AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧೂಮ್​ 4’ ಸಿನಿಮಾದಲ್ಲಿ ರಣಬೀರ್ ಕಪೂರ್ ವಿಲನ್? ಪೊಲೀಸ್ ಪಾತ್ರಕ್ಕೆ ನಟನ ಹುಡುಕಾಟ

ನೆಗೆಟಿವ್​ ಶೇಡ್​ ಇರುವ ಪಾತ್ರ ರಣಬೀರ್​ ಕಪೂರ್​ ಅವರಿಗೆ ಹೊಸದೇನೂ ಅಲ್ಲ. ಈಗ ಅವರಿಗೆ ‘ಧೂಮ್​ 4’ ಸಿನಿಮಾದಲ್ಲಿ ಕೂಡ ವಿಲನ್ ಆಗಲು ಆಫರ್​ ನೀಡಲಾಗಿದೆ. ಈವರೆಗೂ ‘ಧೂಮ್​’, ‘ಧೂಮ್​ 2’ ಮತ್ತು ‘ಧೂಮ್​ 3’ ಸಿನಿಮಾಗಳು ಪ್ರೇಕ್ಷಕರಿಗೆ ಸಖತ್​ ಮನರಂಜನೆ ನೀಡಿವೆ. ಆ ಯಶಸ್ಸಿನ ಪರಿಣಾಮವಾಗಿ ‘ಧೂಮ್​ 4’ ಚಿತ್ರಕ್ಕೆ ಸ್ಕ್ರಿಪ್ಟ್​ ಸಿದ್ಧವಾಗಿದೆ.

‘ಧೂಮ್​ 4’ ಸಿನಿಮಾದಲ್ಲಿ ರಣಬೀರ್ ಕಪೂರ್ ವಿಲನ್? ಪೊಲೀಸ್ ಪಾತ್ರಕ್ಕೆ ನಟನ ಹುಡುಕಾಟ
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Sep 30, 2024 | 10:35 PM

Share

ನಟ ರಣಬೀರ್​ ಕಪೂರ್​ ಅವರು ‘ಅನಿಮಲ್’ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಅದಕ್ಕೆ ತಕ್ಕಂತೆ ಅವರಿಗೆ ಹಲವು ಅವಕಾಶಗಳು ಬರುತ್ತಿವೆ. ಈಗಾಗಲೇ ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುವ ಅವಕಾಶ ರಣಬೀರ್​ ಕಪೂರ್​ ಅವರಿಗೆ ಸಿಕ್ಕಿದೆ. ‘ಅನಿಮಲ್’ ಸಿನಿಮಾದಲ್ಲಿ ಅವರು ಹೀರೋ ಆಗಿದ್ದರೂ ಕೂಡ ಆ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇತ್ತು. ಆ ಕಾರಣದಿಂದಲೋ ಏನೋ ಅವರಿಗೆ ಅಂಥ ಪಾತ್ರಗಳೇ ಹುಡುಕಿಕೊಂಡು ಬರುತ್ತಿವೆ. ವರದಿಗಳ ಪ್ರಕಾರ, ‘ಧೂಮ್​ 2’ ಸಿನಿಮಾಗೆ ರಣಬೀರ್​ ಕಪೂರ್​ ವಿಲನ್​ ಆಗಲಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ‘ಧೂಮ್​’ ಸರಣಿಯ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ. ‘ಧೂಮ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ನೆಗೆಟಿವ್​ ರೋಲ್​ ಮಾಡಿದ್ದರು. ‘ಧೂಮ್​ 2’ ಚಿತ್ರದಲ್ಲಿ ಹೃತಿಕ್​ ರೋಷನ್​ ಅವರಿಗೆ ವಿಲನ್ ಪಾತ್ರ ಸಿಕ್ಕಿತು. ‘ಧೂಮ್​ 3’ ಸಿನಿಮಾದಲ್ಲಿ ಆಮಿರ್ ಖಾನ್​ ಅವರಿಗೆ ಆ ಪಾತ್ರ ಒಲಿಯಿತು. ಈಗ ‘ಧೂಮ್​ 4’ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ವಿಲನ್​ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಲೂಟಿಯ ಕಾನ್ಸೆಪ್ಟ್​ ಇರುವ ಧೂಮ್​ ಕಹಾನಿಯಲ್ಲಿ ಪೊಲೀಸ್​ ಪಾತ್ರಕ್ಕೂ ಅಷ್ಟೇ ಮಹತ್ವ ಇದೆ. ‘ಧೂಮ್ 4’ ಸಿನಿಮಾದಲ್ಲಿ ರಣಬೀರ್​ ಕಪೂರ್​ ಎದುರು ಪೊಲೀಸ್ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಯಾವ ನಟ ಆ ಪಾತ್ರಕ್ಕೆ ಸೂಕ್ತ ಆಗುತ್ತಾರೆ ಎಂಬುದು ತೀರ್ಮಾನ ಆಗಿಲ್ಲ ಎನ್ನಲಾಗಿದೆ. ಇನ್ನು, ಈ ಸಿನಿಮಾವನ್ನು ಯಾರು ನಿರ್ದೇಶಿಸುತ್ತಾರೆ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ರಣಬೀರ್​-ಆಲಿಯಾ ಭಟ್​ ಮಗಳು ರಹಾ ಕಪೂರ್​ ಕ್ಯೂಟ್​ ವಿಡಿಯೋ

ಈತನಕ ‘ಧೂಮ್​’ ಸರಣಿಯ ಎಲ್ಲ ಸಿನಿಮಾಗಳಿಗೆ ವಿಜಯ್​ ಕೃಷ್ಣ ಆಚಾರ್ಯ ಅಲಿಯಾಸ್​ ವಿಕ್ಟರ್​ ಅವರು ಸ್ಕ್ರಿಪ್ಟ್​ ಬರೆದಿದ್ದರು. ‘ಧೂಮ್​ 3’ ಸಿನಿಮಾವನ್ನು ಅವರು ನಿರ್ದೇಶನ ಮಾಡಿದ್ದಾರೆ. ಆ ಸಿನಿಮಾ ಕೂಡ ಸೂಪರ್​ ಹಿಟ್​ ಆಯಿತು. ಇಷ್ಟೆಲ್ಲ ಅನುಭವ ಇರುವ ಅವರಿಗೆ ‘ಧೂಮ್​ 4’ ಸಿನಿಮಾವನ್ನು ಕೂಡ ನಿರ್ದೇಶಿಸುವ ಅವಕಾಶ ನೀಡಲಾಗುತ್ತಿದೆ ಎಂಬ ಮಾತು ಬಿ-ಟೌನ್​ ಅಂಗಳದಲ್ಲಿ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!