
‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ.
ಯಶ್ ಅವರು ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಯಶ್ ಅವರಿಗೆ ರಣಬೀರ್ ಕಪೂರ್ ಬಗ್ಗೆ ಕೇಳಲಾಯಿತು. ಆಗ ಯಶ್ ಅವರು ಮಾತನಾಡುತ್ತಾ, ‘ನಾನು ಹಾಗೂ ರಣಬೀರ್ ಕಪೂರ್ ರಾಮಾಯಣದಲ್ಲಿ ಈವರೆಗೆ ಒಟ್ಟಿಗೆ ಕಾಣಿಸಿಕೊಂಡಿಲ್ಲ’ ಎಂದು ಹೇಳಿದ್ದಾರೆ. ಅಂದರೆ, ಮೊದಲ ಭಾಗದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುವುದಿಲ್ಲ ಎಂಬುದನ್ನು ಖಚಿತ ಮಾಡಿದಂತಾಯ್ತು.
BIG MISTAKE 🚨🚨🚨🚨#Yash unintentionally dropped the biggest spoiler of #Ramayana Part One, revealing that his character Raavana will not share screen space with #RanbirKapoor ‘s Rama.🔔
Yash about the on screen dynamics with Ranbir Kapoor, he said, “Interestingly, we both… pic.twitter.com/4TNdZOPn2x
— Always Bollywood (@AlwaysBollywood) April 15, 2026
ಆದರೆ, ಕೆಲವರು ಇದನ್ನು ಬೇರೆ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ‘ಯಶ್ ಹಾಗೂ ರಣಬೀರ್ ಕಪೂರ್ ದೃಶ್ಯ ಮೊದಲ ಪಾರ್ಟ್ನಲ್ಲಿ ಇರಲಿದೆ ಎಂದು ನಿರೀಕ್ಷಿಸಿದವರಿಗೆ ಇದು ನಿರಾಸೆ ಮೂಡಿಸಿದೆ. ಯಶ್ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿದ್ದಾರೆ’ ಎಂದೆಲ್ಲ ಹೇಳಿದರು.
ಇದನ್ನೂ ಓದಿ: ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್
ಆದರೆ, ಅಸಲಿಯತ್ತು ಹಾಗಿಲ್ಲ. ವಾಲ್ಮೀಕಿ ರಾಮಾಯಣದ ಪ್ರಕಾರ, ಲಂಕಾದಲ್ಲಿ ಅಂತಿಮ ಯುದ್ಧ ನಡೆಯುವವರೆಗೂ ರಾಮ ಮತ್ತು ರಾವಣ ಮುಖಾಮುಖಿಯಾಗಲಿಲ್ಲ. ಈ ಸಿನಿಮಾ ಎರಡು ಭಾಗದಲ್ಲಿ ಬರಲಿದೆ ಎಂದು ಮೊದಲೇ ಹೇಳಲಾಗಿದೆ. ಹೀಗಿರುವಾಗ ಯಶ್ ಹೇಳಿದ್ದು ಸ್ಪಾಯ್ಲರ್ ಹೇಗಾಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು, ‘ಇವರು ಕ್ಲೈಮ್ಯಾಕ್ಸ್ನ ಮೊದಲ ಭಾಗದಲ್ಲೇ ನಿರೀಕ್ಷೆ ಮಾಡಿತ್ತಿದ್ದಾರೆ’ ಅನಿಸುತ್ತದೆ ಎಂದು ಟೀಕೆ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:27 am, Thu, 16 April 26