AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ ಕಪೂರ್​ ಹೊಸ ಲುಕ್ ವೈರಲ್; ‘ಧೂಮ್​ 4’ ಸಿನಿಮಾ ಟಾಕ್​ ಶುರು

ಒಂದೆಡೆ ‘ಧೂಮ್​ 4’ ಸಿನಿಮಾಗೆ ತಯಾರಿ ನಡೆಯುತ್ತಿದೆ. ಇನ್ನೊಂದೆಡೆ ರಣಬೀರ್​ ಕಪೂರ್ ಅವರ ಹೊಸ ಲುಕ್​ ವೈರಲ್​ ಆಗುತ್ತಿದೆ. ‘ಧೂಮ್​ 4’ ಸಿನಿಮಾ ಸಲುವಾಗಿಯೇ ಅವರು ಹೊಸ ಗೆಟಪ್​ ಮಾಡಿಕೊಂಡಿದ್ದಾರೆ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ. ‘ಅನಿಮಲ್’ ಸಕ್ಸಸ್ ಬಳಿಕ ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ರಣಬೀರ್​ ಕಪೂರ್​ ಹೊಸ ಲುಕ್ ವೈರಲ್; ‘ಧೂಮ್​ 4’ ಸಿನಿಮಾ ಟಾಕ್​ ಶುರು
ರಣಬೀರ್​ ಕಪೂರ್
ಮದನ್​ ಕುಮಾರ್​
|

Updated on: Oct 15, 2024 | 4:49 PM

Share

ನಟ ರಣಬೀರ್​ ಕಪೂರ್​ ಅವರು ಯಶಸ್ಸಿನ ಉತ್ತುಂಗದಲ್ಲಿ ಇದ್ದಾರೆ. ಅವರು ನಟಸಿದ ‘ಅನಿಮಲ್’ ಸಿನಿಮಾ ಕಳೆದ ವರ್ಷ ಭರ್ಜರಿ ಸದ್ದು ಮಾಡಿತ್ತು. ಈಗ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಇನ್ನೂ ಹಲವು ಆಫರ್​ಗಳು ಅವರಿಗೆ ಸಿಗುತ್ತಿವೆ. ಈ ನಡುವೆ ಅವರ ಹೊಸ ಲುಕ್​ ವೈರಲ್​ ಆಗಿದೆ. ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್ ಹಕಿಮ್ ಅವರು ಈ ಕೇಶ ವಿನ್ಯಾಸ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡಲು ಆರಂಭಿಸಿದ್ದಾರೆ.

ರಣಬೀರ್​ ಕಪೂರ್​ ಅವರ ಫ್ಯಾನ್ಸ್ ಪೇಜ್​ಗಳಲ್ಲಿ ಈ ಫೋಟೋಗಳು ವೈರಲ್ ಆಗಿವೆ. ಅವರು ಈ ಹೊಸ ಹೇರ್​ ಸ್ಟೈಲ್​ ಮಾಡಿಕೊಂಡಿರುವುದು ಮುಂಬರುವ ಸಿನಿಮಾಗಳ ಸಲುವಾಗಿ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ‘ಅನಿಮಲ್​ ಪಾರ್ಕ್​ ಸಿನಿಮಾಗಾಗಿ ಈ ಲುಕ್​’ ಎಂದು ಕೆಲವರು ಹೇಳಿದ್ದರೆ, ‘ಧೂಮ್ 4 ಚಿತ್ರಕ್ಕಾಗಿ ಈ ಗೆಟಪ್’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

View this post on Instagram

A post shared by Aalim Hakim (@aalimhakim)

‘ಧೂಮ್​’, ‘ಧೂಮ್​ 2’ ಹಾಗೂ ‘ಧೂಮ್​ 3’ ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ಮೊದಲ ಸಿನಿಮಾದಲ್ಲಿ ಜಾನ್​ ಅಬ್ರಾಹಂ, ಎರಡನೇ ಸಿನಿಮಾದಲ್ಲಿ ಹೃತಿಕ್​ ರೋಷನ್​ ಹಾಗೂ ಮೂರನೇ ಸಿನಿಮಾದಲ್ಲಿ ಆಮಿರ್ ಖಾನ್​ ಅವರು ವಿಲನ್ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ. ‘ಧೂಮ್​ 4’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡುವ ಅವಕಾಶ ರಣಬೀರ್​ ಕಪೂರ್​ ಅವರಿಗೆ ಸಿಗಲಿದೆ ಎಂದು ಹೇಳಾಗುತ್ತಿದೆ.

ಇದನ್ನೂ ಓದಿ: ರಣಬೀರ್​ನ ಮದುವೆ ಆಗ್ತೀನಿ ಎಂದಿದ್ದ ಸಾರಾ; ನಟನ ವಿವಾಹದ ಬಳಿಕ ಏನಂದ್ರು?

ಯಾವ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಪ್ರತಿಭೆ ರಣಬೀರ್​ ಕಪೂರ್​ ಅವರಲ್ಲಿದೆ. ಲವರ್​ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ನಂತರ ಮಾಸ್​ ಪಾತ್ರಗಳನ್ನು ಮಾಡಿ ಜನಮನ ಗೆದ್ದರು. ‘ಅನಿಮಲ್’ ಸಿನಿಮಾದಲ್ಲಿ ತುಂಬ ರಗಡ್​ ಆದಂತಹ ಪಾತ್ರಕ್ಕೆ ಬಣ್ಣ ಹಚ್ಚಿದ ನಂತರ ಅವರಿಗೆ ರಾಮನ ಪಾತ್ರ ಮಾಡುವ ಅವಕಾಶವನ್ನು ‘ರಾಮಾಯಣ’ ಸಿನಿಮಾದಲ್ಲಿ ನೀಡಲಾಗುತ್ತಿದೆ. ಆ ಬಗ್ಗೆ ಕಂಗನಾ ರಣಾವತ್ ಅವರು ವಿರೋಧ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!