Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಕಪೂರ್ ಒಡೆತನದ 8 ಕೋಟಿ ರೂ. ಕಾರಿನ ಹಿಂದೆ ಬಿದ್ದ ಫ್ಯಾನ್ಸ್; ಅಪ್ಸೆಟ್ ಆದ ನಟ ಮಾಡಿದ್ದೇನು?

ಇತ್ತೀಚೆಗೆ ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟ್ ಮುಗಿಸಿ ಸೆಟ್​ನಿಂದ ಹೊರಡುವವರಿದ್ದರು. ಈ ವೇಳೆ ಅವರು ಬೆಂಟ್ಲಿ ಕಾರಿನಲ್ಲಿದ್ದರು. ಈ ಕಾರಿಗೆ ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಇದು ರಣಬೀರ್​ಗೆ ಖುಷಿ ನೀಡಿಲ್ಲ.

ರಣಬೀರ್ ಕಪೂರ್ ಒಡೆತನದ 8 ಕೋಟಿ ರೂ. ಕಾರಿನ ಹಿಂದೆ ಬಿದ್ದ ಫ್ಯಾನ್ಸ್; ಅಪ್ಸೆಟ್ ಆದ ನಟ ಮಾಡಿದ್ದೇನು?
ರಣಬೀರ್
Follow us
ರಾಜೇಶ್ ದುಗ್ಗುಮನೆ
|

Updated on: Apr 08, 2024 | 12:23 PM

ನಟ ರಣಬೀರ್ ಕಪೂರ್ (Ranbir Kapoor) ಅವರು ಎಲ್ಲಾ ಸಮಯದಲ್ಲೂ ಕೂಲ್ ಆಗಿರೋದಿಲ್ಲ. ಅವರು ಫ್ಯಾನ್ಸ್ ವರ್ತನೆಗೆ ಆಗಾಗ ಕೋಪಗೊಂಡಂತೆ ಕಾಣಿಸಿಕೊಂಡಿದ್ದೂ ಇದೆ. ಫ್ಯಾನ್ಸ್ ಹಾಗೂ ಪಾಪರಾಜಿಗಳು ಅವರನ್ನು ಮುತ್ತಿಕೊಂಡರೆ ಕೆಲವೊಮ್ಮೆ ಇಷ್ಟ ಆಗುವುದಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಣಬೀರ್ ಕಪೂರ್ ಸಖತ್ ಅಪ್ಸೆಟ್ ಆಗಿರೋದು ಕಂಡು ಬಂದಿದೆ.

ರಣಬೀರ್ ಕಪೂರ್ ಅವರು ಸದ್ಯ ‘ರಾಮಾಯಣ’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಗಡ್ಡ ಮೀಸೆ ಬೋಳಿಸಿಕೊಂಡಿದ್ದಾರೆ. ಈ ಲುಕ್​ನಲ್ಲಿ ಅವರು ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಇತ್ತೀಚೆಗೆ ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟ್ ಮುಗಿಸಿ ಸೆಟ್​ನಿಂದ ಹೊರಡುವವರಿದ್ದರು. ಈ ವೇಳೆ ಅವರು ಬೆಂಟ್ಲಿ ಕಾರಿನಲ್ಲಿದ್ದರು. ಈ ಕಾರಿಗೆ ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಇದು ರಣಬೀರ್​ಗೆ ಖುಷಿ ನೀಡಿಲ್ಲ.

ರಣಬೀರ್ ಕಪೂರ್ ಅವರು ಪ್ರಯಾಣ ಮಾಡುತ್ತಿದ್ದುದ್ದು 8 ಕೋಟಿ ರೂಪಾಯಿ ಬೆಲೆಯ ಕಾರು. ಈ ಕಾರಿಗೆ ಫ್ಯಾನ್ಸ್ ಮುತ್ತಿಕೊಂಡಿದ್ದನ್ನು ನೋಡಿ ಅವರು ಅಪ್ಸೆಟ್ ಆದರು. ಒಂದು ಕ್ಲಿಪ್​ನಲ್ಲಿ ಅವರು ಮುಖ ಮುಚ್ಚಿಕೊಂಡಿದ್ದರೆ, ಮತ್ತೊಂದು ವಿಡಿಯೋದಲ್ಲಿ ಅವರು ‘ಏನಿದು ವರ್ತನೆ’ ಎಂದು ಜನರತ್ತ ಕೈ ತೋರಿಸುತ್ತಿರುವ ವಿಡಿಯೋ ಇದೆ.

ಇದನ್ನೂ ಓದಿ: ಬಿಲ್ಲು ಬಾಣ ಹಿಡಿದು ‘ರಾಮಾಯಣ’ ಚಿತ್ರಕ್ಕೆ ರೆಡಿ ಆದ ರಣಬೀರ್ ಕಪೂರ್; ನಡೆದಿದೆ ಭರ್ಜರಿ ಸಿದ್ಧತೆ

ರಣಬೀರ್ ಕಪೂರ್ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರು ಬ್ಯಾಕ್ ಟು ಬ್ಯಾಕ್ ಯಶಸ್ಸು ಕಂಡಿದ್ದಾರೆ. ‘ಬ್ರಹ್ಮಾಸ್ತ್ರ’, ‘ತೂ ಜೂಟಿ ಮೇ ಮಕ್ಕರ್’, ‘ಅನಿಮಲ್’ ಸಿನಿಮಾಗಳು ಗೆಲುವು ಕಂಡಿವೆ. ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆದ ‘ಅನಿಮಲ್’ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ