AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ ಕಪೂರ್​ ಹೊಸ ಲುಕ್ ವೈರಲ್; ‘ಧೂಮ್​ 4’ ಸಿನಿಮಾ ಟಾಕ್​ ಶುರು

ಒಂದೆಡೆ ‘ಧೂಮ್​ 4’ ಸಿನಿಮಾಗೆ ತಯಾರಿ ನಡೆಯುತ್ತಿದೆ. ಇನ್ನೊಂದೆಡೆ ರಣಬೀರ್​ ಕಪೂರ್ ಅವರ ಹೊಸ ಲುಕ್​ ವೈರಲ್​ ಆಗುತ್ತಿದೆ. ‘ಧೂಮ್​ 4’ ಸಿನಿಮಾ ಸಲುವಾಗಿಯೇ ಅವರು ಹೊಸ ಗೆಟಪ್​ ಮಾಡಿಕೊಂಡಿದ್ದಾರೆ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ. ‘ಅನಿಮಲ್’ ಸಕ್ಸಸ್ ಬಳಿಕ ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ರಣಬೀರ್​ ಕಪೂರ್​ ಹೊಸ ಲುಕ್ ವೈರಲ್; ‘ಧೂಮ್​ 4’ ಸಿನಿಮಾ ಟಾಕ್​ ಶುರು
ರಣಬೀರ್​ ಕಪೂರ್
ಮದನ್​ ಕುಮಾರ್​
|

Updated on: Oct 15, 2024 | 4:49 PM

Share

ನಟ ರಣಬೀರ್​ ಕಪೂರ್​ ಅವರು ಯಶಸ್ಸಿನ ಉತ್ತುಂಗದಲ್ಲಿ ಇದ್ದಾರೆ. ಅವರು ನಟಸಿದ ‘ಅನಿಮಲ್’ ಸಿನಿಮಾ ಕಳೆದ ವರ್ಷ ಭರ್ಜರಿ ಸದ್ದು ಮಾಡಿತ್ತು. ಈಗ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಇನ್ನೂ ಹಲವು ಆಫರ್​ಗಳು ಅವರಿಗೆ ಸಿಗುತ್ತಿವೆ. ಈ ನಡುವೆ ಅವರ ಹೊಸ ಲುಕ್​ ವೈರಲ್​ ಆಗಿದೆ. ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್ ಹಕಿಮ್ ಅವರು ಈ ಕೇಶ ವಿನ್ಯಾಸ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡಲು ಆರಂಭಿಸಿದ್ದಾರೆ.

ರಣಬೀರ್​ ಕಪೂರ್​ ಅವರ ಫ್ಯಾನ್ಸ್ ಪೇಜ್​ಗಳಲ್ಲಿ ಈ ಫೋಟೋಗಳು ವೈರಲ್ ಆಗಿವೆ. ಅವರು ಈ ಹೊಸ ಹೇರ್​ ಸ್ಟೈಲ್​ ಮಾಡಿಕೊಂಡಿರುವುದು ಮುಂಬರುವ ಸಿನಿಮಾಗಳ ಸಲುವಾಗಿ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ‘ಅನಿಮಲ್​ ಪಾರ್ಕ್​ ಸಿನಿಮಾಗಾಗಿ ಈ ಲುಕ್​’ ಎಂದು ಕೆಲವರು ಹೇಳಿದ್ದರೆ, ‘ಧೂಮ್ 4 ಚಿತ್ರಕ್ಕಾಗಿ ಈ ಗೆಟಪ್’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

View this post on Instagram

A post shared by Aalim Hakim (@aalimhakim)

‘ಧೂಮ್​’, ‘ಧೂಮ್​ 2’ ಹಾಗೂ ‘ಧೂಮ್​ 3’ ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ಮೊದಲ ಸಿನಿಮಾದಲ್ಲಿ ಜಾನ್​ ಅಬ್ರಾಹಂ, ಎರಡನೇ ಸಿನಿಮಾದಲ್ಲಿ ಹೃತಿಕ್​ ರೋಷನ್​ ಹಾಗೂ ಮೂರನೇ ಸಿನಿಮಾದಲ್ಲಿ ಆಮಿರ್ ಖಾನ್​ ಅವರು ವಿಲನ್ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ. ‘ಧೂಮ್​ 4’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡುವ ಅವಕಾಶ ರಣಬೀರ್​ ಕಪೂರ್​ ಅವರಿಗೆ ಸಿಗಲಿದೆ ಎಂದು ಹೇಳಾಗುತ್ತಿದೆ.

ಇದನ್ನೂ ಓದಿ: ರಣಬೀರ್​ನ ಮದುವೆ ಆಗ್ತೀನಿ ಎಂದಿದ್ದ ಸಾರಾ; ನಟನ ವಿವಾಹದ ಬಳಿಕ ಏನಂದ್ರು?

ಯಾವ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಪ್ರತಿಭೆ ರಣಬೀರ್​ ಕಪೂರ್​ ಅವರಲ್ಲಿದೆ. ಲವರ್​ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ನಂತರ ಮಾಸ್​ ಪಾತ್ರಗಳನ್ನು ಮಾಡಿ ಜನಮನ ಗೆದ್ದರು. ‘ಅನಿಮಲ್’ ಸಿನಿಮಾದಲ್ಲಿ ತುಂಬ ರಗಡ್​ ಆದಂತಹ ಪಾತ್ರಕ್ಕೆ ಬಣ್ಣ ಹಚ್ಚಿದ ನಂತರ ಅವರಿಗೆ ರಾಮನ ಪಾತ್ರ ಮಾಡುವ ಅವಕಾಶವನ್ನು ‘ರಾಮಾಯಣ’ ಸಿನಿಮಾದಲ್ಲಿ ನೀಡಲಾಗುತ್ತಿದೆ. ಆ ಬಗ್ಗೆ ಕಂಗನಾ ರಣಾವತ್ ಅವರು ವಿರೋಧ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!