‘ಧೂಮ್​ 4’ ಸಿನಿಮಾದಲ್ಲಿ ರಣಬೀರ್ ಕಪೂರ್ ವಿಲನ್? ಪೊಲೀಸ್ ಪಾತ್ರಕ್ಕೆ ನಟನ ಹುಡುಕಾಟ

ನೆಗೆಟಿವ್​ ಶೇಡ್​ ಇರುವ ಪಾತ್ರ ರಣಬೀರ್​ ಕಪೂರ್​ ಅವರಿಗೆ ಹೊಸದೇನೂ ಅಲ್ಲ. ಈಗ ಅವರಿಗೆ ‘ಧೂಮ್​ 4’ ಸಿನಿಮಾದಲ್ಲಿ ಕೂಡ ವಿಲನ್ ಆಗಲು ಆಫರ್​ ನೀಡಲಾಗಿದೆ. ಈವರೆಗೂ ‘ಧೂಮ್​’, ‘ಧೂಮ್​ 2’ ಮತ್ತು ‘ಧೂಮ್​ 3’ ಸಿನಿಮಾಗಳು ಪ್ರೇಕ್ಷಕರಿಗೆ ಸಖತ್​ ಮನರಂಜನೆ ನೀಡಿವೆ. ಆ ಯಶಸ್ಸಿನ ಪರಿಣಾಮವಾಗಿ ‘ಧೂಮ್​ 4’ ಚಿತ್ರಕ್ಕೆ ಸ್ಕ್ರಿಪ್ಟ್​ ಸಿದ್ಧವಾಗಿದೆ.

‘ಧೂಮ್​ 4’ ಸಿನಿಮಾದಲ್ಲಿ ರಣಬೀರ್ ಕಪೂರ್ ವಿಲನ್? ಪೊಲೀಸ್ ಪಾತ್ರಕ್ಕೆ ನಟನ ಹುಡುಕಾಟ
ರಣಬೀರ್​ ಕಪೂರ್​
Follow us
|

Updated on: Sep 30, 2024 | 10:35 PM

ನಟ ರಣಬೀರ್​ ಕಪೂರ್​ ಅವರು ‘ಅನಿಮಲ್’ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಅದಕ್ಕೆ ತಕ್ಕಂತೆ ಅವರಿಗೆ ಹಲವು ಅವಕಾಶಗಳು ಬರುತ್ತಿವೆ. ಈಗಾಗಲೇ ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುವ ಅವಕಾಶ ರಣಬೀರ್​ ಕಪೂರ್​ ಅವರಿಗೆ ಸಿಕ್ಕಿದೆ. ‘ಅನಿಮಲ್’ ಸಿನಿಮಾದಲ್ಲಿ ಅವರು ಹೀರೋ ಆಗಿದ್ದರೂ ಕೂಡ ಆ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇತ್ತು. ಆ ಕಾರಣದಿಂದಲೋ ಏನೋ ಅವರಿಗೆ ಅಂಥ ಪಾತ್ರಗಳೇ ಹುಡುಕಿಕೊಂಡು ಬರುತ್ತಿವೆ. ವರದಿಗಳ ಪ್ರಕಾರ, ‘ಧೂಮ್​ 2’ ಸಿನಿಮಾಗೆ ರಣಬೀರ್​ ಕಪೂರ್​ ವಿಲನ್​ ಆಗಲಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ‘ಧೂಮ್​’ ಸರಣಿಯ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ. ‘ಧೂಮ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ನೆಗೆಟಿವ್​ ರೋಲ್​ ಮಾಡಿದ್ದರು. ‘ಧೂಮ್​ 2’ ಚಿತ್ರದಲ್ಲಿ ಹೃತಿಕ್​ ರೋಷನ್​ ಅವರಿಗೆ ವಿಲನ್ ಪಾತ್ರ ಸಿಕ್ಕಿತು. ‘ಧೂಮ್​ 3’ ಸಿನಿಮಾದಲ್ಲಿ ಆಮಿರ್ ಖಾನ್​ ಅವರಿಗೆ ಆ ಪಾತ್ರ ಒಲಿಯಿತು. ಈಗ ‘ಧೂಮ್​ 4’ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ವಿಲನ್​ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಲೂಟಿಯ ಕಾನ್ಸೆಪ್ಟ್​ ಇರುವ ಧೂಮ್​ ಕಹಾನಿಯಲ್ಲಿ ಪೊಲೀಸ್​ ಪಾತ್ರಕ್ಕೂ ಅಷ್ಟೇ ಮಹತ್ವ ಇದೆ. ‘ಧೂಮ್ 4’ ಸಿನಿಮಾದಲ್ಲಿ ರಣಬೀರ್​ ಕಪೂರ್​ ಎದುರು ಪೊಲೀಸ್ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಯಾವ ನಟ ಆ ಪಾತ್ರಕ್ಕೆ ಸೂಕ್ತ ಆಗುತ್ತಾರೆ ಎಂಬುದು ತೀರ್ಮಾನ ಆಗಿಲ್ಲ ಎನ್ನಲಾಗಿದೆ. ಇನ್ನು, ಈ ಸಿನಿಮಾವನ್ನು ಯಾರು ನಿರ್ದೇಶಿಸುತ್ತಾರೆ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ರಣಬೀರ್​-ಆಲಿಯಾ ಭಟ್​ ಮಗಳು ರಹಾ ಕಪೂರ್​ ಕ್ಯೂಟ್​ ವಿಡಿಯೋ

ಈತನಕ ‘ಧೂಮ್​’ ಸರಣಿಯ ಎಲ್ಲ ಸಿನಿಮಾಗಳಿಗೆ ವಿಜಯ್​ ಕೃಷ್ಣ ಆಚಾರ್ಯ ಅಲಿಯಾಸ್​ ವಿಕ್ಟರ್​ ಅವರು ಸ್ಕ್ರಿಪ್ಟ್​ ಬರೆದಿದ್ದರು. ‘ಧೂಮ್​ 3’ ಸಿನಿಮಾವನ್ನು ಅವರು ನಿರ್ದೇಶನ ಮಾಡಿದ್ದಾರೆ. ಆ ಸಿನಿಮಾ ಕೂಡ ಸೂಪರ್​ ಹಿಟ್​ ಆಯಿತು. ಇಷ್ಟೆಲ್ಲ ಅನುಭವ ಇರುವ ಅವರಿಗೆ ‘ಧೂಮ್​ 4’ ಸಿನಿಮಾವನ್ನು ಕೂಡ ನಿರ್ದೇಶಿಸುವ ಅವಕಾಶ ನೀಡಲಾಗುತ್ತಿದೆ ಎಂಬ ಮಾತು ಬಿ-ಟೌನ್​ ಅಂಗಳದಲ್ಲಿ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್
ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್
ಸಿಡಿಮದ್ದು ತಾಲೀಮಿನ ವೇಳೆ ಬೆಚ್ಚಿದ ಆನೆ, ಮಾವುತನ ಸಾಹಸದಿಂದ ತಪ್ಪಿದ ಅನಾಹುತ
ಸಿಡಿಮದ್ದು ತಾಲೀಮಿನ ವೇಳೆ ಬೆಚ್ಚಿದ ಆನೆ, ಮಾವುತನ ಸಾಹಸದಿಂದ ತಪ್ಪಿದ ಅನಾಹುತ