AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​

ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ. ರಾಮನ ಪಾತ್ರ ಮಾಡಲಿರುವ ನಟ ರಣಬೀರ್​ ಕಪೂರ್​ ಅವರು ಬಿಲ್ಲು-ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಅಂದಹಾಗೆ, ಇದು ಚಿತ್ರತಂಡದಿಂದ ಬಂದ ಅಧಿಕೃತ ಪೋಸ್ಟರ್​ ಅಲ್ಲ. ಹಾಗಿದ್ದರೂ ಕೂಡ ಇದನ್ನು ನೋಡಿ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 07, 2024 | 5:07 PM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರು ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಹಲವು ಬಗೆಯ ಪಾತ್ರಗಳ ಮೂಲಕ ಅವರು ಸೈ ಎನಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆ ಆದ ‘ಅನಿಮಲ್​’ ಚಿತ್ರದಿಂದ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರಿಗೆ ಇನ್ನೊಂದು ದೊಡ್ಡ ಅವಕಾಶ ಸಿಕ್ಕಿರುವುದು ಗೊತ್ತೇ ಇದೆ. ನಿತೇಶ್​ ತಿವಾರಿ ನಿರ್ದೇಶನ ಮಾಡಲಿರುವ ರಾಮಾಯಣ (Ramayan) ಕಥೆಯಾಧಾರಿತ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ರಾಮನ (Lord Rama) ಪಾತ್ರ ನೀಡಲಾಗಿದೆ. ಇನ್ನೂ ಅವರ ಫಸ್ಟ್​ ಲುಕ್​ ಬಿಡುಗಡೆ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

ಇದು ಕೃತಕ ಬುದ್ಧಿಮತ್ತೆಯ ಕಾಲ. ಎಲ್ಲ ಬಗೆಯ ಕಲ್ಪನೆಗೂ ಇಲ್ಲಿ ರೂಪ ಸಿಗುತ್ತದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರದಲ್ಲಿ ಹೇಗೆ ಕಾಣಬಹುದು ಎಂಬುದನ್ನು ಎಐ ಮೂಲಕ ಕಲ್ಪಿಸಿಕೊಳ್ಳಲಾಗುತ್ತಿದೆ. ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ರೀತಿಯ ಒಂದು ಫೋಟೋ ಹಂಚಿಕೊಳ್ಳಲಾಗಿದೆ. ರಣಬೀರ್​ ಕಪೂರ್​ ಅವರು ಬಿಲ್ಲು ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಇದು ಅಧಿಕೃತ ಪೋಸ್ಟರ್​ ಅಲ್ಲ. ಆದರೂ ಕೂಡ ಇದನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

View this post on Instagram

A post shared by Filmy Entity (@filmyentity)

ಮುಂಬೈನಲ್ಲಿ ಈ ಸಿನಿಮಾದ ಶೂಟಿಂಗ್​ ಈಗಾಗಲೇ ಶುರುವಾಗಿದೆ. ಕೈಕೇಯಿ ಪಾತ್ರ ಮಾಡುತ್ತಿರುವ ಲಾರಾ ದತ್ತ ಹಾಗೂ ದಶರಥನ ಪಾತ್ರ ಮಾಡುತ್ತಿರುವ ಅರುಣ್​ ಗೋವಿಲ್​ ಅವರ ಫೋಟೋಗಳು ‘ರಾಮಾಯಣ’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಲೀಕ್​ ಆಗಿವೆ. ಇಷ್ಟರಮೇಲೆ ಚಿತ್ರತಂಡದವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಹಲವು ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.

ಇದನ್ನೂ ಓದಿ:  ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ಪಾತ್ರವರ್ಗದ ಬಗ್ಗೆ ‘ರಾಮಾಯಣ’ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದೆ. ಆದರೂ ಅನೇಕ ಸುದ್ದಿಗಳು ಹರಿದಾಡುತ್ತಿವೆ. ರಾಮನಾಗಿ ರಣಬೀರ್​ ಕಪೂರ್ ನಟಿಸಿದರೆ, ಸೀತೆಯಾಗಿ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎನ್ನಲಾಗಿದೆ. ರಾವಣನಾಗಿ ಯಶ್ ಅಭಿನಯಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಸನ್ನಿ ಡಿಯೋಲ್​ ಅವರು ಆಂಜನೇಯನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲವು ಮಾಧ್ಯಮಗಳು ಪ್ರಕಟ ಮಾಡಿವೆ. ಪಾತ್ರವರ್ಗ ಬಗ್ಗೆ ಶೀಘ್ರದಲ್ಲೇ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂಬುದು ಸಿನಿಪ್ರಿಯರ ಬಯಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ