AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ

‘ರಾಮಾಯಣ’ ಚಿತ್ರದ ಸೆಟ್​ನಿಂದ ಲೀಕ್ ಆಗಿದ್ದು ಎನ್ನಲಾದ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಆದರೆ ಅವು ನಿಜವಾದ ಫೋಟೋಗಳು ಅಲ್ಲ ಎಂದು ಕಿರುತೆರೆ ನಟ ಆಶಿಶ್ ಶರ್ಮಾ ಅವರು ಹೇಳಿದ್ದಾರೆ. ಎಐ ಮೂಲಕ ಸೃಷ್ಟಿಸಿದ ಫೋಟೋಗಳು ಎಂಬುದನ್ನು ಅವರು ಸಾಕ್ಷಿ ಸಮೇತ ಬಹಿರಂಗ ಪಡಿಸಿದ್ದಾರೆ.

ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ
Ranbir Kapoor, Sai Pallavi
ಮದನ್​ ಕುಮಾರ್​
|

Updated on: Mar 09, 2026 | 7:57 PM

Share

ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಶೂಟಿಂಗ್ ಸೆಟ್‌ನಿಂದ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ (Sai Pallavi) ಅವರ ಫೋಟೋಗಳು ಸೋರಿಕೆಯಾಗಿವೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡಿತ್ತು. ಆದರೆ, ಈ ಫೋಟೋಗಳು ಅಸಲಿಯಲ್ಲ, ಬದಲಾಗಿ ಇವು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ನಕಲಿ ಚಿತ್ರಗಳು ಎಂಬುದು ಈಗ ದೃಢಪಟ್ಟಿದೆ. ಈ ಮೊದಲು ಶೂಟಿಂಗ್ ಸೆಟ್​​ನಿಂದ ನಿಜವಾಗಿಯೂ ಒಂದು ಫೋಟೋ ಲೀಕ್ ಆಗಿತ್ತು. ಆದರೆ ಈ ಬಾರಿ ವೈರಲ್ ಆಗಿರುವ ಫೋಟೋ ನಿಜವಲ್ಲ ಎಂದು ನಟ ಆಶಿಶ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಮತ್ತು ಸಾಯಿ ಪಲ್ಲವಿ ಸೀತೆಯಾಗಿ ರಾಜಪೋಷಾಕಿನಲ್ಲಿ ಮಿಂಚುತ್ತಿರುವ ಕೆಲವು ಫೋಟೋಗಳು ಹರಿದಾಡಿದ್ದವು. ಇದು ಸಿನಿಮಾದಲ್ಲಿ ಬರುವ ವಿವಾಹದ ದೃಶ್ಯದ ಫೋಟೋಗಳು ಎಂದು ಹಲವರು ನಂಬಿದ್ದರು. ಆದರೆ, ಫೋಟೋಗಳ ಉತ್ತಮ ಗುಣಮಟ್ಟವನ್ನು ಕಂಡು ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಲೀಕ್ ಆದ ಫೋಟೋ ಇಷ್ಟು ಕ್ಲಿಯರ್ ಆಗಿರಲ್ಲ ಎಂದು ಕಮೆಂಟ್ ಮಾಡಿದರು.

ಈ ಗೊಂದಲಕ್ಕೆ ತೆರೆ ಎಳೆದವರು ಖ್ಯಾತ ಟಿವಿ ನಟ ಆಶಿಶ್ ಶರ್ಮಾ. 2015-16ರಲ್ಲಿ ಸ್ಟಾರ್ ಪ್ಲಸ್‌ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸೀತಾ ಕೆ ರಾಮ್’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿದ್ದ ಆಶಿಶ್ ಅವರು ವೈರಲ್ ಆಗಿರುವ ಫೋಟೋಗಳು ತಮ್ಮ ಹಳೆಯ ಧಾರಾವಾಹಿಯ ದೃಶ್ಯಗಳೇ ಎಂದು ಸ್ಪಷ್ಟಪಡಿಸಿದ್ದಾರೆ. ‘ಇಲ್ಲಿದೆ ನೋಡಿ ಮತ್ತೊಂದು ಒರಿಜಿನಲ್ ಲೀಕ್ಡ್ ಫೋಟೋ. ಎಐ ತಂತ್ರಜ್ಞಾನಕ್ಕೆ ನನ್ನ ಕೂದಲನ್ನು ಬದಲಾಯಿಸಲು ಸಾಧ್ಯವಾಗಿಲ್ಲ’ ಎಂದು ಆಶಿಶ್ ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ, ತಮ್ಮ ಮುಖಕ್ಕೆ ರಣಬೀರ್ ಮುಖವನ್ನು ಫೇಸ್-ಸ್ವಾಪ್ ಮಾಡಿರುವುದನ್ನು ಸಾಕ್ಷಿ ಸಮೇತ ತೋರಿಸಿದ್ದಾರೆ.

‘ರಾಮಾಯಣ’ ಸಿನಿಮಾಗೆ ನಿತೇಶ್ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಣಬೀರ್ ಕಪೂರ್ (ರಾಮ), ಸಾಯಿ ಪಲ್ಲವಿ (ಸೀತೆ), ರಾಕಿಂಗ್ ಸ್ಟಾರ್ ಯಶ್ (ರಾವಣ), ಸನ್ನಿ ಡಿಯೋಲ್ (ಹನುಮಂತ) ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಇದು ಭಾರತದ ಅತ್ಯಂತ ದುಬಾರಿ ಸಿನಿಮಾ ಎಂದು ಹೇಳಲಾಗುತ್ತಿದೆ. ಆಸ್ಕರ್ ಪ್ರಶಸ್ತಿ ವಿಜೇತ ‘ಪ್ರೈಮ್ ಫೋಕಸ್’ ಸಂಸ್ಥೆಯು ಇದರ ವಿಎಫ್‌ಎಕ್ಸ್ ಜವಾಬ್ದಾರಿ ಹೊತ್ತಿದೆ.

ಇದನ್ನೂ ಓದಿ: ಯಶ್ ನಟನೆಯ ‘ರಾಮಾಯಣ’ ಸಿನಿಮಾಗೆ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಸಾಥ್?

ಈ ಸಿನಿಮಾ ಎರಡು ಪಾರ್ಟ್​​ಗಳಲ್ಲಿ ಬಿಡುಗಡೆ ಆಗಲಿದೆ. ಮೊದಲ ಭಾಗವು 2026ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತೆರೆಕಾಣುವ ಸಾಧ್ಯತೆಯಿದೆ. ಒಟ್ಟಿನಲ್ಲಿ, ಲೀಕ್ ಆಗಿರುವ ಫೋಟೋಗಳನ್ನು ನೋಡಿ ಸಂಭ್ರಮಿಸಿದ್ದ ಅಭಿಮಾನಿಗಳಿಗೆ ಇದು ಕೇವಲ ಫ್ಯಾನ್-ಮೇಡ್ ಎಡಿಟ್ ಎಂಬ ವಿಷಯ ಸ್ವಲ್ಪ ನಿರಾಸೆ ಮೂಡಿಸಿದೆ. ಚಿತ್ರತಂಡ ಅಧಿಕೃತವಾಗಿ ರಣಬೀರ್ ಮತ್ತು ಸಾಯಿ ಪಲ್ಲವಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!