‘ಅನಿಮಲ್​’ ಕಲೆಕ್ಷನ್​ ಬಗ್ಗೆ ರಣಬೀರ್​ ಕಪೂರ್​ ಬಯಸಿದ್ದು ಎಷ್ಟು? ಆಗಿದ್ದೆಷ್ಟು?

ಎಲ್ಲರ ನಿರೀಕ್ಷೆಯನ್ನೂ ಮೀರಿ ‘ಅನಿಮಲ್​’ ಸಿನಿಮಾ ಕಲೆಕ್ಷನ್​ ಮಾಡಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರದಲ್ಲಿ ನಟಿಸಿದ ಬಾಬಿ ಡಿಯೋಲ್​, ಅನಿಲ್​ ಕಪೂರ್​, ರಣಬೀರ್​ ಕಪೂರ್​, ತೃಪ್ತಿ ದಿಮ್ರಿ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

‘ಅನಿಮಲ್​’ ಕಲೆಕ್ಷನ್​ ಬಗ್ಗೆ ರಣಬೀರ್​ ಕಪೂರ್​ ಬಯಸಿದ್ದು ಎಷ್ಟು? ಆಗಿದ್ದೆಷ್ಟು?
ರಣಬೀರ್, ಅನಿಲ್ ಕಪೂರ್
Follow us
|

Updated on: Dec 27, 2023 | 6:53 PM

ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಅಬ್ಬರದ ನಡುವೆ ಹಿಂದಿ ಸಿನಿಮಾಗಳು ಮುಗ್ಗರಿಸುತ್ತಿದ್ದವು. ಆದರೆ 2023ರಲ್ಲಿ ಟ್ರೆಂಡ್​ ಬದಲಾಯಿತು. ‘ಗದರ್​ 2’, ‘ಜವಾನ್​’, ‘ಪಠಾಣ್​’ ಮುಂತಾದ ಸಿನಿಮಾಗಳು ಮೈ ಕೊಡವಿ ನಿಂತುಕೊಂಡವು. ಈ ವರ್ಷ ಡಿಸೆಂಬರ್ 1ರಂದು ಬಿಡುಗಡೆ ಆದ ಅನಿಮಲ್​’ ಸಿನಿಮಾ (Animal Movie) ಕೂಡ ಭರ್ಜರಿ ಕಮಾಯಿ ಮಾಡಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡಿದ ಈ ಚಿತ್ರದ ಬಗ್ಗೆ ರಣಬೀರ್​ ಕಪೂರ್​ (Ranbir Kapoor) ಅವರಿಗೆ ಭಾರಿ ನಿರೀಕ್ಷೆ ಇತ್ತು. ಸಿನಿಮಾದ ಶೂಟಿಂಗ್​ ಸಂದರ್ಭದಲ್ಲೇ ಅವರು 500 ಕೋಟಿ ರೂಪಾಯಿ ಕಲೆಕ್ಷನ್​ (Animal Box Office Collection) ಬಗ್ಗೆ ಮಾತನಾಡಿದ್ದರು ಎಂಬುದು ಈಗ ಗೊತ್ತಾಗಿದೆ.

‘ಅನಿಮಲ್​’ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾದ ಪ್ರಣಯ್​ ರೆಡ್ಡಿ ವಂಗಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಶೂಟಿಂಗ್​ ಸಂದರ್ಭದಲ್ಲಿ ನಡೆದ ಮಾತುಕತೆಯ ಬಗ್ಗೆ ಅವರು ಬಾಯಿ ಬಿಟ್ಟಿದ್ದಾರೆ. ಚಿತ್ರತಂಡದ ಪ್ರತಿಯೊಬ್ಬರ ಬಳಿಯೂ ಹೋಗಿ ರಣಬೀರ್​ ಕಪೂರ್​ ಅವರು ಕಲೆಕ್ಷನ್​ ಬಗ್ಗೆ ಭವಿಷ್ಯ ಕೇಳುತ್ತಿದ್ದರು ಎಂಬುದನ್ನು ಪ್ರಣಯ್​ ತಿಳಿಸಿದ್ದಾರೆ.

ಇದನ್ನೂ ಓದಿ: ಮಗಳ ಮುಖ ತೋರಿಸಿ 1 ಲಕ್ಷ ರೂಪಾಯಿ ದಾನ ಮಾಡಿದ ರಣಬೀರ್​ ಕಪೂರ್​

ಅನಿಲ್​ ಕಪೂರ್​ ಬಳಿ ಕೇಳಿದಾಗ, ‘350 ಕೋಟಿ ರೂಪಾಯಿ ಆಗಬಹುದು. 400 ಕೋಟಿ ರೂಪಾಯಿ ಆದರೆ ಇನ್ನೂ ಖುಷಿ ಆಗುತ್ತದೆ’ ಎಂದು ಹೇಳಿದ್ದರಂತೆ. ನಟಿ ರಶ್ಮಿಕಾ ಮಂದಣ್ಣ ಅವರು 400 ಕೋಟಿ ರೂಪಾಯಿ ಕಲೆಕ್ಷನ್​ ಆದರೆ ಉತ್ತಮ ಎಂದು ಹೇಳಿದ್ದರು. ‘500 ಕೋಟಿ ರೂಪಾಯಿಗಿಂತ ಕಡಿಮೆ ಕಲೆಕ್ಷನ್​ ಆದರೆ ನನಗೆ ಖುಷಿ ಆಗುವುದಿಲ್ಲ’ ಎಂದು ಪ್ರಣಯ್​ ಹೇಳಿದ್ದರು. ರಣಬೀರ್​ ಕಪೂರ್​ ಕೂಡ 500 ಕೋಟಿ ರೂಪಾಯಿ ಆಗಬೇಕು ಎಂದು ಬಯಸಿದ್ದರು.

ಇದನ್ನೂ ಓದಿ: ರಣಬೀರ್​ ಕಪೂರ್​ ಜತೆ ತೃಪ್ತಿ ದಿಮ್ರಿ ಬೋಲ್ಡ್​ ಪಾತ್ರ: ‘ಅನಿಮಲ್​’ ಚಿತ್ರಕ್ಕೆ ಈ ಸುಂದರಿ ಆಯ್ಕೆ ಆಗಿದ್ದು ಹೇಗೆ?

ಎಲ್ಲರ ನಿರೀಕ್ಷೆಯನ್ನೂ ಮೀರಿ ‘ಅನಿಮಲ್​’ ಸಿನಿಮಾ ಕಲೆಕ್ಷನ್​ ಮಾಡಿದೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ 537 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುವ ಮೂಲಕ ಬಂಗಾರದ ಬೆಳೆ ತೆಗೆದಿದೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ 850 ಕೋಟಿ ರೂಪಾಯಿಗಿಂತಲೂ ಆಧಿಕ ಕಲೆಕ್ಷನ್​ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಬಾಬಿ ಡಿಯೋಲ್​ ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು