AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ರೂಪಾಯಿಗೆ ಇಳಿಕೆ ಆಯಿತು ‘ಅನಿಮಲ್​’ ಸಿನಿಮಾ ಟಿಕೆಟ್​ ಬೆಲೆ; ಕಾರಣ ಏನು?

ಬಿಡುಗಡೆಯಾಗಿ ಒಂದು ತಿಂಗಳ ಮೇಲಾಗಿದ್ದರೂ ಕೂಡ ಇನ್ನೂ ಕೆಲವು ಕಡೆಗಳಲ್ಲಿ ‘ಅನಿಮಲ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಅನೇಕ ಹೊಸ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ‘ಅನಿಮಲ್​’ ತಂಡ ಬೆಲೆ ಇಳಿಕೆಯ ತಂತ್ರ ರೂಪಿಸಿದೆ.

100 ರೂಪಾಯಿಗೆ ಇಳಿಕೆ ಆಯಿತು ‘ಅನಿಮಲ್​’ ಸಿನಿಮಾ ಟಿಕೆಟ್​ ಬೆಲೆ; ಕಾರಣ ಏನು?
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Jan 09, 2024 | 7:05 PM

Share

ಬಾಲಿವುಡ್​ನಲ್ಲಿ ‘ಅನಿಮಲ್​’ ಸಿನಿಮಾದ ಯಶಸ್ಸಿನಿಂದ ರಣಬೀರ್​ ಕಪೂರ್ (Ranbir Kapoor) ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ನಟಿಸಿದ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ. ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ 550 ಕೋಟಿ ರೂಪಾಯಿ ಗಳಿಕೆ ಆಗಿದೆ. ವಿಶ್ವ ಬಾಕ್ಸ್​ ಆಫೀಸ್​ನ ಕಲೆಕ್ಷನ್​ ಕೂಡ ಸೇರಿಸಿದರೆ ‘ಅನಿಮಲ್​’ ಸಿನಿಮಾದ (Animal Movie) ಒಟ್ಟು ಗಳಿಕೆ ಅಂದಾಜು 900 ಕೋಟಿ ರೂಪಾಯಿ ಆಗಲಿದೆ. ಈಗ ಸಿನಿಪ್ರಿಯರಿಗೆ ಒಂದು ಗುಡ್​ ನ್ಯೂಸ್​ ಸಿಕ್ಕಿದೆ. ಈ ಸಿನಿಮಾದ ಟಿಕೆಟ್​ ಬೆಲೆಯನ್ನು 100 ರೂಪಾಯಿಗೆ ಇಳಿಸಲಾಗಿದೆ.

‘ಅನಿಮಲ್​’ ಸಿನಿಮಾ ಬಿಡುಗಡೆ ಆದಾಗ ಟಿಕೆಟ್​ ಬೆಲೆ ಮುಗಿಲು ಮುಟ್ಟಿತ್ತು. ಆದರೂ ಕೂಡ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಖರೀದಿ ಮಾಡಿದ್ದರು. ಸಾವಿರ ರೂಪಾಯಿಯ ಟಿಕೆಟ್​ಗಳು ಕೂಡ ಸೋಲ್ಡ್​ ಔಟ್​ ಆಗಿದ್ದವು. ಈಗ ಈ ಚಿತ್ರದ ಟಿಕೆಟ್​ ಬೆಲೆ ಕಡಿಮೆ ಮಾಡಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಸೋಶಿಯಲ್​ ಮೀಡಿಯಾ ಪೋಸ್ಟ್​ ಮೂಲಕ ಅಭಿಮಾನಿಗಳಿಗೆ ಈ ಖುಷಿಯ ಸಮಾಚಾರವನ್ನು ತಿಳಿಸಲಾಗಿದೆ.

View this post on Instagram

A post shared by tseriesfilms (@tseriesfilms)

ಬಿಡುಗಡೆಯಾಗಿ ಒಂದು ತಿಂಗಳ ಮೇಲಾಗಿದ್ದರೂ ಕೂಡ ಇನ್ನೂ ಕೆಲವು ಕಡೆಗಳಲ್ಲಿ ‘ಅನಿಮಲ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಅನೇಕ ಹೊಸ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ‘ಅನಿಮಲ್​’ ತಂಡ ಬೆಲೆ ಇಳಿಕೆಯ ತಂತ್ರ ರೂಪಿಸಿದೆ. ಆ ಮೂಲಕ ಇನ್ನಷ್ಟು ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆ ತರಲು ಪ್ಲ್ಯಾನ್​ ಮಾಡಲಾಗಿದೆ. ಈ ತಂತ್ರಕ್ಕೆ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾ ಗೆಲುವು ಅಪಾಯಕಾರಿ ಎಂದ ಜಾವೇದ್​ ಅಖ್ತರ್​; ಪ್ರೇಕ್ಷಕರಿಗೆ ಕಿವಿಮಾತು

ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಕೆಲವು ದೃಶ್ಯಗಳಿಗೆ ಅನೇಕರಿಂದ ಆಕ್ಷೇಪ ವ್ಯಕ್ತವಾಗಿದೆ. ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಇವೆ, ಕ್ರೌರ್ಯದ ವೈಭವೀಕರಣ ಆಗಿದೆ, ಡೈಲಾಗ್​ಗಳು ಅಸಭ್ಯವಾಗಿವೆ ಎಂಬಿತ್ಯಾದಿ ಟೀಕೆಗಳು ಬಂದಿವೆ. ಅವುಗಳ ನಡುವೆಯೂ ಸಿನಿಮಾ ಸೂಪರ್​ ಹಿಟ್​ ಆಗಿದೆ. ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ ಜೊತೆ ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ