AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘರ್ಜನೆ ಇಲ್ಲದೇ ಗೆಲ್ಲುತ್ತಾ ‘ಅನಿಮಲ್’ ಸಿನಿಮಾ? ಹೀಗೆ ಆದ್ರೆ ಕಷ್ಟ ಇದೆ

‘ಅನಿಮಲ್’ ತಂಡ ಬಾಲಯ್ಯ ಅವರ ‘ಅನ್​ಸ್ಟಾಪಬಲ್’ ಶೋ ಹಾಗೂ ದುಬೈನಲ್ಲಿ ಪ್ರಮೋಷನಲ್ ವಿಡಿಯೋ ರಿಲೀಸ್ ಮಾಡಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಯಾವುದೇ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಕೂಡ ಆಯೋಜನೆ ಮಾಡಿಲ್ಲ. ತೆಲುಗಿನಲ್ಲಿ, ಕನ್ನಡದಲ್ಲಿ ಹಾಗಿರಲಿ ಹಿಂದಿಯಲ್ಲೇ ಸಿನಿಮಾಗೆ ಪ್ರಚಾರ ಸಿಗುತ್ತಿಲ್ಲ.

ಘರ್ಜನೆ ಇಲ್ಲದೇ ಗೆಲ್ಲುತ್ತಾ ‘ಅನಿಮಲ್’ ಸಿನಿಮಾ? ಹೀಗೆ ಆದ್ರೆ ಕಷ್ಟ ಇದೆ
ರಣಬೀರ್​ ಕಪೂರ್​, ಅನಿಲ್​ ಕಪೂರ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 20, 2023 | 2:23 PM

Share

ಯಾವುದೇ ಬಿಗ್ ಬಜೆಟ್ ಸಿನಿಮಾ ಬರುತ್ತದೆ ಎಂದರೆ ಅದಕ್ಕೆ ಒಂದು ತಿಂಗಳಿಂದ ಪ್ರಚಾರ (Movie Promotion) ಮಾಡಬೇಕು. ಅದರಲ್ಲೂ ಪ್ಯಾನ್ ಇಂಡಿಯಾ ಸಿನಿಮಾ ಎಂದಾದರೆ ಬೇರೆ ಬೇರೆ ರಾಜ್ಯಗಳಿಗೆ ತೆರಳಬೇಕಾಗುತ್ತದೆ. ಅಲ್ಲಿನ ಮಾಧ್ಯಮಗಳ ಜೊತೆ ಮಾತನಾಡಬೇಕಾಗುತ್ತದೆ. ಇಷ್ಟೆಲ್ಲ ಮಾಡಿದರೂ ಜನರು ಥಿಯೇಟರ್​ಗೆ ಬರುತ್ತಾರೆ ಎನ್ನುವ ಗ್ಯಾರಂಟಿ ಇಲ್ಲ. ಸಿನಿಮಾ ಪ್ರಚಾರ ವಿಚಾರದಲ್ಲಿ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅನೇಕರಿಗೆ ಮಾದರಿ. ಅವರು ಸಿನಿಮಾ ಮೇಕಿಂಗ್​ಗೆ ಕೊಟ್ಟಷ್ಟೇ ಮಹತ್ವವನ್ನು ಸಿನಿಮಾ ಪ್ರಚಾರಕ್ಕೂ ನೀಡುತ್ತಾರೆ. ಆದರೆ, ‘ಅನಿಮಲ್​(Animal Movie) ತಂಡ ಸಿನಿಮಾ ಪ್ರಮೋಷನ್ ವಿಚಾರದಲ್ಲಿ ಅಷ್ಟು ಆಸಕ್ತಿ ತೋರಿಸಿದಂತೆ ಕಾಣುತ್ತಿಲ್ಲ.

ಸಂದೀಪ್ ರೆಡ್ಡಿ ವಂಗ ಅವರು ‘ಅರ್ಜುನ್ ರೆಡ್ಡಿ’ ಸಿನಿಮಾ ಮೂಲಕ ಫೇಮಸ್ ಆದವರು. ಇದೇ ಚಿತ್ರವನ್ನು ‘ಕಬೀರ್ ಸಿಂಗ್’ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಲಾಯಿತು. ಇದಕ್ಕೆ ನಿರ್ದೇಶನ ಮಾಡಿದ್ದು ಕೂಡ ಅವರೇ. ಈ ಸಿನಿಮಾ ಕೂಡ ಹಿಟ್ ಆಯಿತು. ಈಗ ಅವರ ಮೇಲೆ ಭರವಸೆ ಇಟ್ಟು ನಿರ್ಮಾಪಕರು ದೊಡ್ಡ ಮೊತ್ತದ ಹಣ ಹೂಡಿದ್ದಾರೆ. ‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಕೂಡ ‘ಅರ್ಜುನ್ ರೆಡ್ಡಿ’ ಶೇಡ್​ನಲ್ಲೇ ಇದೆ. ಜನರು ಸಿನಿಮಾ ನೋಡಿಯೇ ನೋಡುತ್ತಾರೆ ಎನ್ನುವ ಭರವಸೆ ಸಂದೀಪ್ ರೆಡ್ಡಿ ವಂಗಗೆ ಬಂದಂತೆ ಇದೆ. ಈ ಕಾರಣಕ್ಕೆ ಅವರು ಸಿನಿಮಾಗೆ ಹೆಚ್ಚು ಪ್ರಚಾರ ನೀಡುತ್ತಿಲ್ಲ.

ಇದನ್ನೂ ಓದಿ: ಪತಿ ರಣಬೀರ್ ಕಪೂರ್​ ಬಗ್ಗೆ ಟಾಕ್ಸಿಕ್​ ಎಂದವರಿಗೆ ತಿರುಗೇಟು ನೀಡಿದ ಆಲಿಯಾ ಭಟ್​

‘ಅನಿಮಲ್’ ತಂಡ ಬಾಲಯ್ಯ ಅವರ ‘ಅನ್​ಸ್ಟಾಪಬಲ್’ ಶೋ ಹಾಗೂ ದುಬೈನಲ್ಲಿ ಪ್ರಮೋಷನಲ್ ವಿಡಿಯೋ ರಿಲೀಸ್ ಮಾಡಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಯಾವುದೇ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಕೂಡ ಆಯೋಜನೆ ಮಾಡಿಲ್ಲ. ತೆಲುಗಿನಲ್ಲಿ, ಕನ್ನಡದಲ್ಲಿ ಹಾಗಿರಲಿ ಹಿಂದಿಯಲ್ಲೇ ಸಿನಿಮಾಗೆ ಪ್ರಚಾರ ಸಿಗುತ್ತಿಲ್ಲ. ಇದು ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ. ಡಿಸೆಂಬರ್ ತಿಂಗಳಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿವೆ. ಸಿನಿಮಾ ಚೆನ್ನಾಗಿಲ್ಲ ಎಂದರೆ ಒಂದೇ ವಾರಕ್ಕೆ ಥಿಯೇಟರ್​ನಿಂದ ಕಾಲ್ಕೀಳಬೇಕಾಗಿ ಬರಹುದು. ಈ ಬಗ್ಗೆ ತಂಡಕ್ಕೆ ಚಿಂತೆ ಇದ್ದಂತೆ ಕಾಣುತ್ತಿಲ್ಲ.

ಇದನ್ನೂ ಓದಿ: ಮತ್ತೆ ಮುಂದುವರಿದ ಕಿಸ್ಸಿಂಗ್ ಸರಣಿ; ‘ಅನಿಮಲ್’ ಹೊಸ ಹಾಡಿನಲ್ಲಿ ರಣಬೀರ್-ರಶ್ಮಿಕಾ ಲಿಪ್ ಲಾಕ್

ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣ, ತಿರುಪತಿ ಮೊದಲಾದ ಕಡೆಗಳಲ್ಲಿ ಸಂದೀಪ್​, ರಣಬೀರ್ ಹಾಗೂ ರಶ್ಮಿಕಾ ತೆರಳುವವರಿದ್ದರು. ಆದರೆ, ಆ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ರಣಬೀರ್ ಕಪೂರ್ ಅವರಿಗೆ ಈ ಸಿನಿಮಾ ಮೂಲಕ ಗೆಲ್ಲಬೇಕಿದೆ. ‘ಬ್ರಹ್ಮಾಸ್ತ್ರ’ ಗೆಲುವಿನ ಬಳಿಕ ರಿಲೀಸ್ ಆಗುತ್ತಿರುವ ಮೊದಲ ಸಿನಿಮಾ ಇದು. ರಶ್ಮಿಕಾ ಅವರು ಈ ವರ್ಷ ಕೆಲವು ಗೆಲುವು ಕಂಡಿದ್ದಾರೆ. ಈ ಚಿತ್ರದಿಂದ ಅವರು ಮತ್ತೊಂದು ಗೆಲುವು ಕಾಣುವ ಕನಸು ಕಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​