಜೆಟ್​ ಈ ಮಟ್ಟಕ್ಕೆ ಏರಿಕೆ ಆಗಿದೆ.

ರಾಮಾಯಣ ಎಂದರೆ ಅಲ್ಲಿ ಸೀತೆಯ ಪಾತ್ರ ಬಹಳ ಮಹತ್ವ ಪಡೆದುಕೊಳ್ಳಲಿದೆ. ಈ ಕಾರಣಕ್ಕೆ ಈ ಪಾತ್ರಕ್ಕಾಗಿ ನಿರ್ಮಾಪಕರು ಹುಡುಕಾಟ ನಡೆಸಿದ್ದಾರೆ.  ಇದರ ಜತೆಗೆ ಇನ್ನೂ ಕೆಲ ಪ್ರಮುಖ ಪಾತ್ರಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಬೇಕಿದೆ.

ರಾಮಾಯಣದ ಕಥೆ ಆಧರಿಸಿ ತೆಲುಗಿನಲ್ಲಿ ಆದಿಪುರುಷ್​ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ರಾವಣನ ಪಾತ್ರಕ್ಕೆ ಸೈಫ್​ ಅಲಿ ಖಾನ್​ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Kareena Kapoor: ಸೀತೆಯ ಪಾತ್ರಕ್ಕೆ 12 ಕೋಟಿ ಸಂಭಾವನೆ ಕೇಳಿದ ಸುದ್ದಿಗೆ ತಲೆ ಅಲ್ಲಾಡಿಸಿದ ಕರೀನಾ; ಏನಿದರ ಅರ್ಥ?

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು