AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​

ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ. ರಾಮನ ಪಾತ್ರ ಮಾಡಲಿರುವ ನಟ ರಣಬೀರ್​ ಕಪೂರ್​ ಅವರು ಬಿಲ್ಲು-ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಅಂದಹಾಗೆ, ಇದು ಚಿತ್ರತಂಡದಿಂದ ಬಂದ ಅಧಿಕೃತ ಪೋಸ್ಟರ್​ ಅಲ್ಲ. ಹಾಗಿದ್ದರೂ ಕೂಡ ಇದನ್ನು ನೋಡಿ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 07, 2024 | 5:07 PM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರು ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಹಲವು ಬಗೆಯ ಪಾತ್ರಗಳ ಮೂಲಕ ಅವರು ಸೈ ಎನಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆ ಆದ ‘ಅನಿಮಲ್​’ ಚಿತ್ರದಿಂದ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರಿಗೆ ಇನ್ನೊಂದು ದೊಡ್ಡ ಅವಕಾಶ ಸಿಕ್ಕಿರುವುದು ಗೊತ್ತೇ ಇದೆ. ನಿತೇಶ್​ ತಿವಾರಿ ನಿರ್ದೇಶನ ಮಾಡಲಿರುವ ರಾಮಾಯಣ (Ramayan) ಕಥೆಯಾಧಾರಿತ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ರಾಮನ (Lord Rama) ಪಾತ್ರ ನೀಡಲಾಗಿದೆ. ಇನ್ನೂ ಅವರ ಫಸ್ಟ್​ ಲುಕ್​ ಬಿಡುಗಡೆ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

ಇದು ಕೃತಕ ಬುದ್ಧಿಮತ್ತೆಯ ಕಾಲ. ಎಲ್ಲ ಬಗೆಯ ಕಲ್ಪನೆಗೂ ಇಲ್ಲಿ ರೂಪ ಸಿಗುತ್ತದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರದಲ್ಲಿ ಹೇಗೆ ಕಾಣಬಹುದು ಎಂಬುದನ್ನು ಎಐ ಮೂಲಕ ಕಲ್ಪಿಸಿಕೊಳ್ಳಲಾಗುತ್ತಿದೆ. ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ರೀತಿಯ ಒಂದು ಫೋಟೋ ಹಂಚಿಕೊಳ್ಳಲಾಗಿದೆ. ರಣಬೀರ್​ ಕಪೂರ್​ ಅವರು ಬಿಲ್ಲು ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಇದು ಅಧಿಕೃತ ಪೋಸ್ಟರ್​ ಅಲ್ಲ. ಆದರೂ ಕೂಡ ಇದನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

View this post on Instagram

A post shared by Filmy Entity (@filmyentity)

ಮುಂಬೈನಲ್ಲಿ ಈ ಸಿನಿಮಾದ ಶೂಟಿಂಗ್​ ಈಗಾಗಲೇ ಶುರುವಾಗಿದೆ. ಕೈಕೇಯಿ ಪಾತ್ರ ಮಾಡುತ್ತಿರುವ ಲಾರಾ ದತ್ತ ಹಾಗೂ ದಶರಥನ ಪಾತ್ರ ಮಾಡುತ್ತಿರುವ ಅರುಣ್​ ಗೋವಿಲ್​ ಅವರ ಫೋಟೋಗಳು ‘ರಾಮಾಯಣ’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಲೀಕ್​ ಆಗಿವೆ. ಇಷ್ಟರಮೇಲೆ ಚಿತ್ರತಂಡದವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಹಲವು ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.

ಇದನ್ನೂ ಓದಿ:  ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ಪಾತ್ರವರ್ಗದ ಬಗ್ಗೆ ‘ರಾಮಾಯಣ’ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದೆ. ಆದರೂ ಅನೇಕ ಸುದ್ದಿಗಳು ಹರಿದಾಡುತ್ತಿವೆ. ರಾಮನಾಗಿ ರಣಬೀರ್​ ಕಪೂರ್ ನಟಿಸಿದರೆ, ಸೀತೆಯಾಗಿ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎನ್ನಲಾಗಿದೆ. ರಾವಣನಾಗಿ ಯಶ್ ಅಭಿನಯಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಸನ್ನಿ ಡಿಯೋಲ್​ ಅವರು ಆಂಜನೇಯನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲವು ಮಾಧ್ಯಮಗಳು ಪ್ರಕಟ ಮಾಡಿವೆ. ಪಾತ್ರವರ್ಗ ಬಗ್ಗೆ ಶೀಘ್ರದಲ್ಲೇ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂಬುದು ಸಿನಿಪ್ರಿಯರ ಬಯಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್