AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿ ಕುರಿತ ಹಿಂದಿ ಸಿನಿಮಾದಲ್ಲಿ ದಕ್ಷಿಣ ಸ್ಟಾರ್ ನಟ ಔರಂಗಾಜೇಬ್

ಛತ್ರಪತಿ ಶಿವಾಜಿ ಕುರಿತಾದ ಸಿನಿಮಾ ಹಿಂದಿಯಲ್ಲಿ ಸೆಟ್ಟೇರುತ್ತಿದೆ. ಸಿನಿಮಾನಲ್ಲಿ ಶಾಹಿದ್ ಕಪೂರ್ ಶಿವಾಜಿ ಪಾತ್ರದಲ್ಲಿ ನಟಿಸಲಿದ್ದಾರೆ. ದಕ್ಷಿಣ ಭಾರತದ ಸ್ಟಾರ್ ನಟ ಔರಂಗಾಜೇಬನ ಪಾತ್ರದಲ್ಲಿ ನಟಿಸಲಿದ್ದಾರೆ.

ಶಿವಾಜಿ ಕುರಿತ ಹಿಂದಿ ಸಿನಿಮಾದಲ್ಲಿ ದಕ್ಷಿಣ ಸ್ಟಾರ್ ನಟ ಔರಂಗಾಜೇಬ್
ಮಂಜುನಾಥ ಸಿ.
|

Updated on: Jun 08, 2024 | 6:24 PM

Share

ಬಾಲಿವುಡ್​ನಲ್ಲಿ (Bollywood) ವ್ಯಕ್ತಿಗಳ ಜೀವನ ಆಧರಿಸಿದ ಸಿನಿಮಾಗಳು ಒಂದರ ಹಿಂದೆ ಒಂದು ಬರುತ್ತಲೇ ಇರುತ್ತವೆ. ಬಯೋಗ್ರಫಿ ಸಿನಿಮಾಗಳ ಬಳಿಕ ಐತಿಹಾಸಿಕ ಸಿನಿಮಾಗಳ ಟ್ರೆಂಡ್ ಸಹ ನಡೆಯುತ್ತಲೇ ಬಂದಿದೆ. ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’, ಅಜಯ್ ದೇವಗನ್​ರ ‘ತಾನಾಜಿ’, ‘ಪಾಣಿಪತ್’, ‘ಬಾಜಿರಾವ್ ಮಸ್ತಾನಿ’, ‘ಪದ್ಮಾವತ್’ ಇನ್ನೂ ಕೆಲವು ಸಿನಿಮಾಗಳು ಗಮನ ಸೆಳೆದಿವೆ. ಇದೀಗ ಛತ್ರಪತಿ ಶಿವಾಜಿ ಕುರಿತಾದ ‘ಶಿವಾಜಿ’ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಸಿನಿಮಾದಲ್ಲಿ ಔರಂಗಾಜೇಬನ ಪಾತ್ರದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟರೊಬ್ಬರು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಅಕ್ಷಯ್ ಕುಮಾರ್ ನಟಿಸಿದ್ದ ‘ಓಎಂಜಿ 2’ ಸಿನಿಮಾ ನಿರ್ದೇಶನ ಮಾಡಿದ್ದ ಅಮಿತ್ ರಾಯ್, ಶಿವಾಜಿ ಕುರಿತಾದ ಹೊಸ ಸಿನಿಮಾ ಪ್ರಾರಂಭ ಮಾಡುತ್ತಿದ್ದು, ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರದಲ್ಲಿ ಬಾಲಿವುಡ್ ನಟ ಶಾಹಿದ್ ಕಪೂರ್ ನಟಿಸಲಿದ್ದಾರೆ. ಸಿನಿಮಾವನ್ನು ವಾಕೋ ಫಿಲಮ್ಸ್ ಮತ್ತು ತೆಲುಗಿನ ನಿರ್ಮಾಪಕ ದಿಲ್ ರಾಜು ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಿದ್ದಾರೆ. ಸಿನಿಮಾದ ನಾಯಕನಾಗಿ ಶಾಹಿದ್ ಕಪೂರ್ ಆಯ್ಕೆ ಆಗಿದ್ದಾರೆ. ಆದರೆ ಔರಂಗಾಜೇಬನ ಪಾತ್ರಕ್ಕೆ ದಕ್ಷಿಣ ಭಾರತದ ಸ್ಟಾರ್ ನಟರೊಬ್ಬರನ್ನು ಕೇಳಲಾಗಿದೆ.

‘ಬಾಹುಬಲಿ’ ಸಿನಿಮಾದಲ್ಲಿ ಬಲ್ಲಾಳದೇವನಾಗಿ ಮಿಂಚಿರುವ ಬಹುಭಾಷಾ ನಟ, ನಿರ್ಮಾಪಕ ರಾಣಾ ದಗ್ಗುಬಾಟಿಯನ್ನು ಔರಂಗಾಜೇಬನ ಪಾತ್ರದಲ್ಲಿ ನಟಿಸುವಂತೆ ಕೇಳಲಾಗಿದೆ. ಅಮಿತ್ ರಾಯ್, ಔರಂಗಾಜೆಬನ ಪಾತ್ರಕ್ಕೆ ರಾಣಾ ದಗ್ಗುಬಾಟಿಯೇ ಸೂಕ್ತ ಎಂದಿರುವ ಕಾರಣ ಈಗಾಗಲೇ ಎರಡು ಬಾರಿ ರಾಣಾ ದಗ್ಗುಬಾಟಿಯ ಬಳಿ ಸಿನಿಮಾದ ವಿಷಯವಾಗಿ ಮಾತುಕತೆ ಮಾಡಲಾಗಿದೆ. ಆದರೆ ರಾಣಾ ಒಪ್ಪಿಕೊಂಡಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಖಾತ್ರಿಯಿಲ್ಲ.

ಇದನ್ನೂ ಓದಿ:ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಸ್ಥಗಿತ

ರಾಣಾ ದಗ್ಗುಬಾಟಿ ‘ಬಾಹುಬಲಿ’ ಸಿನಿಮಾದ ಹೊರತಾಗಿ ಇನ್ಯಾವುದೇ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದಿಲ್ಲ. ನಾಯಕ ನಟನಾಗಿಯೇ ನಟಿಸಿದ್ದಾರೆ. ಅಥವಾ ತುಸುವೇ ಗ್ರೇ ಶೇಡ್​ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಈಗ ಪರಭಾಷೆಯ ಸಿನಿಮಾದಲ್ಲಿ ಪರಿಪೂರ್ಣ ವಿಲನ್ ಪಾತ್ರದಲ್ಲಿ ನಟಿಸಲು ಒಪ್ಪುತ್ತಾರೆಯೇ ಎಂಬುದು ಕುತೂಹಲದ ವಿಷಯ.

ಶಾಹಿದ್ ಕಪೂರ್ ಈ ಹಿಂದೆ ‘ಪದ್ಮಾವತ್’ ಸಿನಿಮಾದಲ್ಲಿ ರಾಜಾ ರತನ್ ಸಿಂಗ್ ಪಾತ್ರದಲ್ಲಿ ನಟಸಿದ್ದರು. ಇದೀಗ ಛತ್ರಪತಿ ಶಿವಾಜಿ ಪಾತ್ರದಲ್ಲಿ ನಟಿಸಲಿದ್ದಾರೆ. ಇದಕ್ಕೂ ಹಿಂದೆ ‘ರಂಗೂನ್’ ಹೆಸರಿನ ಎರಡನೇ ವಿಶ್ವಯುದ್ಧದ ಸಮಯದ ಸಿನಿಮಾದಲ್ಲಿ ನಟಿಸಿದ್ದರು. ಇನ್ನು ರಾಣಾ ದಗ್ಗುಬಾಟಿ ಸಹ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ನಿರ್ಮಾಪಕರೂ ಆಗಿರುವ ರಾಣಾ ಕೆಲವು ಸಿನಿಮಾಗಳ ಮೇಲೆ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ