AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​?

ರಾಮಾಯಣವನ್ನು ಆಧರಿಸಿದ ಈ ಸಿನಿಮಾ ಮೂರು ಪಾರ್ಟ್​​ಗಳಲ್ಲಿ ಮೂಡಿಬರಲಿದೆ. 700 ಕೋಟಿ ರೂ. ಬಜೆಟ್​ ಮೀಸಲಿಡಲಾಗಿದೆ. ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಅಧಿಕೃತವಾಗಿ ಚಿತ್ರ ಘೋಷಣೆ ಆಗುವ ಸಾಧ್ಯತೆ ಇದೆ.

3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​?
ಮಹೇಶ್​ ಬಾಬು - ರಣಬೀರ್ ಕಪೂರ್​
TV9 Web
| Updated By: ಮದನ್​ ಕುಮಾರ್​|

Updated on: Aug 20, 2021 | 8:40 AM

Share

ಪುರಾಣದ ಕಥೆಗಳು ಎಂದೆಂದಿಗೂ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತವೆ. ಹಾಗಾಗಿ ಮಹಾಭಾರತ, ರಾಮಾಯಣವನ್ನು ಆಧರಿಸಿ ಹಲವು ಸಿನಿಮಾ, ಧಾರಾವಾಹಿ, ವೆಬ್​ಸಿರೀಸ್​, ನಾಟಕಗಳು ಮೂಡಿಬರುತ್ತಲೇ ಇವೆ. ಬಾಲಿವುಡ್​ನಲ್ಲಿ ರಾಮಾಯಣ ಆಧರಿಸಿ 3ಡಿ ಸಿನಿಮಾ ಮಾಡಲು ಖ್ಯಾತ ನಿರ್ದೇಶಕ ನಿತೇಶ್​ ತಿವಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಸಖತ್​ ನಿರೀಕ್ಷೆ ಹುಟ್ಟುಹಾಕುತ್ತಿದೆ. ರಾಮ, ಸೀತೆ, ಲಕ್ಷ್ಮಣ, ರಾವಣನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದು ಯಾರು ಎಂಬ ಕೌತುಕ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಅಚ್ಚರಿ ಎಂದರೆ, ಮಹೇಶ್​ ಬಾಬು ಮಾಡಬೇಕಾಗಿದ್ದ ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ ನಟಿಸುವ ಸಾಧ್ಯತೆ ಇದೆ. ಈ ಬಗ್ಗೆ ಬಾಲಿವುಡ್​ ಅಂಗಳದಿಂದ ಗುಸುಗುಸು ಕೇಳಿಬರುತ್ತಿದೆ.

ಈ ಸಿನಿಮಾದಲ್ಲಿ ರಾಮನಾಗಿ ಮಹೇಶ್​ ಬಾಬು ಹಾಗೂ ರಾವಣನಾಗಿ ಹೃತಿಕ್​ ರೋಷನ್​ ನಟಿಸುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಆದರೆ ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ರಾಮನ ಪಾತ್ರವನ್ನು ಮಹೇಶ್​ ಬಾಬು ರಿಜೆಕ್ಟ್​ ಮಾಡಿದ್ದಾರಂತೆ. ಅವರ ಬದಲು ಬಾಲಿವುಡ್​ನ ಹ್ಯಾಂಡ್ಸಮ್​ ನಟ ರಣಬೀರ್​ ಕಪೂರ್​ಗೆ ನಿರ್ದೇಶಕರು ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರು ಒಪ್ಪಿಕೊಂಡಿದ್ದಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಖಚಿತತೆ ಸಿಕ್ಕಿಲ್ಲ.

ಅಷ್ಟಕ್ಕೂ ಮಹೇಶ್​ ಬಾಬು ಇಂಥ ಒಳ್ಳೆಯ ಆಫರ್​ ಕೈಚೆಲ್ಲಿದ್ದೇಕೆ? ಅದಕ್ಕೆ ರಾಜಮೌಳಿ ಕಾರಣ ಎನ್ನಲಾಗುತ್ತಿದೆ. ಈಗಾಗಲೇ ಸುದ್ದಿ ಆಗಿರುವಂತೆ ರಾಜಮೌಳಿ ಮತ್ತು ಮಹೇಶ್​ ಬಾಬು ಜೊತೆಯಾಗಿ ಒಂದು ಸಿನಿಮಾ ಮಾಡಲಿದ್ದಾರೆ. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ರಾಜಮೌಳಿ ಒಮ್ಮೆ ಒಂದು ಸಿನಿಮಾಗೆ ಕೈಹಾಕಿದರೆ ಅದನ್ನು ಪೂರ್ಣಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಮಹೇಶ್​ ಬಾಬು ಬೇರೊಂದು ಸಿನಿಮಾಗೆ ಡೇಟ್ಸ್​ ಹೊಂದಿಸುವುದು ಕಷ್ಟ. ಹಾಗಾಗಿ ಅವರು ರಾಮನಾಗುವ ಅವಕಾಶ ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ರಾಮನ ಪಾತ್ರಕ್ಕೆ ರಣಬೀರ್​ ಕಪೂರ್​ ಸೂಕ್ತ ಆಗುತ್ತಾರೆ ಎನ್ನುವ ನಂಬಿಕೆ ಸ್ವತಃ ನಿತೇಶ್​ ತಿವಾರಿ ಅವರಿಗೆ ಇದೆ ಎಂಬ ಬಗ್ಗೆಯೂ ವರದಿ ಆಗಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ. ಅತ್ತ ರಣಬೀರ್​ ಕಪೂರ್​ ಕೂಡ ಏನನ್ನೂ ಬಾಯಿಬಿಟ್ಟಿಲ್ಲ. ಮೂರು ಪಾರ್ಟ್​​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. 700 ಕೋಟಿ ರೂ. ಬಜೆಟ್​ ಮೀಸಲಿಡಲಾಗಿದೆ. ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಅಧಿಕೃತವಾಗಿ ಈ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಭಾರತಕ್ಕೆ ಬರಲಿದೆ ಬೋಟ್ಸ್‌ವಾನಾದ 8 ಚೀತಾ
ಭಾರತಕ್ಕೆ ಬರಲಿದೆ ಬೋಟ್ಸ್‌ವಾನಾದ 8 ಚೀತಾ