AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ 61 ಕೋಟಿ ರೂಪಾಯಿ ಗಳಿಸಿದ ‘ಅನಿಮಲ್’; ಅತಿ ದೊಡ್ಡ ಗೆಲುವು ಕಂಡ ರಣಬೀರ್, ರಶ್ಮಿಕಾ

ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ತಮ್ಮ ವೃತ್ತಿ ಜೀವನದಲ್ಲಿ ಅತಿದೊಡ್ಡ ಗೆಲುವು ಕಂಡಿದ್ದಾರೆ. ‘ಅನಿಮಲ್’ ಸಿನಿಮಾ ಮೊದಲ ದಿನ 61 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮೊದಲ ದಿನ ಇಷ್ಟು ದೊಡ್ಡ ಗಳಿಕೆ ಮಾಡುವುದು ಅದು ಸಣ್ಣ ಸಾಧನೆ ಅಲ್ಲ.

ಮೊದಲ ದಿನ 61 ಕೋಟಿ ರೂಪಾಯಿ ಗಳಿಸಿದ ‘ಅನಿಮಲ್’; ಅತಿ ದೊಡ್ಡ ಗೆಲುವು ಕಂಡ ರಣಬೀರ್, ರಶ್ಮಿಕಾ
ರಶ್ಮಿಕಾ-ರಣಬೀರ್
ರಾಜೇಶ್ ದುಗ್ಗುಮನೆ
|

Updated on: Dec 02, 2023 | 10:32 AM

Share

ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಡಿಸೆಂಬರ್ 1ರಂದು ರಿಲೀಸ್ ಆದ ಈ ಸಿನಿಮಾ ಮೊದಲ ದಿನ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದಲ್ಲೇ ಮೊದಲ ದಿನ ಇಷ್ಟು ದೊಡ್ಡ ಗಳಿಕೆ ಆಗಿದ್ದು ಇದೇ ಮೊದಲು. ಮುಂದಿನ ದಿನಗಳಲ್ಲಿ ಸಿನಿಮಾ ಅಬ್ಬರದ ಗಳಿಕೆ ಮಾಡುವ ಸಾಧ್ಯತೆ ಇದೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಹಿಂದಿ, ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ. ಆರಂಭಿಕ ವರದಿಗಳ ಪ್ರಕಾರ ಈ ಚಿತ್ರ ಹಿಂದಿಯಲ್ಲಿ 50.50 ಕೋಟಿ ರೂಪಾಯಿ ಬಾಚಿಕೊಂಡಿದೆ. ತೆಲುಗು ವರ್ಷನ್​ನಿಂದ 10 ಕೋಟಿ ರೂಪಾಯಿ ಆಗಿದೆ. ಉಳಿದ ಭಾಷೆಗಳಿಂದ 50 ಲಕ್ಷ ರೂಪಾಯಿ ಗಳಿಕೆ ಆಗಿದೆ.

ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಮೊದಲ ದಿನ 36 ಕೋಟಿ ರೂಪಾಯಿ, ‘ಸಂಜು’ ಸಿನಿಮಾ 34.75 ಕೋಟಿ ರೂಪಾಯಿ ಗಳಿಸಿತ್ತು. ಈಗ ‘ಅನಿಮಲ್’ ಸಿನಿಮಾ ಮೊದಲ ದಿನ 50 ಕೋಟಿ ರೂಪಾಯಿ (ಹಿಂದಿ ವರ್ಷನ್ ಮಾತ್ರ) ಗಳಿಸಿದೆ.  ಈ ಮೂಲಕ ರಣಬೀರ್ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

ವಿದೇಶಗಳಲ್ಲೂ ‘ಅನಿಮಲ್’ ಸಿನಿಮಾ ರಿಲೀಸ್ ಆಗಿದೆ. ವಿಶ್ವದ ಗಳಿಕೆಯ ಲೆಕ್ಕಾಚಾರವೂ ಸಿಕ್ಕರೆ ಸಿನಿಮಾದ ಒಟ್ಟೂ ಗಳಿಕೆ ಮತ್ತಷ್ಟು ಹೆಚ್ಚಲಿದೆ. ಇನ್ನು, ಸಿನಿಮಾಗೆ ಅನೇಕರು ನೆಗೆಟಿವ್ ಕಮೆಂಟ್ ಮಾಡಿದ್ದಾರೆ. ಸಾಕಷ್ಟು ವೈಲೆನ್ಸ್ ತೋರಿಸಲಾಗಿದೆ ಎಂದು ಅನೇಕರು ಆರೋಪ ಮಾಡಿದ್ದಾರೆ. ಈ ಕಾರಣದಿಂದಲೇ ಸಿನಿಮಾಗೆ ಸೆನ್ಸಾರ್​ನಿಂದ ಎ ಪ್ರಮಾಣಪತ್ರ ಸಿಕ್ಕಿದೆ. ಸಿನಿಮಾದ ಅವಧಿ 3 ಗಂಟೆ 21 ನಿಮಿಷ ಇದೆ. ಈ ಬಗ್ಗೆ ಹೆಚ್ಚಿನ ಮಂದಿ ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: ಹೇಗಿದೆ ರಶ್ಮಿಕಾ-ರಣಬೀರ್​ ನಟನೆಯ ‘ಅನಿಮಲ್​’ ಸಿನಿಮಾ? ಇಲ್ಲಿದೆ ಟ್ವಿಟರ್​ ವಿಮರ್ಶೆ

‘ಅನಿಮಲ್’ ಸಿನಿಮಾಗೆ ಸಂದೀಪ್ ರೆಡ್ಡಿ ವಂಗ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಣಬೀರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್ ನಟಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’ ಚಿತ್ರಗಳನ್ನು ನಿರ್ದೇಶನ ಮಾಡಿರುವ ಅನುಭವ ಸಂದೀಪ್ ರೆಡ್ಡಿ ಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?