3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​?

ರಾಮಾಯಣವನ್ನು ಆಧರಿಸಿದ ಈ ಸಿನಿಮಾ ಮೂರು ಪಾರ್ಟ್​​ಗಳಲ್ಲಿ ಮೂಡಿಬರಲಿದೆ. 700 ಕೋಟಿ ರೂ. ಬಜೆಟ್​ ಮೀಸಲಿಡಲಾಗಿದೆ. ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಅಧಿಕೃತವಾಗಿ ಚಿತ್ರ ಘೋಷಣೆ ಆಗುವ ಸಾಧ್ಯತೆ ಇದೆ.

3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​?
ಮಹೇಶ್​ ಬಾಬು - ರಣಬೀರ್ ಕಪೂರ್​
Follow us
| Updated By: ಮದನ್​ ಕುಮಾರ್​

Updated on: Aug 20, 2021 | 8:40 AM

ಪುರಾಣದ ಕಥೆಗಳು ಎಂದೆಂದಿಗೂ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತವೆ. ಹಾಗಾಗಿ ಮಹಾಭಾರತ, ರಾಮಾಯಣವನ್ನು ಆಧರಿಸಿ ಹಲವು ಸಿನಿಮಾ, ಧಾರಾವಾಹಿ, ವೆಬ್​ಸಿರೀಸ್​, ನಾಟಕಗಳು ಮೂಡಿಬರುತ್ತಲೇ ಇವೆ. ಬಾಲಿವುಡ್​ನಲ್ಲಿ ರಾಮಾಯಣ ಆಧರಿಸಿ 3ಡಿ ಸಿನಿಮಾ ಮಾಡಲು ಖ್ಯಾತ ನಿರ್ದೇಶಕ ನಿತೇಶ್​ ತಿವಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಸಖತ್​ ನಿರೀಕ್ಷೆ ಹುಟ್ಟುಹಾಕುತ್ತಿದೆ. ರಾಮ, ಸೀತೆ, ಲಕ್ಷ್ಮಣ, ರಾವಣನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದು ಯಾರು ಎಂಬ ಕೌತುಕ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಅಚ್ಚರಿ ಎಂದರೆ, ಮಹೇಶ್​ ಬಾಬು ಮಾಡಬೇಕಾಗಿದ್ದ ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ ನಟಿಸುವ ಸಾಧ್ಯತೆ ಇದೆ. ಈ ಬಗ್ಗೆ ಬಾಲಿವುಡ್​ ಅಂಗಳದಿಂದ ಗುಸುಗುಸು ಕೇಳಿಬರುತ್ತಿದೆ.

ಈ ಸಿನಿಮಾದಲ್ಲಿ ರಾಮನಾಗಿ ಮಹೇಶ್​ ಬಾಬು ಹಾಗೂ ರಾವಣನಾಗಿ ಹೃತಿಕ್​ ರೋಷನ್​ ನಟಿಸುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಆದರೆ ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ರಾಮನ ಪಾತ್ರವನ್ನು ಮಹೇಶ್​ ಬಾಬು ರಿಜೆಕ್ಟ್​ ಮಾಡಿದ್ದಾರಂತೆ. ಅವರ ಬದಲು ಬಾಲಿವುಡ್​ನ ಹ್ಯಾಂಡ್ಸಮ್​ ನಟ ರಣಬೀರ್​ ಕಪೂರ್​ಗೆ ನಿರ್ದೇಶಕರು ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರು ಒಪ್ಪಿಕೊಂಡಿದ್ದಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಖಚಿತತೆ ಸಿಕ್ಕಿಲ್ಲ.

ಅಷ್ಟಕ್ಕೂ ಮಹೇಶ್​ ಬಾಬು ಇಂಥ ಒಳ್ಳೆಯ ಆಫರ್​ ಕೈಚೆಲ್ಲಿದ್ದೇಕೆ? ಅದಕ್ಕೆ ರಾಜಮೌಳಿ ಕಾರಣ ಎನ್ನಲಾಗುತ್ತಿದೆ. ಈಗಾಗಲೇ ಸುದ್ದಿ ಆಗಿರುವಂತೆ ರಾಜಮೌಳಿ ಮತ್ತು ಮಹೇಶ್​ ಬಾಬು ಜೊತೆಯಾಗಿ ಒಂದು ಸಿನಿಮಾ ಮಾಡಲಿದ್ದಾರೆ. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ರಾಜಮೌಳಿ ಒಮ್ಮೆ ಒಂದು ಸಿನಿಮಾಗೆ ಕೈಹಾಕಿದರೆ ಅದನ್ನು ಪೂರ್ಣಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಮಹೇಶ್​ ಬಾಬು ಬೇರೊಂದು ಸಿನಿಮಾಗೆ ಡೇಟ್ಸ್​ ಹೊಂದಿಸುವುದು ಕಷ್ಟ. ಹಾಗಾಗಿ ಅವರು ರಾಮನಾಗುವ ಅವಕಾಶ ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ರಾಮನ ಪಾತ್ರಕ್ಕೆ ರಣಬೀರ್​ ಕಪೂರ್​ ಸೂಕ್ತ ಆಗುತ್ತಾರೆ ಎನ್ನುವ ನಂಬಿಕೆ ಸ್ವತಃ ನಿತೇಶ್​ ತಿವಾರಿ ಅವರಿಗೆ ಇದೆ ಎಂಬ ಬಗ್ಗೆಯೂ ವರದಿ ಆಗಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ. ಅತ್ತ ರಣಬೀರ್​ ಕಪೂರ್​ ಕೂಡ ಏನನ್ನೂ ಬಾಯಿಬಿಟ್ಟಿಲ್ಲ. ಮೂರು ಪಾರ್ಟ್​​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. 700 ಕೋಟಿ ರೂ. ಬಜೆಟ್​ ಮೀಸಲಿಡಲಾಗಿದೆ. ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಅಧಿಕೃತವಾಗಿ ಈ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು