AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘರ್ಜನೆ ಇಲ್ಲದೇ ಗೆಲ್ಲುತ್ತಾ ‘ಅನಿಮಲ್’ ಸಿನಿಮಾ? ಹೀಗೆ ಆದ್ರೆ ಕಷ್ಟ ಇದೆ

‘ಅನಿಮಲ್’ ತಂಡ ಬಾಲಯ್ಯ ಅವರ ‘ಅನ್​ಸ್ಟಾಪಬಲ್’ ಶೋ ಹಾಗೂ ದುಬೈನಲ್ಲಿ ಪ್ರಮೋಷನಲ್ ವಿಡಿಯೋ ರಿಲೀಸ್ ಮಾಡಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಯಾವುದೇ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಕೂಡ ಆಯೋಜನೆ ಮಾಡಿಲ್ಲ. ತೆಲುಗಿನಲ್ಲಿ, ಕನ್ನಡದಲ್ಲಿ ಹಾಗಿರಲಿ ಹಿಂದಿಯಲ್ಲೇ ಸಿನಿಮಾಗೆ ಪ್ರಚಾರ ಸಿಗುತ್ತಿಲ್ಲ.

ಘರ್ಜನೆ ಇಲ್ಲದೇ ಗೆಲ್ಲುತ್ತಾ ‘ಅನಿಮಲ್’ ಸಿನಿಮಾ? ಹೀಗೆ ಆದ್ರೆ ಕಷ್ಟ ಇದೆ
ರಣಬೀರ್​ ಕಪೂರ್​, ಅನಿಲ್​ ಕಪೂರ್​
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Nov 20, 2023 | 2:23 PM

ಯಾವುದೇ ಬಿಗ್ ಬಜೆಟ್ ಸಿನಿಮಾ ಬರುತ್ತದೆ ಎಂದರೆ ಅದಕ್ಕೆ ಒಂದು ತಿಂಗಳಿಂದ ಪ್ರಚಾರ (Movie Promotion) ಮಾಡಬೇಕು. ಅದರಲ್ಲೂ ಪ್ಯಾನ್ ಇಂಡಿಯಾ ಸಿನಿಮಾ ಎಂದಾದರೆ ಬೇರೆ ಬೇರೆ ರಾಜ್ಯಗಳಿಗೆ ತೆರಳಬೇಕಾಗುತ್ತದೆ. ಅಲ್ಲಿನ ಮಾಧ್ಯಮಗಳ ಜೊತೆ ಮಾತನಾಡಬೇಕಾಗುತ್ತದೆ. ಇಷ್ಟೆಲ್ಲ ಮಾಡಿದರೂ ಜನರು ಥಿಯೇಟರ್​ಗೆ ಬರುತ್ತಾರೆ ಎನ್ನುವ ಗ್ಯಾರಂಟಿ ಇಲ್ಲ. ಸಿನಿಮಾ ಪ್ರಚಾರ ವಿಚಾರದಲ್ಲಿ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅನೇಕರಿಗೆ ಮಾದರಿ. ಅವರು ಸಿನಿಮಾ ಮೇಕಿಂಗ್​ಗೆ ಕೊಟ್ಟಷ್ಟೇ ಮಹತ್ವವನ್ನು ಸಿನಿಮಾ ಪ್ರಚಾರಕ್ಕೂ ನೀಡುತ್ತಾರೆ. ಆದರೆ, ‘ಅನಿಮಲ್​(Animal Movie) ತಂಡ ಸಿನಿಮಾ ಪ್ರಮೋಷನ್ ವಿಚಾರದಲ್ಲಿ ಅಷ್ಟು ಆಸಕ್ತಿ ತೋರಿಸಿದಂತೆ ಕಾಣುತ್ತಿಲ್ಲ.

ಸಂದೀಪ್ ರೆಡ್ಡಿ ವಂಗ ಅವರು ‘ಅರ್ಜುನ್ ರೆಡ್ಡಿ’ ಸಿನಿಮಾ ಮೂಲಕ ಫೇಮಸ್ ಆದವರು. ಇದೇ ಚಿತ್ರವನ್ನು ‘ಕಬೀರ್ ಸಿಂಗ್’ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಲಾಯಿತು. ಇದಕ್ಕೆ ನಿರ್ದೇಶನ ಮಾಡಿದ್ದು ಕೂಡ ಅವರೇ. ಈ ಸಿನಿಮಾ ಕೂಡ ಹಿಟ್ ಆಯಿತು. ಈಗ ಅವರ ಮೇಲೆ ಭರವಸೆ ಇಟ್ಟು ನಿರ್ಮಾಪಕರು ದೊಡ್ಡ ಮೊತ್ತದ ಹಣ ಹೂಡಿದ್ದಾರೆ. ‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಕೂಡ ‘ಅರ್ಜುನ್ ರೆಡ್ಡಿ’ ಶೇಡ್​ನಲ್ಲೇ ಇದೆ. ಜನರು ಸಿನಿಮಾ ನೋಡಿಯೇ ನೋಡುತ್ತಾರೆ ಎನ್ನುವ ಭರವಸೆ ಸಂದೀಪ್ ರೆಡ್ಡಿ ವಂಗಗೆ ಬಂದಂತೆ ಇದೆ. ಈ ಕಾರಣಕ್ಕೆ ಅವರು ಸಿನಿಮಾಗೆ ಹೆಚ್ಚು ಪ್ರಚಾರ ನೀಡುತ್ತಿಲ್ಲ.

ಇದನ್ನೂ ಓದಿ: ಪತಿ ರಣಬೀರ್ ಕಪೂರ್​ ಬಗ್ಗೆ ಟಾಕ್ಸಿಕ್​ ಎಂದವರಿಗೆ ತಿರುಗೇಟು ನೀಡಿದ ಆಲಿಯಾ ಭಟ್​

‘ಅನಿಮಲ್’ ತಂಡ ಬಾಲಯ್ಯ ಅವರ ‘ಅನ್​ಸ್ಟಾಪಬಲ್’ ಶೋ ಹಾಗೂ ದುಬೈನಲ್ಲಿ ಪ್ರಮೋಷನಲ್ ವಿಡಿಯೋ ರಿಲೀಸ್ ಮಾಡಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಯಾವುದೇ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಕೂಡ ಆಯೋಜನೆ ಮಾಡಿಲ್ಲ. ತೆಲುಗಿನಲ್ಲಿ, ಕನ್ನಡದಲ್ಲಿ ಹಾಗಿರಲಿ ಹಿಂದಿಯಲ್ಲೇ ಸಿನಿಮಾಗೆ ಪ್ರಚಾರ ಸಿಗುತ್ತಿಲ್ಲ. ಇದು ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ. ಡಿಸೆಂಬರ್ ತಿಂಗಳಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿವೆ. ಸಿನಿಮಾ ಚೆನ್ನಾಗಿಲ್ಲ ಎಂದರೆ ಒಂದೇ ವಾರಕ್ಕೆ ಥಿಯೇಟರ್​ನಿಂದ ಕಾಲ್ಕೀಳಬೇಕಾಗಿ ಬರಹುದು. ಈ ಬಗ್ಗೆ ತಂಡಕ್ಕೆ ಚಿಂತೆ ಇದ್ದಂತೆ ಕಾಣುತ್ತಿಲ್ಲ.

ಇದನ್ನೂ ಓದಿ: ಮತ್ತೆ ಮುಂದುವರಿದ ಕಿಸ್ಸಿಂಗ್ ಸರಣಿ; ‘ಅನಿಮಲ್’ ಹೊಸ ಹಾಡಿನಲ್ಲಿ ರಣಬೀರ್-ರಶ್ಮಿಕಾ ಲಿಪ್ ಲಾಕ್

ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣ, ತಿರುಪತಿ ಮೊದಲಾದ ಕಡೆಗಳಲ್ಲಿ ಸಂದೀಪ್​, ರಣಬೀರ್ ಹಾಗೂ ರಶ್ಮಿಕಾ ತೆರಳುವವರಿದ್ದರು. ಆದರೆ, ಆ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ರಣಬೀರ್ ಕಪೂರ್ ಅವರಿಗೆ ಈ ಸಿನಿಮಾ ಮೂಲಕ ಗೆಲ್ಲಬೇಕಿದೆ. ‘ಬ್ರಹ್ಮಾಸ್ತ್ರ’ ಗೆಲುವಿನ ಬಳಿಕ ರಿಲೀಸ್ ಆಗುತ್ತಿರುವ ಮೊದಲ ಸಿನಿಮಾ ಇದು. ರಶ್ಮಿಕಾ ಅವರು ಈ ವರ್ಷ ಕೆಲವು ಗೆಲುವು ಕಂಡಿದ್ದಾರೆ. ಈ ಚಿತ್ರದಿಂದ ಅವರು ಮತ್ತೊಂದು ಗೆಲುವು ಕಾಣುವ ಕನಸು ಕಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್