AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆ ಮೇಲೆ ಮತ್ತೆ ಒಂದಾಗುತ್ತಿರುವ ಆಲಿಯಾ-ರಣ್​ಬೀರ್, ವಿಕ್ಕಿ ವಿಲನ್?

Ranbir-Alia: ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ದಂಪತಿ ರಣ್​ಬೀರ್ ಕಪೂರ್-ಆಲಿಯಾ ಭಟ್ ಇದೀಗ ಮತ್ತೊಮ್ಮೆ ಒಟ್ಟಿಗೆ ನಟಿಸುತ್ತಿದ್ದಾರೆ.

ತೆರೆ ಮೇಲೆ ಮತ್ತೆ ಒಂದಾಗುತ್ತಿರುವ ಆಲಿಯಾ-ರಣ್​ಬೀರ್, ವಿಕ್ಕಿ ವಿಲನ್?
ಮಂಜುನಾಥ ಸಿ.
|

Updated on: Jan 24, 2024 | 8:10 PM

Share

ಆಲಿಯಾ ಭಟ್ (Alia Bhatt) ಹಾಗೂ ರಣ್​ಬೀರ್ ಕಪೂರ್ (Ranbir Kapoor) ಜೋಡಿ ಒಟ್ಟಿಗೆ ನಟಿಸಿದ್ದ ‘ಬ್ರಹ್ಮಾಸ್ತ್ರ’ ಸಿನಿಮಾ 2022ರ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಹಿಟ್​ಗಳ ಕೊರತೆ ಎದುರಿಸುತ್ತಿದ್ದ ಬಾಲಿವುಡ್​ಗೆ ನಿರಾಳತೆ ತಂದಿತ್ತು. ಇದೀಗ ಆಲಿಯಾ ಭಟ್ ಹಾಗೂ ರಣ್​ಬೀರ್ ಕಪೂರ್ ಮತ್ತೆ ತೆರೆ ಮೇಲೆ ಒಟ್ಟಿಗೆ ನಟಿಸಲಿದ್ದಾರೆ. ಜೊತೆಗೆ ಕತ್ರಿನಾ ಕೈಫ್​ರ ಪತಿ ವಿಕ್ಕಿ ಕೌಶಲ್ ಸಹ ಜೊತೆಗಿದ್ದಾರೆ. ಸಿನಿಮಾ ನಿರ್ದೇಶಿಸುತ್ತಿರುವುದು ಬಾಲಿವುಡ್​ನ ಸ್ಟಾರ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ.

ಆಲಿಯಾ ಭಟ್​ಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾವನ್ನು ನಿರ್ದೇಶಿಸಿದ್ದ ಸಂಜಯ್ ಲೀಲಾ ಬನ್ಸಾಲಿ, ಇದೀಗ ತಮ್ಮ ಹೊಸ ಸಿನಿಮಾದಲ್ಲಿ ಮತ್ತೆ ಆಲಿಯಾ ಭಟ್​ಗೆ ಅವಕಾಶ ನೀಡಿದ್ದಾರೆ. ಜೊತೆಗೆ ರಣ್​ಬೀರ್ ಕಪೂರ್ ಹಾಗೂ ವಿಕ್ಕಿ ಕೌಶಲ್ ಸಹ ಇದ್ದಾರೆ. ಆದರೆ ಈ ಸಿನಿಮಾ ಸಂಜಯ್​ರ ಮಾಮೂಲಿ ಸ್ಟೈಲ್​ನಲ್ಲಿ ಅಲ್ಲದೆ ಹೊಸ ತಲೆಮಾರಿನ ಕತೆಯನ್ನು ಹೊಂದಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಹೆರಿಗೆ ಬಳಿಕ ಆಲಿಯಾ ಭಟ್ ತೂಕ ಇಳಿಸಿದ್ದು ಹೇಗೆ?

ಆಲಿಯಾ, ರಣ್​ಬೀರ್ ಹಾಗೂ ವಿಕ್ಕಿ ಕೌಶಲ್ ಒಟ್ಟಿಗೆ ನಟಿಸುತ್ತಿರುವ ಸಿನಿಮಾಕ್ಕೆ ‘ಲವ್ ಆಂಡ್ ವಾರ್’ ಎಂದು ಹೆಸರಿಡಲಾಗಿದೆ. ಈ ಸಿನಿಮಾವು ತ್ರಿಕೋನ ಪ್ರೇಮಕತೆಯನ್ನು ಒಳಗೊಂಡಿರಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಂಜಯ್ ಲೀಲಾ ಬನ್ಸಾಲಿ, ಐತಿಹಾಸಿಕ ಅಥವಾ ರೆಟ್ರೋ ಮಾದರಿಯ ಸಿನಿಮಾಗಳನ್ನು ಮಾಡುತ್ತಿದ್ದರು. ಆದರೆ ‘ಲವ್ ಆಂಡ್ ವಾರ್’ ಸಿನಿಮಾ ಹೊಸ ತಲೆಮಾರಿನ ಕತೆಯನ್ನು ಒಳಗೊಂಡಿರಲಿದೆ. ಅಲ್ಲದೆ, ಸಂಜಯ್ ಲೀಲಾ ಬನ್ಸಾಲಿಯವರ ಸಿನಿಮಾಗಳಲ್ಲಿ ಹೆಚ್ಚು ಪ್ರಧಾನ್ಯತೆ ಇರದಿದ್ದ ಆಕ್ಷನ್​ಗೆ ಈ ಸಿನಿಮಾದಲ್ಲಿ ಪ್ರಾಧಾನ್ಯತೆ ನೀಡಲಾಗಿದೆಯಂತೆ.

ಟಾಲಿವುಡ್ ನಟ ಅಲ್ಲು ಅರ್ಜುನ್, ಸಂಜಯ್ ಲೀಲಾ ಬನ್ಸಾಲಿಯವರ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಅಲ್ಲು ಅರ್ಜುನ್ ಸಹ ಕೆಲವು ಬಾರಿ ಮುಂಬೈನ ಸಂಜಯ್ ಲೀಲಾ ಬನ್ಸಾಲಿಯವರ ಕಚೇರಿ ಎದುರು ಕಾಣಿಸಿಕೊಂಡಿದ್ದರು. ಇದೇ ಸಿನಿಮಾದ ಬಗ್ಗೆ ಸಂಜಯ್, ಅಲ್ಲು ಅರ್ಜುನ್ ಜೊತೆ ಚರ್ಚಿಸಿದ್ದರು ಎನ್ನಲಾಗಿದ್ದು, ಆ ಅವಕಾಶ ಈಗ ವಿಕ್ಕಿ ಕೌಶಲ್​ಗೆ ದೊರೆತಿದೆ. ‘ಲವ್ ಆಂಡ್ ವಾರ್’ ಸಿನಿಮಾವನ್ನು ಬನ್ಸಾಲಿ ಪ್ರೊಡಕ್ಷನ್​ ಮೂಲಕವೇ ನಿರ್ಮಾಣ ಮಾಡಲಾಗುತ್ತಿದ್ದು, ಸಿನಿಮಾ 2025ರ ಡಿಸೆಂಬರ್​ನಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ