AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

‘ಅನಿಮಲ್​’ ಸಿನಿಮಾದಿಂದ ಭರ್ಜರಿ ಯಶಸ್ಸು ಪಡೆದ ರಣಬೀರ್​ ಕಪೂರ್​ ಅವರು ಈಗ ಸುಮ್ಮನೆ ಕುಳಿತಿಲ್ಲ. ರಾಮನ ಪಾತ್ರಕ್ಕೆ ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿದ್ದಾರೆ. ಅವರು ವರ್ಕೌಟ್​ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ರಾಮಾಯಣ ಕಥೆಯಾಧಾರಿತ ಸಿನಿಮಾಗಾಗಿ ರಣಬೀರ್​ ಕಪೂರ್​ ಸಜ್ಜಾಗುತ್ತಿದ್ದಾರೆ.

‘ರಾಮಾಯಣ’ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 08, 2024 | 10:36 PM

Share

ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾಗೆ ಭರದ ಸಿದ್ಧತೆ ನಡೆಯುತ್ತಿದೆ. ಬಾಲಿವುಡ್​ (Bollywood) ಮಂದಿಯ ಪಾಲಿಗೆ ಇದು ತುಂಬ ಮಹತ್ವದ ಪ್ರಾಜೆಕ್ಟ್​ ಆಗಲಿದೆ. ನಟ ರಣಬೀರ್​ ಕಪೂರ್​ ಅವರು ರಾಮನ ಪಾತ್ರ ಮಾಡಲಿದ್ದಾರೆ. ‘ದಂಗಲ್​’ ಸಿನಿಮಾ ಮೂಲಕ ಗಮನ ಸೆಳೆದ ನಿತೇಶ್​ ತಿವಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ. ಆದರೆ ರಣಬೀರ್​ ಕಪೂರ್​ (Ranbir Kapoor) ಅವರ ದೃಶ್ಯಗಳ ಚಿತ್ರೀಕರಣ ಶುರುವಾಗುವುದು ಇನ್ನೂ ತಡವಾಗಲಿದೆ. ಹಾಗಂತ ರಣಬೀರ್​ ಕಪೂರ್​ ಸುಮ್ಮನೆ ಕುಳಿತಿಲ್ಲ. ಕಠಿಣ ವರ್ಕೌಟ್​ ಮಾಡುವ ಮೂಲಕ ಅವರು ತಯಾರಾಗುತ್ತಿದ್ದಾರೆ.

ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದರೆ ಫಿಟ್​ ಆಗಿರಬೇಕು. ಅಲ್ಲದೇ ಗೆಟಪ್​ ಸಹ ಬದಲಾಯಿಸಿಕೊಳ್ಳಬೇಕು. ಅದಕ್ಕಾಗಿ ರಣಬೀರ್​ ಕಪೂರ್​ ಅವರು ತಮ್ಮ ಟ್ರೇನರ್​ ಜೊತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.

ಈ ಮೊದಲು ರಾಮಾಯಣ ಕಥೆ ಆಧರಿಸಿ ‘ಆದಿಪುರುಷ್​’ ಸಿನಿಮಾ ಮೂಡಿಬಂದಿತ್ತು. ಅದರಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡಿದ್ದರು. ಜನರಿಗೆ ಪ್ರಭಾಸ್​ ಅವರ ಗೆಟಪ್​ ಇಷ್ಟ ಆಗಿರಲಿಲ್ಲ. ರಾಮನ ಪಾತ್ರಧಾರಿಯ ಮುಖದಲ್ಲಿ ಕಳೆ ಇಲ್ಲದಿದ್ದರೆ ಪ್ರೇಕ್ಷಕರನ್ನು ಸೆಳೆಯುವುದು ಕಷ್ಟ. ‘ಆದಿಪುರುಷ್​’ ಸಿನಿಮಾವನ್ನು ನೆಟ್ಟಿಗರು ಟ್ರೋಲ್​ ಮಾಡಿದ್ದರು. ಹಾಗಾಗುವುದು ಬೇಡ ಎಂಬ ಉದ್ದೇಶದಿಂದ ರಣಬೀರ್​ ಕಪೂರ್​ ಅವರು ಸೂಕ್ತ ತಯಾರಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಆರಂಭದಲ್ಲೇ ಎಡವಿದ ‘ರಾಮಾಯಣ’ ಚಿತ್ರತಂಡ; ಚಿತ್ರೀಕರಣದ ಫೋಟೋಗಳು ಲೀಕ್​

ಈ ಸಿನಿಮಾದಲ್ಲಿ ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ರಾವಣನಾಗಿ ಕಾಣಿಸಿಕೊಳ್ಳುತ್ತಾರೆ ಎಂಬ ಗಾಸಿಪ್ ಹಬ್ಬಿದೆ. ಸಾಯಿ ಪಲ್ಲವಿ ಅವರಿಗೆ ಸೀತೆಯ ಪಾತ್ರವನ್ನು ನೀಡಲಾಗುತ್ತಿದೆ ಎಂದು ಕೂಡ ಅನೇಕ ಮಾಧ್ಯಮಗಳು ಸುದ್ದಿ ಪ್ರಕಟ ಮಾಡಿವೆ. ಚಿತ್ರತಂಡದಿಂದ ಯಾವುದೇ ರೀತಿಯ ಘೋಷಣೆ ಆಗಿಲ್ಲ. ಸನ್ನಿ ಡಿಯೋಲ್ ಅವರು ಆಂಜನೇಯನ ಪಾತ್ರ ಮಾಡುತ್ತಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ