ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​

ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ. ರಾಮನ ಪಾತ್ರ ಮಾಡಲಿರುವ ನಟ ರಣಬೀರ್​ ಕಪೂರ್​ ಅವರು ಬಿಲ್ಲು-ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಅಂದಹಾಗೆ, ಇದು ಚಿತ್ರತಂಡದಿಂದ ಬಂದ ಅಧಿಕೃತ ಪೋಸ್ಟರ್​ ಅಲ್ಲ. ಹಾಗಿದ್ದರೂ ಕೂಡ ಇದನ್ನು ನೋಡಿ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಾಮನ ಪಾತ್ರದಲ್ಲಿ ಈ ರೀತಿ ಕಾಣ್ತಾರಾ ರಣಬೀರ್​ ಕಪೂರ್​? ಫೋಟೋ ವೈರಲ್​
ರಣಬೀರ್​ ಕಪೂರ್​

Updated on: Apr 07, 2024 | 5:07 PM

ನಟ ರಣಬೀರ್​ ಕಪೂರ್​ (Ranbir Kapoor) ಅವರು ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಹಲವು ಬಗೆಯ ಪಾತ್ರಗಳ ಮೂಲಕ ಅವರು ಸೈ ಎನಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆ ಆದ ‘ಅನಿಮಲ್​’ ಚಿತ್ರದಿಂದ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರಿಗೆ ಇನ್ನೊಂದು ದೊಡ್ಡ ಅವಕಾಶ ಸಿಕ್ಕಿರುವುದು ಗೊತ್ತೇ ಇದೆ. ನಿತೇಶ್​ ತಿವಾರಿ ನಿರ್ದೇಶನ ಮಾಡಲಿರುವ ರಾಮಾಯಣ (Ramayan) ಕಥೆಯಾಧಾರಿತ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ರಾಮನ (Lord Rama) ಪಾತ್ರ ನೀಡಲಾಗಿದೆ. ಇನ್ನೂ ಅವರ ಫಸ್ಟ್​ ಲುಕ್​ ಬಿಡುಗಡೆ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

ಇದು ಕೃತಕ ಬುದ್ಧಿಮತ್ತೆಯ ಕಾಲ. ಎಲ್ಲ ಬಗೆಯ ಕಲ್ಪನೆಗೂ ಇಲ್ಲಿ ರೂಪ ಸಿಗುತ್ತದೆ. ರಣಬೀರ್​ ಕಪೂರ್​ ಅವರು ರಾಮನ ಪಾತ್ರದಲ್ಲಿ ಹೇಗೆ ಕಾಣಬಹುದು ಎಂಬುದನ್ನು ಎಐ ಮೂಲಕ ಕಲ್ಪಿಸಿಕೊಳ್ಳಲಾಗುತ್ತಿದೆ. ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಈ ರೀತಿಯ ಒಂದು ಫೋಟೋ ಹಂಚಿಕೊಳ್ಳಲಾಗಿದೆ. ರಣಬೀರ್​ ಕಪೂರ್​ ಅವರು ಬಿಲ್ಲು ಬಾಣ ಹಿಡಿದು ಆಕ್ರಮಣ ಮಾಡುತ್ತಿರುವ ದೃಶ್ಯ ಇದರಲ್ಲಿದೆ. ಇದು ಅಧಿಕೃತ ಪೋಸ್ಟರ್​ ಅಲ್ಲ. ಆದರೂ ಕೂಡ ಇದನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಮುಂಬೈನಲ್ಲಿ ಈ ಸಿನಿಮಾದ ಶೂಟಿಂಗ್​ ಈಗಾಗಲೇ ಶುರುವಾಗಿದೆ. ಕೈಕೇಯಿ ಪಾತ್ರ ಮಾಡುತ್ತಿರುವ ಲಾರಾ ದತ್ತ ಹಾಗೂ ದಶರಥನ ಪಾತ್ರ ಮಾಡುತ್ತಿರುವ ಅರುಣ್​ ಗೋವಿಲ್​ ಅವರ ಫೋಟೋಗಳು ‘ರಾಮಾಯಣ’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಲೀಕ್​ ಆಗಿವೆ. ಇಷ್ಟರಮೇಲೆ ಚಿತ್ರತಂಡದವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಹಲವು ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.

ಇದನ್ನೂ ಓದಿ:  ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ಪಾತ್ರವರ್ಗದ ಬಗ್ಗೆ ‘ರಾಮಾಯಣ’ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದೆ. ಆದರೂ ಅನೇಕ ಸುದ್ದಿಗಳು ಹರಿದಾಡುತ್ತಿವೆ. ರಾಮನಾಗಿ ರಣಬೀರ್​ ಕಪೂರ್ ನಟಿಸಿದರೆ, ಸೀತೆಯಾಗಿ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎನ್ನಲಾಗಿದೆ. ರಾವಣನಾಗಿ ಯಶ್ ಅಭಿನಯಿಸುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಸನ್ನಿ ಡಿಯೋಲ್​ ಅವರು ಆಂಜನೇಯನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲವು ಮಾಧ್ಯಮಗಳು ಪ್ರಕಟ ಮಾಡಿವೆ. ಪಾತ್ರವರ್ಗ ಬಗ್ಗೆ ಶೀಘ್ರದಲ್ಲೇ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂಬುದು ಸಿನಿಪ್ರಿಯರ ಬಯಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us