AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​

800 ಕೋಟಿ ರೂಪಾಯಿಗೂ ಅಧಿಕ ಬಜೆಟ್​ ಹಾಕಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ಸಿನಿಮಾದ ಶೂಟಿಂಗ್​ ನಿಂತುಹೋಗಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಬೇಸರ ಆಗಿದೆ. ಶೂಟಿಂಗ್​ ನಿಲ್ಲಲು ಕಾರಣ ಏನು ಎಂಬ ಬಗ್ಗೆ ಇಲ್ಲಿದೆ ವಿವರ..

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​
ಸಾಯಿ ಪಲ್ಲವಿ, ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 21, 2024 | 7:39 PM

Share

ಬಾಲಿವುಡ್​ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ (Ramayana) ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸುತ್ತಿದ್ದಾರೆ. ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ‘ರಾಮಾಯಣ’ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಅಲ್ಲದೇ, ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ ಆಗಿದ್ದವು. ಈಗ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಈ ಸಿನಿಮಾದ ಶೂಟಿಂಗ್​ ನಿಂತಿದೆ. ನಿರ್ಮಾಪಕರು ಕಾಪಿರೈಟ್​ (Copyright) ನಿಯಮವನ್ನು ಉಲ್ಲಂಘನೆ ಮಾಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ನಿತೇಶ್​ ತಿವಾರಿ ಅವರು ‘ರಾಮಾಯಣ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ತಂಡಕ್ಕೆ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯು ನೋಟಿಸ್​ ಕಳಿಸಿತ್ತು. ಅದರ ಅನ್ವಯ ‘ರಾಮಾಯಣ’ ಸಿನಿಮಾದ ನಿರ್ಮಾಪಕರು ಈ ಕಂಪನಿಯ ಜೊತೆ ಮಾಡಿಕೊಂಡ ಒಪ್ಪಂದದ ಪ್ರಕಾರ ಸ್ಕ್ರಿಪ್ಟ್​ಗೆ ಸಂಬಂಧಿಸಿದ ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ನೋಟಿಸ್​ ಕಳಿಸಲಾಗಿತ್ತು.

‘ರಾಮಾಯಣ’ ಚಿತ್ರತಂಡಕ್ಕೆ ನೋಟಿಸ್ ಬಂದ ನಂತರವೂ ಕೆಲವು ದಿನಗಳ ಕಾಲ ಶೂಟಿಂಗ್​ ಮುಂದುವರಿಸಲಾಯಿತು. ಆದರೆ ಕಳೆದ ವಾರದಿಂದ ಶೂಟಿಂಗ್​ ನಿಲ್ಲಿಸಲಾಗಿದೆ. ಕಾನೂನಿನ ತೊಡಕುಗಳು ಬಗೆಹರಿದ ನಂತರವೇ ಶೂಟಿಂಗ್​ ಮುಂದುವರಿಸಲು ತೀರ್ಮಾನಿಸಲಾಗಿದೆ ಅಂತ ಮೂಲಗಳು ಹೇಳಿರುವುದಾಗಿ ಬಾಲಿವುಡ್​ ಹಂಗಾಮಾ ವರದಿ ಮಾಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಕ್ಕೆ ಹತ್ತು ಪಟ್ಟು ಹೆಚ್ಚು ಸಂಭಾವನೆ ಪಡೆದ ಸಾಯಿ ಪಲ್ಲವಿ

ಈ ಸಿನಿಮಾದಲ್ಲಿ ಅನೇಕ ಸ್ಟಾರ್​ ಕಲಾವಿದರ ನಟಿಸುತ್ತಿದ್ದಾರೆ. ಶೂಟಿಂಗ್​ಗೆ ಸಂಬಂಧಿಸಿದಂತೆ ಈ ಮೊದಲೇ ಡೇಟ್ಸ್​ ಬಗ್ಗೆ ಮಾತುಕಥೆ ಆಗಿರುತ್ತದೆ. ಆದರೆ ಈಗ ಚಿತ್ರೀಕರಣ ನಿಂತಿರುವುದರಿಂದ ಎಲ್ಲ ಡೇಟ್ಸ್​ ಬದಲಾವಣೆ ಆಗಲಿದೆ. ಇದರಿಂದ ಕಲಾವಿದರಿಗೆ ಮತ್ತು ಚಿತ್ರದ ನಿರ್ಮಾಪಕರಿಗೆ ಖಂಡಿತಾ ತೊಂದರೆ ಆಗಲಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ, ಯಶ್​, ಸನ್ನಿ ಡಿಯೋಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ