AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​

Sourav Ganguly Biopic: ‘ಸೌರವ್​ ಗಂಗೂಲಿ ಅವರು ಭಾರತದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲಿ ಜೀವಂತ ದಂತಕಥೆ. ಅವರ ಬಯೋಪಿಕ್​ ತುಂಬ ವಿಶೇಷವಾಗಿ ಇರಲಿದೆ’ ಎಂದು ರಣಬೀರ್​ ಕಪೂರ್​ ಹೇಳಿದ್ದಾರೆ.

Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​
ಸೌರವ್ ಗಂಗೂಲಿ, ರಣಬೀರ್ ಕಪೂರ್
Follow us
ಮದನ್​ ಕುಮಾರ್​
|

Updated on: Feb 27, 2023 | 7:00 AM

ನಟ ರಣಬೀರ್​ ಕಪೂರ್​ (Ranbir Kapoor) ಅವರು ಸಿನಿಮಾಗಳ ಆಯ್ಕೆಯಲ್ಲಿ ಸಖತ್​ ಕಾಳಜಿ ವಹಿಸುತ್ತಾರೆ. ಅದರಲ್ಲೂ ಬಯೋಪಿಕ್​ ಮಾಡುವಾಗ ಹೆಚ್ಚು ಅಲರ್ಟ್​ ಆಗಿರುತ್ತಾರೆ. ಸಂಜಯ್​ ದತ್​ ಜೀವನ ಆಧರಿಸಿದ ‘ಸಂಜು’ ಸಿನಿಮಾದಲ್ಲಿ ರಣಬೀರ್​ ಕಪೂರ್​ ನಟಿಸಿದ್ದರು. ಆ ಚಿತ್ರ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಆ ಬಳಿಕ ಇನ್ನಿತರ ಬಯೋಪಿಕ್​ಗಳಲ್ಲಿ ನಟಿಸಲು ರಣಬೀರ್​ ಕಪೂರ್​ ಅವರೇ ಸೂಕ್ತ ಎಂಬ ಅಭಿಪ್ರಾಯ ಅಭಿಮಾನಿಗಳ ವಲಯದಿಂದ ಕೇಳಿಬರಲು ಆರಂಭಿಸಿತು. ಈಗ ಸೌರವ್​ ಗಂಗೂಲಿ  (Sourav Ganguly) ಜೊತೆ ರಣಬೀರ್ ಕಪೂರ್​ ಅವರು ಕ್ರಿಕೆಟ್​ ಆಡಿದ ಫೋಟೋಗಳು ವೈರಲ್​ ಆಗಿವೆ. ಹಾಗಾಗಿ ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ (Sourav Ganguly Biopic) ರಣಬೀರ್​ ಕಪೂರ್​ ನಟಿಸಬಹುದೇ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ಆ ರೀತಿಯ ಯಾವುದೇ ಆಫರ್​ ಬಂದಿಲ್ಲ’ ಎಂದು ರಣಬೀರ್​ ಕಪೂರ್​ ಹೇಳಿದ್ದಾರೆ.

ರಣಬೀರ್​ ಕಪೂರ್ ಅಭಿನಯದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಪ್ರಮೋಷನ್​ ಸಲುವಾಗಿ ಅವರು ಕೊಲ್ಕತ್ತಾಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅವರು ಸೌರವ್​ ಗಂಗೂಲಿ ಜೊತೆ ಸಮಯ ಕಳೆದಿದ್ದಾರೆ. ಅವರಿಬ್ಬರು ಜೊತೆಯಾಗಿ ಕ್ರಿಕೆಟ್​ ಆಡಿದ್ದಾರೆ. ಅವರ ಫೋಟೋ ಮತ್ತು ವಿಡಿಯೋ ವೈರಲ್​ ಆಗಿವೆ. ಆದರೆ ಸೌರವ್​ ಗಂಗೂಲಿ ಜೀವನಾಧಾರಿತ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂಬುದನ್ನು ರಣಬೀರ್​ ಕಪೂರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​

ಇದನ್ನೂ ಓದಿ
Image
ಲತಾ ಮಂಗೇಶ್ಕರ್​ ಕುರಿತು ಬರಲಿದೆ ಬಯೋಪಿಕ್​; ರೇಸ್​ನಲ್ಲಿದ್ದಾರೆ ಖ್ಯಾತ ನಿರ್ದೇಶಕರು
Image
ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ
Image
ದ್ರಾವಿಡ್​ ಬಯೋಪಿಕ್​ನಲ್ಲಿ ಸುದೀಪ್ ಮುಖ್ಯಭೂಮಿಕೆ? ಹಕ್ಕು ತಂದ್ರೆ ಸಿನಿಮಾ ಮಾಡ್ತೀನಿ ಎಂದ ಕಬೀರ್​ ಖಾನ್
Image
ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

‘ದಾದಾ (ಸೌರವ್​ ಗಂಗೂಲಿ) ಅವರು ಭಾರತದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲಿ ಜೀವಂತ ದಂತಕಥೆ. ಅವರ ಬಯೋಪಿಕ್​ ತುಂಬ ವಿಶೇಷವಾಗಿ ಇರಲಿದೆ. ದುರಾದೃಷ್ಟ ಎಂದರೆ ನನಗೆ ಯಾವುದೇ ಆಫರ್​ ಬಂದಿಲ್ಲ. ನಿರ್ದೇಶಕರು ಇನ್ನೂ ಸ್ಕ್ರಿಪ್ಟ್​ ಬರೆಯುತ್ತಿ​ದ್ದಾರೆ ಎನಿಸುತ್ತದೆ’ ಎಂದು ರಣಬೀರ್​ ಕಪೂರ್​ ಹೇಳಿದ್ದಾರೆ.

ಇದನ್ನೂ ಓದಿ: Ranbir Kapoor: ‘ಅನಿಮಲ್​’ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ; ರಗಡ್​ ಅವತಾರದಲ್ಲಿ ರಣಬೀರ್​ ಕಪೂರ್​

ಲೆಜೆಂಡರಿ ಗಾಯಕ ಕಿಶೋರ್​ ಕುಮಾರ್​ ಅವರ ಜೀವನಾಧಾರಿತ ಸಿನಿಮಾದಲ್ಲಿ ರಣಬೀರ್​ ಕಪೂರ್​ ನಟಿಸುತ್ತಾರೆ ಎಂಬ ಮಾತು ಬಹಳ ದಿನಗಳಿಂದ ಕೇಳಿಬರುತ್ತಿದೆ. ಆ ಬಗ್ಗೆ ಅವರೀಗ ಮೌನ ಮುರಿದಿದ್ದಾರೆ. ‘ನಾನು ಕಳೆದ 11 ವರ್ಷಗಳಿಂದ ಕಿಶೋರ್​ ಕುಮಾರ್​ ಅವರ ಬಯೋಪಿಕ್​ ಮೇಲೆ ಕೆಲಸ ಮಾಡುತ್ತಿದ್ದೇನೆ. ಅನುರಾಗ್​ ಬಸು ಜೊತೆ ಸೇರಿಕೊಂಡು ನಾವು ಸ್ಕ್ರಿಪ್ಟ್​ ಬರೆಯುತ್ತಿದ್ದೇವೆ. ನಾನು ಮಾಡುವ ಮುಂದಿನ ಬಯೋಪಿಕ್​ ಅದೇ ಆಗಿರಲಿದೆ ಎಂಬ ಭರವಸೆ ಇದೆ. ಆದರೆ ದಾದಾ ಬಗ್ಗೆ ಬಯೋಪಿಕ್​ ಆಗಲಿದೆ ಎಂಬುದು ನನಗೆ ಈವರೆಗೆ ತಿಳಿದಿರಲಿಲ್ಲ’ ಎಂದಿದ್ದಾರೆ ರಣಬೀರ್​ ಕಪೂರ್​.

‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಮಾರ್ಚ್​ 8ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ಶ್ರದ್ಧಾ ಕಪೂರ್​ ನಟಿಸಿದ್ದಾರೆ. ಲವ್​ ರಂಜನ್​ ನಿರ್ದೇಶನ ಮಾಡಿದ್ದಾರೆ. ಇದು 2023ರಲ್ಲಿ ತೆರೆ ಕಾಣುತ್ತಿರುವ ರಣಬೀರ್​ ಕಪೂರ್​ ಅವರ ಮೊದಲ ಸಿನಿಮಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ