AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾ: ರಣ್​ಬೀರ್-ಸಾಯಿ ಪಲ್ಲವಿ ಫೋಟೊ ಲೀಕ್

ರಾಮಾಯಣ ಆಧರಿಸಿದ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣ್​ಬೀರ್ ಹಾಗೂ ಸೀತಾ ಮಾತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಸಿನಿಮಾ ಸೆಟ್​ನ ಚಿತ್ರವೊಂದು ಲೀಕ್ ಆಗಿದ್ದು ವೈರಲ್ ಆಗುತ್ತಿದೆ.

‘ರಾಮಾಯಣ’ ಸಿನಿಮಾ: ರಣ್​ಬೀರ್-ಸಾಯಿ ಪಲ್ಲವಿ ಫೋಟೊ ಲೀಕ್
ರಾಮಾಯಣ
Follow us
ಮಂಜುನಾಥ ಸಿ.
|

Updated on: May 14, 2024 | 2:11 PM

ಪ್ರಭಾಸ್ (Prabhas) ನಟಿಸಿದ್ದ ರಾಮಾಯಣ ಕತೆ ಆಧರಿಸಿದ್ದ ‘ಆದಿಪುರುಷ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋಲು ಕಂಡಿದೆ. ಮಾತ್ರವಲ್ಲ, ‘ಆದಿಪುರುಷ್’ ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಲಾಗಿದೆ ಎಂಬ ಆರೋಪವೂ ಎದುರಾಗಿತ್ತು. ಹಲವು ಕಡೆ ದೂರುಗಳು ಸಹ ದಾಖಲಾದವು. ನ್ಯಾಯಾಲಯ ಸಹ ಸಿನಿಮಾದ ನಿರ್ದೇಶಕರು, ನಿರ್ಮಾಪಕರ ಬಗ್ಗೆ ಅಸಮಾಧಾನ ಹೊರಹಾಕಿತು. ಆದರೆ ಇದನ್ನೆಲ್ಲ ನಿರ್ಲಕ್ಷಿಸಿ ರಾಮಾಯಣ ಆಧರಿಸಿದ ಮತ್ತೊಂದು ಭಾರಿ ಬಜೆಟ್ ಸಿನಿಮಾದ ನಿರ್ಮಾಣ ಆರಂಭವಾಗಿದೆ. ಸಿನಿಮಾದಲ್ಲಿ ರಣ್​ಬೀರ್ ಕಪೂರ್ ರಾಮನಾಗಿ ನಟಿಸುತ್ತಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಹೆಚ್ಚಿನ ಸುದ್ದಿಗಳನ್ನು ಚಿತ್ರರಂಗ ಬಿಟ್ಟುಕೊಟ್ಟಿರಲಿಲ್ಲ ಆದರೆ ಈಗ ಚಿತ್ರೀಕರಣದ ಫೊಟೊ ಒಂದು ಲೀಕ್ ಆಗಿ ವೈರಲ್ ಆಗಿದೆ.

ಶ್ರೀಮರಾಮನ ವೇಷದಲ್ಲಿರುವ ರಣ್​ಬೀರ್ ಕಪೂರ್ ಹಾಗೂ ಸೀತಾ ಮಾತೆಯ ವೇಷದಲ್ಲಿರುವ ಸಾಯಿ ಪಲ್ಲವಿ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಅರಮನೆಯ ಸೆಟ್​ನ ಮುಂದೆ ರಾಮ-ಸೀತೆ ಪಾತ್ರಧಾರಿಗಳು (ರಣ್​ಬೀರ್-ಸಾಯಿ ಪಲ್ಲವಿ) ಓಡಾಡುತ್ತಿರುವ ದೃಶ್ಯದ ಚಿತ್ರ ವೈರಲ್ ಆಗಿದೆ. ರಣ್​ಬೀರ್ ಕಪೂರ್, ಪಾತ್ರಕ್ಕಾಗಿ ತೂಕ ಇಳಿಸಿಕೊಂಡಿರುವುದು ಚಿತ್ರದಿಂದ ಗೊತ್ತಾಗುತ್ತಿದೆ. ಇನ್ನು ನಟಿ ಸಾಯಿ ಸಹ ಸೀತೆಯ ಪಾತ್ರಕ್ಕೆ ಚೆನ್ನಾಗಿ ಒಪ್ಪುತ್ತಿದ್ದಾರೆ. ಸಹಜ ಸೌಂದರ್ಯದಿಂದ ಅವರು ಗಮನ ಸೆಳೆಯುತ್ತಿದ್ದಾರೆ. ಸಿನಿಮಾದಲ್ಲಿ ಲಾರಾ ದತ್ತ ಕೈಕೆಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ನಟಿಸಲಿದ್ದಾರೆ.

ಇದನ್ನೂ ಓದಿ:ಅಬ್ಬಬ್ಬಾ… ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?

ರಾಮಾಯಣ ಆಧರಿಸಿದ ಈ ಸಿನಿಮಾ ಭಾರತದ ಈವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿರಲಿ ಎನ್ನಲಾಗುತ್ತಿದೆ. ಸಿನಿಮಾವನ್ನು ವಿಶೇಷ ತಂತ್ರಜ್ಞಾನವನ್ನು ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರೀಕರಣಕ್ಕೆ ಮುಂಚೆ ಈ ಸಿನಿಮಾದ ಮುಖ್ಯ ನಟ-ನಟಿಯರಿಗೆ ವಿಶೇಷ ತರಬೇತಿಗಳನ್ನು ಸಹ ಕೊಡಿಸಲಾಗಿದೆ. ಈ ಸಿನಿಮಾದಲ್ಲಿ ನಟ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ಆ ಸುದ್ದಿ ಖಚಿತವಾಗಿಲ್ಲ. ಕೆಲವು ಮೂಲಗಳ ಪ್ರಕಾರ ಈ ಸಿನಿಮಾಕ್ಕೆ ಯಶ್ ಸಹ ನಿರ್ಮಾಪಕರಾಗಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾವನ್ನು ಬಾಲಿವುಡ್​ನ ಜನಪ್ರಿಯ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ನಮಿತ್ ಮಲ್ಹೋತ್ರಾ. ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದೆ. ಮೊದಲ ಭಾಗಕ್ಕೆ 850 ಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಈ ಸಿನಿಮಾಕ್ಕೆ ಹಾಲಿವುಡ್​ನ ಹಲವು ತಂತ್ರಜ್ಞರು ಕೆಲಸ ಮಾಡಲಿದ್ದಾರೆ. ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ಗೆ ಎರಡು ಒಂದು ವರ್ಷ ಮೀಸಲಿಡಲಾಗಿದೆ. ಸಿನಿಮಾದ ಚಿತ್ರೀಕರಣಕ್ಕೆ ಒಂದು ವರ್ಷ ಮೀಸಲಿಡಲಾಗಿದೆ. ಸಿನಿಮಾ 2027ರ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ