AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ನಾಸ್ಟಿಕ್ಸ್ ವರ್ಕೌಟ್ ಮಾಡಿದ ರಣಬೀರ್ ಕಪೂರ್; ಯಾವ ಚಿತ್ರಕ್ಕಾಗಿ ಈ ಸಿದ್ಧತೆ?

ರಣಬೀರ್ ಕಪೂರ್ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಸಮಯ ಮಾಡಿಕೊಂಡು ನಿತ್ಯವೂ ಬಿಡದೆ ವರ್ಕೌಟ್ ಮಾಡುತ್ತಾರೆ. ಈಗ ಅವರ ಪರ್ಸನಲ್ ಟ್ರೇನರ್ ನಾಮ್ ಅವರು ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಜಿಮ್ನಾಸ್ಟಿಕ್ಸ್ ವರ್ಕೌಟ್ ಮಾಡಿದ ರಣಬೀರ್ ಕಪೂರ್; ಯಾವ ಚಿತ್ರಕ್ಕಾಗಿ ಈ ಸಿದ್ಧತೆ?
ರಣಬೀರ್
ರಾಜೇಶ್ ದುಗ್ಗುಮನೆ
|

Updated on: Jun 07, 2024 | 11:47 AM

Share

ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ಅವರು ‘ರಾಮಾಯಣ’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಈಗ ಜಿಮ್ನಾಸ್ಟಿಕ್ ಎಕ್ಸಸೈಸ್ ಮಾಡುತ್ತಿದ್ದಾರೆ. ಈ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಆಲಿಯಾ ಭಟ್ ಸೇರಿ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಣಬೀರ್ ಕಪೂರ್ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಸಮಯ ಮಾಡಿಕೊಂಡು ನಿತ್ಯವೂ ಬಿಡದೆ ವರ್ಕೌಟ್ ಮಾಡುತ್ತಾರೆ. ಈಗ ಅವರ ಪರ್ಸನಲ್ ಟ್ರೇನರ್ ನಾಮ್ ಅವರು ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಜಿಮ್ನಾಸ್ಟಿಕ್ ವ್ಯಾಯಾಮ ಮಾಡುತ್ತಿದ್ದಾರೆ. ‘ಟೂ ಗುಡ್’ ಎಂದು ಆಲಿಯಾ ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವು ಸೆಲೆಬ್ರಿಟಿಗಳು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

‘ಲವ್ ಆ್ಯಂಡ್ ವಾರ್’ ಚಿತ್ರದಲ್ಲೂ ರಣಬೀರ್ ಕಪೂರ್ ನಟಿಸುತ್ತಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರ 2024 ಜನವರಿಯಲ್ಲಿ ಘೋಷಣೆ ಆಯಿತು. ಈ ಸಿನಿಮಾ 2025ರ ಕ್ರಿಸ್​​ಮಸ್​​ಗೆ ರಿಲೀಸ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:ರಣಬೀರ್ ಕಪೂರ್-ಆಲಿಯಾ ಭಟ್​ ಮನೆಗೆ ಬಂತು ಲಕ್ಷುರಿ ಲೆಕ್ಸಸ್ ಕಾರು

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಇದಾದ ಬಳಿಕ ರಣಬೀರ್ ಹಾಗೂ ಆಲಿಯಾ ‘ಲವ್ ಆ್ಯಂಡ್ ವಾರ್’ ಚಿತ್ರಕ್ಕೆ ಒಂದಾಗುತ್ತಿದ್ದಾರೆ. ಇವರನ್ನು ಮತ್ತೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್ ಕೂಡ ಇದ್ದು, ಸಿನಿಮಾದ ಶೂಟಿಂಗ್ ಬಗ್ಗೆ ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ