AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ರೂಪಾಯಿಗೆ ಇಳಿಕೆ ಆಯಿತು ‘ಅನಿಮಲ್​’ ಸಿನಿಮಾ ಟಿಕೆಟ್​ ಬೆಲೆ; ಕಾರಣ ಏನು?

ಬಿಡುಗಡೆಯಾಗಿ ಒಂದು ತಿಂಗಳ ಮೇಲಾಗಿದ್ದರೂ ಕೂಡ ಇನ್ನೂ ಕೆಲವು ಕಡೆಗಳಲ್ಲಿ ‘ಅನಿಮಲ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಅನೇಕ ಹೊಸ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ‘ಅನಿಮಲ್​’ ತಂಡ ಬೆಲೆ ಇಳಿಕೆಯ ತಂತ್ರ ರೂಪಿಸಿದೆ.

100 ರೂಪಾಯಿಗೆ ಇಳಿಕೆ ಆಯಿತು ‘ಅನಿಮಲ್​’ ಸಿನಿಮಾ ಟಿಕೆಟ್​ ಬೆಲೆ; ಕಾರಣ ಏನು?
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Jan 09, 2024 | 7:05 PM

Share

ಬಾಲಿವುಡ್​ನಲ್ಲಿ ‘ಅನಿಮಲ್​’ ಸಿನಿಮಾದ ಯಶಸ್ಸಿನಿಂದ ರಣಬೀರ್​ ಕಪೂರ್ (Ranbir Kapoor) ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ನಟಿಸಿದ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ. ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ 550 ಕೋಟಿ ರೂಪಾಯಿ ಗಳಿಕೆ ಆಗಿದೆ. ವಿಶ್ವ ಬಾಕ್ಸ್​ ಆಫೀಸ್​ನ ಕಲೆಕ್ಷನ್​ ಕೂಡ ಸೇರಿಸಿದರೆ ‘ಅನಿಮಲ್​’ ಸಿನಿಮಾದ (Animal Movie) ಒಟ್ಟು ಗಳಿಕೆ ಅಂದಾಜು 900 ಕೋಟಿ ರೂಪಾಯಿ ಆಗಲಿದೆ. ಈಗ ಸಿನಿಪ್ರಿಯರಿಗೆ ಒಂದು ಗುಡ್​ ನ್ಯೂಸ್​ ಸಿಕ್ಕಿದೆ. ಈ ಸಿನಿಮಾದ ಟಿಕೆಟ್​ ಬೆಲೆಯನ್ನು 100 ರೂಪಾಯಿಗೆ ಇಳಿಸಲಾಗಿದೆ.

‘ಅನಿಮಲ್​’ ಸಿನಿಮಾ ಬಿಡುಗಡೆ ಆದಾಗ ಟಿಕೆಟ್​ ಬೆಲೆ ಮುಗಿಲು ಮುಟ್ಟಿತ್ತು. ಆದರೂ ಕೂಡ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಖರೀದಿ ಮಾಡಿದ್ದರು. ಸಾವಿರ ರೂಪಾಯಿಯ ಟಿಕೆಟ್​ಗಳು ಕೂಡ ಸೋಲ್ಡ್​ ಔಟ್​ ಆಗಿದ್ದವು. ಈಗ ಈ ಚಿತ್ರದ ಟಿಕೆಟ್​ ಬೆಲೆ ಕಡಿಮೆ ಮಾಡಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಸೋಶಿಯಲ್​ ಮೀಡಿಯಾ ಪೋಸ್ಟ್​ ಮೂಲಕ ಅಭಿಮಾನಿಗಳಿಗೆ ಈ ಖುಷಿಯ ಸಮಾಚಾರವನ್ನು ತಿಳಿಸಲಾಗಿದೆ.

View this post on Instagram

A post shared by tseriesfilms (@tseriesfilms)

ಬಿಡುಗಡೆಯಾಗಿ ಒಂದು ತಿಂಗಳ ಮೇಲಾಗಿದ್ದರೂ ಕೂಡ ಇನ್ನೂ ಕೆಲವು ಕಡೆಗಳಲ್ಲಿ ‘ಅನಿಮಲ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಅನೇಕ ಹೊಸ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ‘ಅನಿಮಲ್​’ ತಂಡ ಬೆಲೆ ಇಳಿಕೆಯ ತಂತ್ರ ರೂಪಿಸಿದೆ. ಆ ಮೂಲಕ ಇನ್ನಷ್ಟು ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆ ತರಲು ಪ್ಲ್ಯಾನ್​ ಮಾಡಲಾಗಿದೆ. ಈ ತಂತ್ರಕ್ಕೆ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾ ಗೆಲುವು ಅಪಾಯಕಾರಿ ಎಂದ ಜಾವೇದ್​ ಅಖ್ತರ್​; ಪ್ರೇಕ್ಷಕರಿಗೆ ಕಿವಿಮಾತು

ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಕೆಲವು ದೃಶ್ಯಗಳಿಗೆ ಅನೇಕರಿಂದ ಆಕ್ಷೇಪ ವ್ಯಕ್ತವಾಗಿದೆ. ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಇವೆ, ಕ್ರೌರ್ಯದ ವೈಭವೀಕರಣ ಆಗಿದೆ, ಡೈಲಾಗ್​ಗಳು ಅಸಭ್ಯವಾಗಿವೆ ಎಂಬಿತ್ಯಾದಿ ಟೀಕೆಗಳು ಬಂದಿವೆ. ಅವುಗಳ ನಡುವೆಯೂ ಸಿನಿಮಾ ಸೂಪರ್​ ಹಿಟ್​ ಆಗಿದೆ. ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ ಜೊತೆ ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ