AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಕೆಲಸದ ಮಧ್ಯೆ ಶೀಘ್ರವೇ ಹೊಸ ಸಿನಿಮಾ ಸೆಟ್ ಸೇರಿಕೊಳ್ಳಲಿದ್ದಾರೆ ಯಶ್

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ರಣಬಿರ್ ಕಪೂರ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್ ಹಾಗೂ ಯಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಯಶ್ ರಾವಣನಾಗಿ ಭಾಗ 1 ರಲ್ಲಿ ಕಡಿಮೆ ಇದ್ದು, ಭಾಗ 2 ರಲ್ಲಿ ಹೆಚ್ಚಿನ ಸಮಯ ಕಾಣಿಸಿಕೊಳ್ಳಲಿದ್ದಾರೆ.

‘ಟಾಕ್ಸಿಕ್’ ಕೆಲಸದ ಮಧ್ಯೆ ಶೀಘ್ರವೇ ಹೊಸ ಸಿನಿಮಾ ಸೆಟ್ ಸೇರಿಕೊಳ್ಳಲಿದ್ದಾರೆ ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on: Mar 12, 2026 | 1:04 PM

Share

ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ‘ರಾಮಾಯಣ’ ಕೂಡ ಒಂದು. ಈ ಚಿತ್ರವನ್ನು ಯಾವ ರೀತಿ ಮಾಡಿರಬಹುದು ಎಂಬ ಕುತೂಹಲ ಮೂಡಿದೆ. ಈ ವರ್ಷದ ದೀಪಾವಳಿಗೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಯಶ್ ಇತ್ತೀಚೆಗೆ ಪೂರೈಸಿದ್ದರು. ಈಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಶೂಟಿಂಗ್ ಶುರುವಾಗಿದೆ.

ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2026ರ ದೀಪಾವಳಿಗೆ ಒಂದು ಭಾಗ ಹಾಗೂ 2027ರ ದೀಪಾವಳಿಗೆ ಎರಡನೇ ಭಾಗವನ್ನು ರಿಲೀಸ್ ಮಾಡುವ ಆಲೋಚನೆ ಅವರಿಗೆ ಇದೆ. ಈಗ ಸಿನಿಮಾದ ಎರಡನೇ ಭಾಗಕ್ಕೆ ಶೂಟಿಂಗ್ ಆರಂಭ ಆಗಿದೆ. ರಣಬಿರ್ ಕಪೂರ್ ಸದ್ಯ ಸೆಟ್​​ನಲ್ಲಿ ಇದ್ದು, ಶೀಘ್ರವೇ ಯಶ್ ಅವರು ಇದರ ಭಾಗ ಆಗಲಿದ್ದಾರೆ.

‘ರಾಮಾಯಣ’ ಚಿತ್ರದ ಮೊದಲ ಭಾಗದಲ್ಲಿ ಯಶ್ ಅವರ ಭಾಗ ಕಡಿಮೆ ಇರಲಿದೆ ಎನ್ನಲಾಗಿದೆ. ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾವಣನ ಎಂಟ್ರಿಯೇ ಲೇಟ್. ಜೊತೆಗೆ ಅರ್ಧ ರಾಮಾಯಣವನ್ನು ಮಾತ್ರ ಮೊದಲ ಭಾಗದಲ್ಲಿ ಹೇಳುತ್ತಿದ್ದು, ಎರಡನೇ ಭಾಗದಲ್ಲಿ ಯಶ್ ಅವರ ಪಾತ್ರದ ಅವಧಿ ಹೆಚ್ಚಿರಲಿದೆ. ಹೀಗಾಗಿ, ಅವರು ಹೆಚ್ಚು ಶೂಟ್​​ನ ಭಾಗ ಆಗಲಿದ್ದಾರೆ.

ರಣಬೀರ್ ಈಗಾಗಲೇ ಶೂಟಿಂಗ್​​​ನಲ್ಲಿ ಭಾಗಿ ಆಗುತ್ತಿದ್ದಾರೆ. ವೀಕೆಂಡ್ ವೇಳೆಗೆ ಯಶ್, ಸನ್ನಿ ಡಿಯೋಲ್ ಮೊದಲಾದವರು ಸೆಟ್​​​ಗೆ ತೆರಳುವ ಸಾಧ್ಯತೆ ಇದೆ.ಯಶ್ ಅವರನ್ನು ರಾವಣನ ಲುಕ್​​ನಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ರಾಮನಾಗಿ ರಣಬೀರ್ ಕಪೂರ್, ಸೀತಾ ಮಾತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಿದ್ದಾರೆ. ಎರಡನೇ ಭಾಗದಲ್ಲಿ ಶ್ರೀಲಂಕಾದ ಕಥೆ ಇರಲಿದೆ. ಅದಕ್ಕಾಗಿ ದೊಡ್ಡ ದೊಡ್ಡ ಸೆಟ್​​​ಗಳ ನಿರ್ಮಾಣ ಮುಂಬೈ ಸ್ಟುಡಿಯೋದಲ್ಲಿ ಆಗಿದೆ.

ಇದನ್ನೂ ಓದಿ: ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಜೂನ್​ ಅಲ್ಲಿ ರಿಲೀಸ್ ಆಗಲಿದೆ. ಇದಾದ ಕೆಲವು ತಿಂಗಳ ಬಳಿಕ ‘ರಾಮಾಯಣ’ ತೆರೆಗೆ ಬರಲಿದೆ. ಯಾವ ರೀತಿಯಲ್ಲಿ ಸಿನಿಮಾ ಇರಲಿದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ