AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಕಪೂರ್ ಒಟ್ಟೂ ಆಸ್ತಿ ಎಷ್ಟು? ಎಲ್ಲಿಂದ ಬಂತು ಇಷ್ಟೊಂದು ಹಣ?

ರಿಷಿ ಕಪೂರ್ ಹಾಗೂ ನೀತು ದಂಪತಿಯ ಪುತ್ರನಾಗಿ ರಣಬೀರ್ ಜನಿಸಿದರು. 2007ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ ‘ಸಾವರಿಯಾ’ ರಣಬೀರ್ ಕಪೂರ್ ನಟನೆಯ ಮೊದಲ ಸಿನಿಮಾ. ಹೀರೋ ಆಗುವುದಕ್ಕೂ ಮೊದಲು ಸಹಾಯಕ ನಿರ್ದೇಶಕರಾಗಿ ರಣಬೀರ್ ಕೆಲಸ ಮಾಡಿದ್ದರು.

ರಣಬೀರ್ ಕಪೂರ್ ಒಟ್ಟೂ ಆಸ್ತಿ ಎಷ್ಟು? ಎಲ್ಲಿಂದ ಬಂತು ಇಷ್ಟೊಂದು ಹಣ?
ರಣಬೀರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 28, 2023 | 1:41 PM

Share

ನಟ ರಣಬೀರ್ ಕಪೂರ್ (Ranbir Kapoor) ಅವರು ಇಂದು (ಸೆಪ್ಟೆಂಬರ್ 28) 41ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ರಣಬೀರ್ ಕಪೂರ್ ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರಣಬೀರ್ ಕಪೂರ್ ಅವರು ನೂರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಹಲವು ಕಡೆಗಳಲ್ಲಿ ಅವರ ಹೆಸರಲ್ಲಿ ಪ್ರಾಪರ್ಟಿ ಇದೆ. ಹಲವು ಕಾರ್​ಗಳು ಕೂಡ ಅವರ ಬಳಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ರಿಷಿ ಕಪೂರ್ ಹಾಗೂ ನೀತು ದಂಪತಿಯ ಪುತ್ರನಾಗಿ ರಣಬೀರ್ ಜನಿಸಿದರು. 2007ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ ‘ಸಾವರಿಯಾ’ ರಣಬೀರ್ ಕಪೂರ್ ನಟನೆಯ ಮೊದಲ ಸಿನಿಮಾ. ಹೀರೋ ಆಗುವುದಕ್ಕೂ ಮೊದಲು ಸಹಾಯಕ ನಿರ್ದೇಶಕರಾಗಿ ರಣಬೀರ್ ಕೆಲಸ ಮಾಡಿದ್ದರು. ‘ಸಾವರಿಯಾ’ ಬಳಿಕ ‘ಅಜಬ್ ಪ್ರೇಮ್ ಕಿ ಗಜಬ್ ಕಹಾನಿ’, ‘ಯೇ ಜವಾನಿ ಹೇ ದಿವಾನಿ’, ‘ಸಂಜು’ ಮೊದಲಾದ ಹಿಟ್ ಸಿನಿಮಾಗಳಲ್ಲಿ ರಣಬೀರ್ ಕಪೂರ್ ನಟಿಸಿದರು. ಸದ್ಯ ‘ಅನಿಮಲ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆಯುತ್ತಿದೆ.

ರಣಬೀರ್ ಅವರು ಪ್ರತಿ ಚಿತ್ರಕ್ಕೆ 50 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ. ಇವರು ಅನೇಕ ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ವರ್ಷಕ್ಕೆ  ಬ್ರ್ಯಾಂ ಡ್ ಪ್ರಚಾರಕ್ಕೆ 6 ಕೋಟಿ ರೂಪಾಯಿ ಪಡೆಯುತ್ತಾರೆ. ರಣಬೀರ್ ಕಪೂರ್ ಅವರ ಒಟ್ಟೂ ಆಸ್ತಿ 345 ಕೋಟಿ ರೂಪಾಯಿ ಇದೆ. ಸಿನಿಮಾ ಹಾಗೂ  ರಣಬೀರ್ ಕಪೂರ್ ಅವರಿಗೆ ಫುಟ್​ಬಾಲ್ ಬಗ್ಗೆ ಅಪಾರ ಆಸಕ್ತಿ ಇದೆ. ಅವರು ಮುಂಬೈ ಎಫ್​ಸಿ ತಂಡದಲ್ಲಿ ಶೇ. 18 ಮಾಲೀಕತ್ವ ಹೊಂದಿದ್ದಾರೆ. ರಣಬೀರ್ ಕಪೂರ್​ಗೆ ತಂದೆಯೇ ಎಲ್ಲವೂ ಆಗಿತ್ತು. ಅವರನ್ನು ಕಳೆದುಕೊಂಡ ಬಳಿಕ ರಣಬೀರ್ ಸಾಕಷ್ಟು ಸಮಯ ದುಃಖದಲ್ಲಿದ್ದರು.

ಇದನ್ನೂ ಓದಿ:  ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್

ರಣಬೀರ್ ಕಪೂರ್ ಅವರು ವಿವಾದಗಳ ಮೂಲಕವೂ ಸುದ್ದಿ ಆಗಿದ್ದಾರೆ. ಅವರನ್ನು ಅನೇಕರು ಪ್ಲೇ ಬಾಯ್ ಎಂದು ಕೂಡ ಕರೆದಿದ್ದಿದೆ. ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ ಮೊದಲಾದವರ ಜೊತೆ ಅವರು ರಿಲೇಶನ್​ಶಿಪ್ ಹೊಂದಿದ್ದರು. ಆ ಬಳಿಕ ಬ್ರೇಕಪ್ ಆಯಿತು. ಸದ್ಯ ಆಲಿಯಾ ಭಟ್ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿಗೆ ರಹಾ ಹೆಸರಿನ ಮಗಳಿದ್ದಾಳೆ.

‘ಅನಿಮಲ್’ ಸಿನಿಮಾ ಬಗ್ಗೆ

‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ಎರಡು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 28) ರಿಲೀಸ್ ಆಗಿರುವ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಟೀಸರ್ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:08 pm, Thu, 28 September 23

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?