17ನೇ ವಯಸ್ಸಿಗೆ ಧೂಮಪಾನದ ಚಟ; ಆ ವ್ಯಕ್ತಿಗಾಗಿ ಸಿಗರೇಟ್ ಬಿಟ್ಟ ರಣಬೀರ್ ಕಪೂರ್

ಮಗಳ ಪಾಲನೆಯಲ್ಲಿ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ತೊಡಗಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಅವರು ಮಗಳ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ರಹಾಗಾಗಿ ಸಿಗೇಟರ್ ಬಿಟ್ಟೆ ಎಂದಿದ್ದಾರೆ ರಣಬೀರ್ ಕಪೂರ್. ಅವರ ಹೇಳಿಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.

17ನೇ ವಯಸ್ಸಿಗೆ ಧೂಮಪಾನದ ಚಟ; ಆ ವ್ಯಕ್ತಿಗಾಗಿ ಸಿಗರೇಟ್ ಬಿಟ್ಟ ರಣಬೀರ್ ಕಪೂರ್
ರಣಬೀರ್ ಕಪೂರ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 29, 2024 | 8:02 AM

ರಣಬೀರ್ ಕಪೂರ್​ಗೆ ಮಗಳು ರಹಾ ಬಗ್ಗೆ ವಿಶೇಷ ಪ್ರೀತಿ ಬಂದಿದೆ. ಆಕೆಯ ಆರೈಕೆಯಲ್ಲಿ ಅವರು ಸದಾ ಬ್ಯುಸಿ ಇರುತ್ತಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮಗಳ ಜೊತೆ ರಣಬೀರ್ ಹಾಗೂ ಆಲಿಯಾ ಭಟ್ ಪೋಸ್ ಕೊಟ್ಟಿದ್ದು ಇದೆ. ರಹಾ ನೋಡೋಕೆ ಸೇಮ್ ಟು ಸೇಮ್ ಆಲಿಯಾ ಭಟ್ ತರಹವೇ ಇದ್ದಾಳೆ. ಈ ಕಾರಣಕ್ಕೆ ಎಲ್ಲರೂ ಅವಳಿಗೆ ಜೂನಿಯರ್ ಆಲಿಯಾ ಎಂದು ಕರೆದಿದ್ದು ಇದೆ. ರಹಾ ಜನಿಸಿದ ಬಳಿಕ ರಣಬೀರ್ ಕಪೂರ್​ಗೆ ಆರೋಗ್ಯದ ಬಗ್ಗೆ ಕಾಳಜಿ ಮೂಡಿದೆ. ಹೀಗಾಗಿ, ಅವರು ಸಿಗರೇಟ್ ಸೇದುವುದನ್ನೇ ಬಿಟ್ಟಿದ್ದಾರೆ.

ಇತ್ತೀಚೆಗೆ ರಣಬೀರ್ ಅವರು ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ತಮ್ಮ ಮಗಳ ಬಗ್ಗೆ ಹಾಗೂ ಅವಳು ಜನಿಸುವುದಕ್ಕೂ ಮೊದಲು ಹೇಗಿದ್ದೆ ಎನ್ನುವ ಬಗ್ಗೆ ಮಾತನಾಡಿದ್ದರು. ‘ನಾನು ಒಂದು ಮಗುವಿನ ತಂದೆ. ಅದು ನನ್ನ ಜೀವನದ ಗೇಮ್ ಚೇಂಜರ್ ಪಾಯಿಂಟ್. ನಾನು ಈಗಷ್ಟೇ ಜನಿಸಿದ್ದೇನೆ ಎಂದು ಭಾಸವಾಗುತ್ತಿದೆ. ನಾನು ಮತ್ತೆ ಹುಟ್ಟಿದ್ದೇನೆ. ಈ ಮೊದಲು ಜೀವಿಸಿದ್ದು ಒಂದಾದರೆ ಈಗ ಜೀವಿಸುತ್ತಿರೋದು ಮತ್ತೊಂದು ಜೀವನ ಎನಿಸುತ್ತಿದೆ. ಹೊಸ ಭಾವನೆ ಹಾಗೂ ಆಲೋಚನೆಗಳೊಂದಿಗೆ ಬದುಕುತ್ತಿದ್ದೇನೆ. ನನಗೆ ಈ ಮೊದಲು ಸಾವಿನ ಬಗ್ಗೆ ಯಾವುದೇ ಭಯ ಇಲ್ಲ. ನಾನು ಯಾವಾಗಲೂ 71ನೇ ವಯಸ್ಸಿಗೆ ಸಾಯಬೇಕು ಎಂದುಕೊಳ್ಳುತ್ತಿದ್ದೆ. ಏಕೆಂದರೆ ನನಗೆ 8ನೇ ನಂಬರ್ (7+1=8) ಮೇಲೆ ವಿಶೇಷ ಪ್ರೀತಿ. ಆದರೆ, 71 ಅನ್ನೋದು ಬೇಗ ಅನಿಸುತ್ತಿದೆ. ಇದಕ್ಕೆಲ್ಲ ಕಾರಣ ರಹಾ’ ಎಂದಿದ್ದಾರೆ ರಣಬೀರ್.

ರಹಾಗಾಗಿ ಸಿಗೇಟರ್ ಬಿಟ್ಟೆ ಎಂದಿದ್ದಾರೆ ರಣಬೀರ್ ಕಪೂರ್. ‘ನಾನು 17ನೇ ವಯಸ್ಸಿನಿಂದ ಸಿಗರೇಟ್ ಸೇದೋಕೆ ಆರಂಭಿಸಿದೆ. ಅದು ನನಗೆ ಚಟವಾಗಿತ್ತು. ಕಳೆದ ವರ್ಷ ನಾನು ಸಿಗರೇಟ್ ಬಿಟ್ಟೆ. ನಾನು ತಂದೆ ಆದ ಬಳಿಕ ತುಂಬಾನೇ ಅನಾರೋಗ್ಯಕರ ಜೀವನ ನಡೆಸುತ್ತಿದ್ದೇನೆ ಎನಿಸಿತು. ಅದಕ್ಕಾಗಿ ಸಿಗರೇಟ್ ಸೇದುವುದನ್ನು ತೊರೆದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಕ್ಷಮಿಸಿ, ಅನಿಮಲ್ ರೀತಿಯ ಸಿನಿಮಾ ಮತ್ತೆ ಮಾಡಲ್ಲ’: ರಣಬೀರ್ ಕಪೂರ್​ ಹೀಗೆ ಹೇಳಿದ್ದೇಕೆ?

‘ಆಲಿಯಾ ಪ್ರೆಗ್ನೆಂಟ್ ಆದಾಗ ನನಗೇನು ಅನಿಸುತ್ತಾ ಇರಲಿಲ್ಲ. ಆದರೆ, ಆಲಿಯಾ ಇದನ್ನು ಫೀಲ್ ಮಾಡುತ್ತಿದ್ದಳು. ಏಕೆಂದರೆ ಮಗು ಇದ್ದಿದ್ದು ಅವಳ ಹೊಟ್ಟೆಯಲ್ಲಿ. ಆದರೆ, ಮಗಳು ಜನಿಸಿ ಅದನ್ನು ನನ್ನ ಕೈ ಮೇಲೆ ಇಟ್ಟಾಗ ನನ್ನ ಹೃದಯವನ್ನು ತೆಗೆದು ಯಾರೋ ನನ್ನ ಕೈಮೇಲೆ ಇಟ್ಟ ಭಾವನೆ’ ಎಂದಿದ್ದಾರೆ ರಣಬೀರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್