Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​

ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ. ರಾಮನ ಪಾತ್ರ ಮಾಡಲಿರುವ ನಟ ರಣಬೀರ್​ ಕಪೂರ್​ ಅವರು ಬಿಲ್ಲು-ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಅಂದಹಾಗೆ, ಇದು ಚಿತ್ರತಂಡದಿಂದ ಬಂದ ಅಧಿಕೃತ ಪೋಸ್ಟರ್​ ಅಲ್ಲ. ಹಾಗಿದ್ದರೂ ಕೂಡ ಇದನ್ನು ನೋಡಿ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​
ರಣಬೀರ್​ ಕಪೂರ್​
Follow us
ಮದನ್​ ಕುಮಾರ್​
|

Updated on: Apr 07, 2024 | 5:07 PM

ನಟ ರಣಬೀರ್​ ಕಪೂರ್​ (Ranbir Kapoor) ಅವರು ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಹಲವು ಬಗೆಯ ಪಾತ್ರಗಳ ಮೂಲಕ ಅವರು ಸೈ ಎನಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆ ಆದ ‘ಅನಿಮಲ್​’ ಚಿತ್ರದಿಂದ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರಿಗೆ ಇನ್ನೊಂದು ದೊಡ್ಡ ಅವಕಾಶ ಸಿಕ್ಕಿರುವುದು ಗೊತ್ತೇ ಇದೆ. ನಿತೇಶ್​ ತಿವಾರಿ ನಿರ್ದೇಶನ ಮಾಡಲಿರುವ ರಾಮಾಯಣ (Ramayan) ಕಥೆಯಾಧಾರಿತ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ರಾಮನ (Lord Rama) ಪಾತ್ರ ನೀಡಲಾಗಿದೆ. ಇನ್ನೂ ಅವರ ಫಸ್ಟ್​ ಲುಕ್​ ಬಿಡುಗಡೆ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

ಇದು ಕೃತಕ ಬುದ್ಧಿಮತ್ತೆಯ ಕಾಲ. ಎಲ್ಲ ಬಗೆಯ ಕಲ್ಪನೆಗೂ ಇಲ್ಲಿ ರೂಪ ಸಿಗುತ್ತದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರದಲ್ಲಿ ಹೇಗೆ ಕಾಣಬಹುದು ಎಂಬುದನ್ನು ಎಐ ಮೂಲಕ ಕಲ್ಪಿಸಿಕೊಳ್ಳಲಾಗುತ್ತಿದೆ. ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ರೀತಿಯ ಒಂದು ಫೋಟೋ ಹಂಚಿಕೊಳ್ಳಲಾಗಿದೆ. ರಣಬೀರ್​ ಕಪೂರ್​ ಅವರು ಬಿಲ್ಲು ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಇದು ಅಧಿಕೃತ ಪೋಸ್ಟರ್​ ಅಲ್ಲ. ಆದರೂ ಕೂಡ ಇದನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

View this post on Instagram

A post shared by Filmy Entity (@filmyentity)

ಮುಂಬೈನಲ್ಲಿ ಈ ಸಿನಿಮಾದ ಶೂಟಿಂಗ್​ ಈಗಾಗಲೇ ಶುರುವಾಗಿದೆ. ಕೈಕೇಯಿ ಪಾತ್ರ ಮಾಡುತ್ತಿರುವ ಲಾರಾ ದತ್ತ ಹಾಗೂ ದಶರಥನ ಪಾತ್ರ ಮಾಡುತ್ತಿರುವ ಅರುಣ್​ ಗೋವಿಲ್​ ಅವರ ಫೋಟೋಗಳು ‘ರಾಮಾಯಣ’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಲೀಕ್​ ಆಗಿವೆ. ಇಷ್ಟರಮೇಲೆ ಚಿತ್ರತಂಡದವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಹಲವು ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.

ಇದನ್ನೂ ಓದಿ:  ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ಪಾತ್ರವರ್ಗದ ಬಗ್ಗೆ ‘ರಾಮಾಯಣ’ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದೆ. ಆದರೂ ಅನೇಕ ಸುದ್ದಿಗಳು ಹರಿದಾಡುತ್ತಿವೆ. ರಾಮನಾಗಿ ರಣಬೀರ್​ ಕಪೂರ್ ನಟಿಸಿದರೆ, ಸೀತೆಯಾಗಿ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎನ್ನಲಾಗಿದೆ. ರಾವಣನಾಗಿ ಯಶ್ ಅಭಿನಯಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಸನ್ನಿ ಡಿಯೋಲ್​ ಅವರು ಆಂಜನೇಯನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲವು ಮಾಧ್ಯಮಗಳು ಪ್ರಕಟ ಮಾಡಿವೆ. ಪಾತ್ರವರ್ಗ ಬಗ್ಗೆ ಶೀಘ್ರದಲ್ಲೇ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂಬುದು ಸಿನಿಪ್ರಿಯರ ಬಯಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ