AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

750 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ ಸಿನಿಮಾ; ಈ ಸ್ಟಾರ್​ ನಟರ ಸಂಭಾವನೆ 75 ಕೋಟಿ

ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಜೆಟ್​ 750 ಕೋಟಿ ಮೀರಲಿದೆ ಎನ್ನಲಾಗಿದೆ. ರಾಮಾಯಣ ಸಿನಿಮಾ ಹಿಂದಿ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಿಗೂ ಡಬ್​ ಆಗಿ ತೆರೆಕಾಣಲಿದೆ.

750 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ ಸಿನಿಮಾ; ಈ ಸ್ಟಾರ್​ ನಟರ ಸಂಭಾವನೆ 75 ಕೋಟಿ
ನಿತೇಶ್​ ತಿವಾರಿ
TV9 Web
| Edited By: |

Updated on: Oct 09, 2021 | 2:28 PM

Share

ರಾಮಾಯಣ ಹಾಗೂ ಮಹಾಭಾರತವನ್ನು ಆಧರಿಸಿ ಈಗಾಗಲೇ ಸಾಕಷ್ಟು ಧಾರಾವಾಹಿಗಳು ಹಾಗೂ ಸಿನಿಮಾಗಳು ಸಿದ್ಧವಾಗಿವೆ. ಈ ಮಹಾಕಾವ್ಯಗಳ ಕಥೆಯ ಒಂದೆಳೆ ಇಟ್ಟುಕೊಂಡು ಸಿನಿಮಾ ಸಿದ್ಧಪಡಿಸಿದ ಉದಾಹರಣೆಯೂ ಇದೆ. ಇತ್ತೀಚಿನ ವರ್ಷಗಳಲ್ಲಿ ಸ್ಟಾರ್​ ನಟರನ್ನು ಇಟ್ಟುಕೊಂಡು ಈ ರೀತಿಯ ಸಿನಿಮಾಗಳನ್ನು ಮಾಡಲಾಗುತ್ತಿದೆ. ಈಗ ಬಾಲಿವುಡ್​ ಅಂಗಳದಲ್ಲಿ ಅಂಥದ್ದೇ ಸಿನಿಮಾ ರೆಡಿ ಆಗುತ್ತಿದೆ. ಇದರ ಬಜೆಟ್​ ಬರೋಬ್ಬರಿ 750 ಕೋಟಿ ರೂಪಾಯಿ ಅನ್ನೋದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ನಿತೇಶ್​ ತಿವಾರಿ ಅವರು ರಾಮಾಯಣ ಕಥೆ ಆಧರಿಸಿ ಸಿನಿಮಾ ನಿರ್ದೇಶನ ಮಾಡೋಕೆ ರೆಡಿ ಆಗಿದ್ದಾರೆ. ಮಧು ಮಂತೆನಾ ಅವರು ಇದನ್ನು ನಿರ್ಮಾಣ ಮಾಡುತ್ತಿದ್ದಾರೆ. ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಜೆಟ್​ 750 ಕೋಟಿ ಮೀರಲಿದೆ ಎನ್ನಲಾಗಿದೆ.

ಹೃತಿಕ್​ ರೋಷನ್​ ಹಾಗೂ ರಣಬೀರ್​ ಕಪೂರ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಇವರು ದಕ್ಷಿಣ ಭಾರತದ ಸಿನಿಪ್ರಿಯರಿಗೂ ಪರಿಚಯ. ರಾಮಾಯಣ ಸಿನಿಮಾ ಹಿಂದಿ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಿಗೂ ಡಬ್​ ಆಗಿ ತೆರೆಕಾಣಲಿದೆ. ಹೀಗಾಗಿ, ಹೃತಿಕ್​ ಹಾಗೂ ರಣಬೀರ್​ ಅವರನ್ನು ಅನುಕ್ರಮವಾಗಿ ರಾವಣ ಮತ್ತು ರಾಮನ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಇದರ ಜತೆಗೆ ಕೆಲ ದಕ್ಷಿಣ ಭಾರತದ ಕಲಾವಿದರೂ ಈ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ.

ಹಾಗಾದರೆ ಈ ಸಿನಿಮಾದ ಬಜೆಟ್​ ಇಷ್ಟೊಂದು ಹೆಚ್ಚಾಗಲು ಕಾರಣವೇನು? ಆ ಪ್ರಶ್ನೆಗೂ ಉತ್ತರವಿದೆ. ಈ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿರುವ ರಣಬೀರ್​ಗೆ ಹಾಗೂ ರಾವಣನ ಪಾತ್ರ ಮಾಡುತ್ತಿರುವ ಹೃತಿಕ್​ಗೆ ಚಿತ್ರತಂಡ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಆಫರ್​ ಮಾಡಿದೆ. ಇನ್ನು, ಅದ್ದೂರಿ ಸೆಟ್​ ಹಾಗೂ ಗ್ರಾಫಿಕ್​ ಕೆಲಸಗಳಿಗೆ ಹೆಚ್ಚಿನ ಹಣ ಹಿಡಿಯಲಿದೆ. ಈ ಕಾರಣಕ್ಕೆ ಸಿನಿಮಾ ಬಜೆಟ್​ ಈ ಮಟ್ಟಕ್ಕೆ ಏರಿಕೆ ಆಗಿದೆ.

ರಾಮಾಯಣ ಎಂದರೆ ಅಲ್ಲಿ ಸೀತೆಯ ಪಾತ್ರ ಬಹಳ ಮಹತ್ವ ಪಡೆದುಕೊಳ್ಳಲಿದೆ. ಈ ಕಾರಣಕ್ಕೆ ಈ ಪಾತ್ರಕ್ಕಾಗಿ ನಿರ್ಮಾಪಕರು ಹುಡುಕಾಟ ನಡೆಸಿದ್ದಾರೆ.  ಇದರ ಜತೆಗೆ ಇನ್ನೂ ಕೆಲ ಪ್ರಮುಖ ಪಾತ್ರಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಬೇಕಿದೆ.

ರಾಮಾಯಣದ ಕಥೆ ಆಧರಿಸಿ ತೆಲುಗಿನಲ್ಲಿ ಆದಿಪುರುಷ್​ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ರಾವಣನ ಪಾತ್ರಕ್ಕೆ ಸೈಫ್​ ಅಲಿ ಖಾನ್​ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Kareena Kapoor: ಸೀತೆಯ ಪಾತ್ರಕ್ಕೆ 12 ಕೋಟಿ ಸಂಭಾವನೆ ಕೇಳಿದ ಸುದ್ದಿಗೆ ತಲೆ ಅಲ್ಲಾಡಿಸಿದ ಕರೀನಾ; ಏನಿದರ ಅರ್ಥ?

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್